ಮಂಗಳೂರು ವಿವಿ ಕಾಲೇಜು: ಪ್ರಥಮ ವರ್ಷದ ವಿದ್ಯಾಥಿಗಳ ಪರಿಚಯ ಕಾರ್ಯಕ್ರಮ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ವಿಭಾಗಕ್ಕೆ ಸ್ವಾಗತಿಸುವ ಪರಿಚಯ 2022 ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಅನಸೂಯ ರೈ ತಮ್ಮ ಮಾತಿನಲ್ಲಿ ಪುರಾತತ್ವ ಶಾಸ್ತ್ರ ವಿಭಾಗದ ಮಹತ್ವ ಮತ್ತು ಅದರಿಂದ ಭವಿಷ್ಯಕ್ಕೆ ಆಗಬಹುದಾದಂತಹ ಅನುಕೂಲಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನಲ್ಲಿ ಭವಿಷ್ಯದ ಎರಡು ವರ್ಷಗಳು ಆಶಾದಾಯಕ ಮತ್ತು ಜ್ಞಾನದಿಂದ ಕೂಡಿರಲಿ ಎಂದು ಶುಭಹಾರೈಸಿದರು. ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಗಣಪತಿ ಗೌಡ ಅವರು ವಿಭಾಗದ ವಿದ್ಯಾರ್ಥಿಗಳಿಗೆ ಶುಭಕೋರಿದರು.
ವಿಭಾಗದ ಸಂಯೋಜಕ ಡಾ. ಕುಮಾರಸ್ವಾಮಿ ಎಂ , ವಿಭಾಗದ ಹಿರಿಯ ಪ್ರಾಧ್ಯಾಪಿಕೆ ಡಾ. ಮೀನಾಕ್ಷಿ ಎಂ. ಎಂ, ಉಪನ್ಯಾಸಕರಾದ ರತನ್, ರಂಜಿತ್, ಸಿಬ್ಬಂದಿ ವಿನೀಶ್ ಪಿ ಜಿ, ಡಿದ್ವಿತೀಯ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
Next Story