Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ:...

ಕರಾವಳಿ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ: ಲಾಲಾಜಿ ಮೆಂಡನ್ ಅಲ್ ಅಝ್‍ಹರ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಂಭ್ರಮ

31 Dec 2022 8:50 PM IST
share
ಕರಾವಳಿ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ: ಲಾಲಾಜಿ ಮೆಂಡನ್ ಅಲ್ ಅಝ್‍ಹರ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಂಭ್ರಮ

ಪಡುಬಿದ್ರಿ: ರಾಜ್ಯದ ಕರಾವಳಿ ಜಿಲ್ಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ರಾಜ್ಯದಲ್ಲೇ ಶೈಕ್ಷಣಿಕ ಕ್ರಾಂತಿಯನ್ನು ಮಾಡಿದ ಜಿಲ್ಲೆಗಳಾಗಿದೆ ಎಂದು ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದರು.

ಶನಿವಾರ ಹೆಜಮಾಡಿಯ ಅಲ್ ಅಝ್‍ಹರ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಅವರು, ಇಲ್ಲಿನ ಅಲ್‍ಅಝ್‍ಹರ್ ಶಾಲೆಯೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಉಚ್ಛ್ರಾಯ ಸ್ಥಿತಿಯನ್ನು ತಲುಪಿದೆ. ಉತ್ತಮ ಶಿಕ್ಷಕರೂ ಇಲ್ಲಿರುವುದಾಗಿ  ಎಂದರು. 

ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಮಾತನಾಡಿ, ಸರಕಾರದ ಸಾಚಾರ್ ಸಮಿತಿಯ ವರದಿಯ ಬಳಿಕ ಮುಸ್ಲಿಂ ಸಮದಾಯದ ಶೈಕ್ಷಣಿಕ ಅಭಿವೃದ್ಧಿಗಾಗಿ ಅನೇಕ ಮುಸಲ್ಮಾನ್ ಧುರೀಣರು ಜಿಲ್ಲೆಯ ವಿವಿದೆಡೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿ ಉಭಯ ಜಿಲ್ಲೆಗಳಲ್ಲಿ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದಾರೆ ಎಂದರು.

ಸಮಾರಂಭದಲ್ಲಿ ಶಾಲೆಯಲ್ಲಿ ಉತ್ತಮ ಶಿಕ್ಷಕಿಯಾಗಿ ವಿಶ್ರಾಂತರಾಗಿರುವ ವಿಜಯಾ ಶೆಣೈ, ವಿಕಲಾಂಗ ಉದ್ಯಮಿ ಆಸೀಫ್ ಫಕ್ರುದ್ದೀನ್ ಹಾಗೂ ಮುದ್ರಣಾಲಯವನ್ನು ನಡೆಸುತ್ತಿರುವ ಅಂಧ ಉದ್ಯಮಿ ಮಂಜುನಾಥ ಗಡಿಯಾರ್ ಅವರನ್ನು ಸಮ್ಮಾನಿಸಲಾಯಿತು.

ಪ್ರತಿಭಾನ್ವಿತ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯಿನಿ, ಶಿಕ್ಷಕೇತರ ಸಿಬಂದಿಗಳನ್ನು ಗೌರವಿಸಲಾಯಿತು. ಕನ್ನಂಗಾರ್ ಶೈಕ್ಷಣಿಕ ಟ್ರಸ್ಟ್‍ನ ಅಧ್ಯಕ್ಷ ಎಚ್. ಬಿ. ಮೊಹಮ್ಮದ್ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ಸಂಚಾಲಕ ಕೆ. ಎಸ್. ಶೇಖಬ್ಬ, ಹೆಜಮಾಡಿ ಗ್ರಾ. ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಮಂಗಳೂರು ವಿವಿಯ ಎಸೋಸಿಯೇಟ್ ಪ್ರೊ.  ಡಾ| ಅಬೂಬಕರ್ ಸಿದ್ದೀಕ್, ಕಾಂಗ್ರೆಸ್ ಕೋ ಆರ್ಡಿನೇಟರ್ ಅಬ್ದುಲ್ ಅಝೀಝ್ ಹೆಜಮಾಡಿ, ಖಾಲೀದ್ ತಣ್ಣೀರುಬಾವಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಸದಸ್ಯ ರಮೀಝ್ ಹುಸೈನ್, ಅಬ್ದುಲ್ ರಝಾಕ್ ಕೋಟೆ, ಸಯ್ಯದ್ ಅಲಿ ಕೋಟೆ,  ಹಂಝ ಅಹಮ್ಮದ್, ವಿದ್ಯಾರ್ಥಿ ನಾಯಕ ಮೊಹಮ್ಮದ್ ಶಿಹಾಬ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಯ್ ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಪ್ರಾಂಶುಪಾಲೆ ಶಾಹೀನ್ ಸ್ವಾಗತಿಸಿದರು. ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಸುಚಿತ್ರಾ ವಂದಿಸಿದರು. 

ನಾಲ್ಕು ದಿನಗಳ ವಿವಿಧ ಕಾರ್ಯಕ್ರಮಗಳಲ್ಲಿ ಅಂಧ ಕಲಾವಿದರಿಂದ ಸಂಗೀತ ರಸಮಂಜರಿ, ರಕ್ಷಕರಿಂದ ಆಹಾರೋತ್ಸವ, ಹಳೆವಿದ್ಯಾರ್ಥಿಗಳಿಂದ 'ನಾ ಕಲಿತ ಶಾಲೆಯಲ್ಲಿಒಂದು ದಿನ' ಶಿಕ್ಷಕಿಯರಿಂದ ಮನೋರಂಜನಾ ಕಾರ್ಯಕ್ರಮ, ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಮಂಗಳೂರು ಡಾನ್ಸ್ ಅಕಾಡೆಮಿಯಿಂದ ನೃತ್ಯ ವೈಭವ, ವಿಜ್ಞಾನ, ಗಣಿತ, ಸಮಾಜ, ಕಲಾ ವಿಭಾಗದ ಪ್ರಯೋಗಗಳ ಪ್ರದರ್ಶನ, ನಾಲೆಡ್ಜ್‍ಎಕ್ಸ್‍ಪೆÇೀ ಮತ್ತು ಊರಿನ ಇಬ್ಬರು ಹಿರಿಯ ಸಾಧಕರಿಗೆ ಹಾಗೂ ಹಿರಿಯ ಶಿಕ್ಷಕರಿಗೆ ಸನ್ಮಾನ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಿತು. 

share
Next Story
X