ರಾಯಚೂರು | ಶಸ್ತ್ರಚಿಕಿತ್ಸೆ ವೇಳೆ ಯುವತಿ ಸಾವು: ಆರೋಪ
ಆಸ್ಪತ್ರೆ ಎದುರು ಮೃತದೇಹವಿಟ್ಟು ಪೋಷಕರ ಪ್ರತಿಭಟನೆ
ಆಸ್ಪತ್ರೆ ಎದುರು ಮೃತದೇಹವಿಟ್ಟು ಪೋಷಕರ ಪ್ರತಿಭಟನೆ
ರಾಯಚೂರು, ಡಿ.31: : ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಮೂಗಿನ ಶಸ್ತ್ರಚಿಕಿತ್ಸೆಗೆಂದು ದಾಖಲಾಗಿದ್ದ ಯುವತಿ ಮೃತಪಟ್ಟಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ನಗರದ ದೇವಿ ನಗರದ ನಿವಾಸಿ ರಾಜೇಶ್ವರಿ (18) ಮೃತ ಯುವತಿ ಎಂದು ತಿಳಿದು ಬಂದಿದೆ.
ಆಸ್ಪತ್ರೆ ಎದುರು ಪ್ರತಿಭಟನೆ: ಮೂಗಿನ ಸಮಸ್ಯೆ ಎಂದು ರಿಮ್ಸ್ ಆಸ್ಪತ್ರೆಗೆ ದಾಖಲಾದ ಬಳಿಕ ಯುವತಿಗೆ ಶನಿವಾರ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರೆನ್ನಲಾಗಿದ್ದು, ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದಲೇ ನಮ್ಮ ಮಗಳು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ರಿಮ್ಸ್ ಆಸ್ಪತ್ರೆಯ ಎದುರು ಶವವಿಟ್ಟು ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
ಮೃತ ಯುವತಿಯ ತಾಯಿ ನೀಡಿದ ದೂರಿನನ್ವಯ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಧಾರವಾಡ: ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ
Next Story