Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾವೇರಿ ಸಾಹಿತ್ಯ ಸಮ್ಮೇಳನದ...

ಹಾವೇರಿ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಿಂದ ಹಿಂದೆ ಸರಿದ ಮತ್ತೊಬ್ಬ ಕವಿ ರಮೇಶ್ ಅರೋಲಿ‌

'ವಾದ್ಯಗಳನ್ನು ಬಳಸುವಂತಿಲ್ಲ, ಕವಿತೆ ಹಾಡುವಂತಿಲ್ಲ' ಎಂಬ ಕಸಾಪ ನಿರ್ಬಂಧಕ್ಕೆ ಖಂಡನೆ

31 Dec 2022 12:34 PM IST
share
ಹಾವೇರಿ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಿಂದ ಹಿಂದೆ ಸರಿದ ಮತ್ತೊಬ್ಬ ಕವಿ ರಮೇಶ್ ಅರೋಲಿ‌
'ವಾದ್ಯಗಳನ್ನು ಬಳಸುವಂತಿಲ್ಲ, ಕವಿತೆ ಹಾಡುವಂತಿಲ್ಲ' ಎಂಬ ಕಸಾಪ ನಿರ್ಬಂಧಕ್ಕೆ ಖಂಡನೆ

ಹಾವೇರಿ, ಡಿ.31: ಜ.6ರಿಂದ ಜ.8ರವರೆಗೆ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಯಲ್ಲಿ 'ಕವಿತೆಗಳನ್ನು ವಾಚಿಸಬೇಕೇ ಹೊರತು ಹಾಡುವಂತಿಲ್ಲ' ಎಂಬ ಕಸಾಪ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿರುವ ರಾಯಚೂರು ಮೂಲದ ಕವಿ ಡಾ.ರಮೇಶ್‌ ಅರೋಲಿ ಅವರು ಸಮ್ಮೇಳನದ ಕವಿಗೋಷ್ಠಿಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. 

ಈ ಸಂಬಂಧ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಮತ್ತು ಸಂಘಟಕರಿಗೆ ಪತ್ರ ಬರೆದಿರುವ ಅವರು, ''ಯಾವುದೇ ಕಾರಣಕ್ಕೂ ವಾದ್ಯಗಳನ್ನು ಬಳಸುವಂತಿಲ್ಲ ಹಾಗೂ ಕವಿತೆಗಳನ್ನು ವಾಚಿಸಬೇಕೇ ಹೊರತು ಹಾಡುವಂತಿಲ್ಲ" ಎಂಬ ನಿಯಮ ಹಾಕಿದ್ದೀರಿ. ಯಾವುದೇ ವಾದ್ಯ ಬಳಸದೆ ಕವಿತೆಯನ್ನು ನಾನು ಹಾಡ ಬಯಸುತ್ತೇನೆ. ಬಹುತೇಕ ನನ್ನ ಕವಿತೆಗಳು ಹಾಡುಗವಿತೆಯಾಗಿದ್ದು, ಲಯದಿಂದ ಕೂಡಿವೆ. ಕೇವಲ ವಾಚನಕ್ಕೆ ಸೀಮಿತಗೊಳಿಸಿ, ಕವಿತೆ ಹಾಡುವ ನನ್ನ ಸ್ವಾತಂತ್ರ್ಯವನ್ನು ಮಿತಿಗೊಳಿಸಲಾಗಿದೆ. ಹೀಗಾಗಿ ನಾನು ಗೋಷ್ಠಿಗೆ ಬರುವುದಿಲ್ಲ'' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ... ತಾರತಮ್ಯ ಮಾಡಿದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲ್ಲ: ಎಚ್. ಆರ್ ಸುಜಾತ

''2016ರಲ್ಲಿ ನಡೆದ ರಾಯಚೂರಿನಲ್ಲಿ ನಡೆದ 82ನೇ ಅಕ್ಷರ ಜಾತ್ರೆಯ ಪ್ರಧಾನ ಕವಿಗೋಷ್ಠಿಯಲ್ಲಿ ನಾನು ನನ್ನ ಕವಿತೆಯನ್ನು ಹಾಡಿದ್ದೆ. ಇದಕ್ಕೆ ಭಾರಿ ಜನಮೆಚ್ಚುಗೆ ಸಿಕ್ಕಿತ್ತು. ಅಂಥದ್ದರಲ್ಲಿ ಪರಿಷತ್ತು ಕವಿತೆ ಹಾಡುವುದಕ್ಕೆ ನಿರ್ಬಂಧ ಹಾಕಿದ್ದು ಸರಿಯಲ್ಲ'' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

''ಶಿಶುನಾಳ ಷರೀಫರು, ದ.ರಾ.ಬೇಂದ್ರೆ, ಕೆ.ಎಸ್.ನರಸಿಂಹಸ್ವಾಮಿ, ಕೆ.ಎಸ್‌.ನಿಸಾರ್‌ ಅಹಮದ್‌, ಲಕ್ಷ್ಮೀನಾರಾಯಣ ಭಟ್ಟ ರು,  ಕಂಬಾರರು ಅಷ್ಟೇ ಅಲ್ಲದೆ ಸಮ್ಮೇಳನದ ಅಧ್ಯಕ್ಷರು ಸಹ  ಹಾಡುಗಳ ಮೂಲಕವೇ ಕನ್ನಡಿಗರ ಮನವನ್ನು ತಲುಪಿದ್ದು. ಅನೇಕ ಹಿರಿಯರು ಕಾವ್ಯವನ್ನು ಕಟ್ಟಿದ್ದು ಹಾಡಿನ ರೂಪದಲ್ಲಿ. ಇಂದು ಆ ಹಾಡುಗವಿತೆಯನ್ನು ನಿಗದಿತ ಸಮಯದಲ್ಲಿ ಹಾಡಲು ಪರಿಷತ್ತು ಅನುಮತಿ ಇಲ್ಲದೇ, ಕೇವಲ ವಾಚನ ಕ್ಕೆ ಮಿತಿಗೊಳಿಸಿದ್ದು ಸರಿಯಲ್ಲ ಅನಿಸಿ ನನ್ನ ಭಾಗವಹಿಸುವಿಕೆಯನ್ನು ಹಿಂಪಡಿಯುತ್ತಿದ್ದೇನೆ'' ಎಂದು ಕವಿ ರಮೇಶ್ ಅರೋಲಿ‌ ಖಚಿತಪಡಿಸಿದ್ದಾರೆ.

share
Next Story
X