Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ನ ಆಕ್ರಮಣದ ಕುರಿತ ನಿರ್ಣಯ...

ಇಸ್ರೇಲ್‌ನ ಆಕ್ರಮಣದ ಕುರಿತ ನಿರ್ಣಯ ಅಂಗೀಕರಿಸಿದ ವಿಶ್ವಸಂಸ್ಥೆ: ಮತದಾನದಿಂದ ದೂರವುಳಿದ ಭಾರತ

31 Dec 2022 4:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಸ್ರೇಲ್‌ನ ಆಕ್ರಮಣದ ಕುರಿತ ನಿರ್ಣಯ ಅಂಗೀಕರಿಸಿದ ವಿಶ್ವಸಂಸ್ಥೆ: ಮತದಾನದಿಂದ ದೂರವುಳಿದ ಭಾರತ

ವಿಶ್ವಸಂಸ್ಥೆ, ಡಿ.31: ‘ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಫೆಲಸ್ತೀನ್ ಪ್ರಾಂತದಲ್ಲಿ ಫೆಲಸ್ತೀನ್ ಜನರ ಮಾನವ ಹಕ್ಕುಗಳ ಮೇಲೆ ಪರಿಣಾಮ ಬೀರುವ ಇಸ್ರೇಲ್ ನ ಕಾರ್ಯವಿಧಾನ’ ಎಂಬ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಶುಕ್ರವಾರ ಅಂಗೀಕರಿಸಿದೆ.

ನಿರ್ಣಯದ ಪರ 87, ವಿರುದ್ಧ 26 ದೇಶಗಳು ಮತ ಹಾಕಿದರೆ ಭಾರತ ಸೇರಿದಂತೆ 53 ದೇಶಗಳು ಮತದಾನದಿಂದ ದೂರ ಉಳಿದಿದೆ. ಇಸ್ರೇಲ್‌ನ ದೀರ್ಘಕಾಲದ ಆಕ್ರಮಣ ಮತ್ತು ಫೆಲಸ್ತೀನ್ ಭೂಪ್ರದೇಶದ ಸ್ವಾಧೀನದ ಕಾನೂನು ಕ್ರಮಗಳ ಬಗ್ಗೆ ಅಂತರಾಷ್ಟ್ರೀಯ ನ್ಯಾಯಾಲಯದ ಅಭಿಪ್ರಾಯ ಕೇಳುವ ನಿರ್ಣಯ ಇದಾಗಿದೆ.

‘ಫೆಲಸ್ತೀನ್ ಜನರ ಸ್ವ-ನಿರ್ಣಯದ ಹಕ್ಕನ್ನು ಇಸ್ರೇಲ್ ಉಲ್ಲಂಘಿಸುತ್ತಿರುವುದರಿಂದ ಉಂಟಾಗುವ ಕಾನೂನು ಪರಿಣಾಮಗಳು, ಆಕ್ರಮಿತ ಪ್ರದೇಶದಲ್ಲಿ 1967ರಿಂದಲೂ ಮುಂದುವರಿದಿರುವ ಇಸ್ರೇಲ್‌ನ ದೀರ್ಘಕಾಲದ ಸ್ವಾಧೀನತೆ, ಅಲ್ಲಿ ವಸಾಹತು ಸ್ಥಾಪನೆ, ಜೆರುಸಲೇಂನ ಪವಿತ್ರ ನಗರದ ಜನಸಂಖ್ಯಾ ಸಂಯೋಜನೆ, ಸ್ವರೂಪ ಮತ್ತು ಸ್ಥಿತಿಯನ್ನು ಬದಲಾಯಿಸುವ ಗುರಿಯನ್ನು ಹೊಂದಿರುವ ಕ್ರಮಗಳು, ಸಂಬಂಧಿತ ತಾರತಮ್ಯದ ಕಾನೂನು ಕ್ರಮಗಳನ್ನು ಅಳವಡಿಸಿಕೊಳ್ಳುವುದರಿಂದ ಉಂಟಾಗುವ ಕಾನೂನು ಪರಿಣಾಮಗಳ ಬಗ್ಗೆ’ ಅಂತರಾಷ್ಟ್ರೀಯ ನ್ಯಾಯಾಲಯದ ಅಭಿಪ್ರಾಯ ಕೇಳಲು ನಿರ್ಧರಿಸಲಾಗಿದೆ.

ಇಸ್ರೇಲ್‌ನ ನೀತಿಗಳು ಮತ್ತು ಆಚರಣೆಗಳು ಆಕ್ರಮಿತ ಪ್ರದೇಶದ ಕಾನೂನು ಸ್ಥಿತಿಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ಈ ಸ್ಥಿತಿಯಿಂದ ಎಲ್ಲಾ ದೇಶಗಳು ಹಾಗೂ ವಿಶ್ವಸಂಸ್ಥೆಗೆ ಉಂಟಾಗುವ ಕಾನೂನು ಪರಿಣಾಮಗಳೇನು ಎಂಬ ಬಗ್ಗೆಯೂ ಸಲಹೆ ನೀಡುವಂತೆ ನಿರ್ಣಯದಲ್ಲಿ ಕೋರಲಾಗಿದೆ. ಅಮೆರಿಕ, ಇಸ್ರೇಲ್ ಸಹಿತ 26 ದೇಶಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿದರೆ, ಭಾರತ, ಬ್ರೆಝಿಲ್, ಜಪಾನ್, ಮ್ಯಾನ್ಮಾರ್, ಫ್ರಾನ್ಸ್ ಸೇರಿದಂತೆ 53 ದೇಶಗಳು ಮತದಾನದಿಂದ ದೂರ ಉಳಿದಿವೆ.

ಮತದಾನಕ್ಕೂ ಮೊದಲು ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಇಸ್ರೇಲ್ ರಾಯಭಾರಿ ಗಿಲಾಡ್ ಎರ್ಡನ್ ‘ ಇದೊಂದು ಅತಿರೇಕದ ನಿರ್ಣಯವಾಗಿದ್ದು ಅಂತರಾಷ್ಟ್ರೀಯ ನ್ಯಾಯಾಲಯದ ಸಲಹೆ, ಅಭಿಪ್ರಾಯಕ್ಕೆ ಕರೆ ನೀಡುವುದು ವಿಶ್ವಸಂಸ್ಥೆ ಹಾಗೂ ನಿರ್ಣಯವನ್ನು ಬೆಂಬಲಿಸಿದ ಎಲ್ಲಾ ದೇಶಗಳಿಗೂ ನೈತಿಕ ಕಳಂಕವಾಗಿದೆ. ತಮ್ಮ ತಾಯ್ನೆಡಿನಲ್ಲಿರುವ ಯೆಹೂದಿ ಜನರನ್ನು ‘ಆಕ್ರಮಣಕಾರರು’ ಎಂದು ಯಾವುದೇ ಅಂತರಾಷ್ಟ್ರೀಯ ಸಂಸ್ಥೆ ನಿರ್ಧರಿಸಲು ಸಾಧ್ಯವಿಲ್ಲ.ನೈತಿಕವಾಗಿ ದಿವಾಳಿಯಾದ ಮತ್ತು ರಾಜಕೀಯಗೊಳಿಸಲ್ಪಟ್ಟ ವಿಶ್ವಸಂಸ್ಥೆಯಿಂದ ಆದೇಶವನ್ನು ಪಡೆಯುವ ನ್ಯಾಯಾಂಗ ಸಂಸ್ಥೆಯ ಯಾವುದೇ ನಿರ್ಧಾರವು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ’ ಎಂದು ಹೇಳಿದರು.

ಮತದಾನದ ಬಳಿಕ ಪ್ರತಿಕ್ರಿಯಿಸಿದ ವಿಶ್ವ ಯೆಹೂದಿ ಕಾಂಗ್ರೆಸ್ನ ಅಧ್ಯಕ್ಷ ರೊನಾಲ್ಡ್ ಲಾಡರ್ ‘ ವಿಶ್ವಸಂಸ್ಥೆಯಲ್ಲಿನ ಮತದಾನವು ಇಸ್ರೇಲ್ ವಿರುದ್ಧ ನಡೆಯುತ್ತಿರುವ ಪಕ್ಷಪಾತದ ಮಾದರಿಯನ್ನು ತೋರಿಸುತ್ತದೆ’ ಎಂದರು.
 
ವಿಶ್ವಸಂಸ್ಥೆಯ ನಿರ್ಣಯಕ್ಕೆ ಫೆಲಸ್ತೀನೀಯರ ಸ್ವಾಗತ
 
ಫೆಲಸ್ತೀನೀಯರ ಪ್ರದೇಶಗಳನ್ನು ಇಸ್ರೇಲ್ ಆಕ್ರಮಿಸಿಕೊಂಡಿರುವುದಕ್ಕೆ ಸಂಬಂಧಿಸಿದ ಕಾನೂನು ಪರಿಣಾಮಗಳ ಬಗ್ಗೆ ಅಂತರಾಷ್ಟ್ರೀಯ ನ್ಯಾಯಾಲಯದ(ಐಸಿಜೆ) ಅಭಿಪ್ರಾಯ ಕೇಳುವ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮತಕ್ಕೆ ಹಾಕಿರುವುದನ್ನು ಸ್ವಾಗತಿಸಿರುವ ಫೆಲಸ್ತೀನ್ ಮುಖಂಡರು, ಇದು ತಮಗೆ ದೊರೆತ ಗೆಲುವಾಗಿದೆ ಎಂದು ಹೇಳಿದ್ದಾರೆ.

‘ಇಸ್ರೇಲ್ ಕಾನೂನಿಗೆ ಒಳಪಟ್ಟಿರುವ ದೇಶವಾಗಿರಲು ಮತ್ತು ನಮ್ಮ ಜನರ ವಿರುದ್ಧ ನಡೆಯುತ್ತಿರುವ ಅಪರಾಧಗಳಿಗೆ ಜವಾಬ್ದಾರರಾಗಲು ಸಮಯ ಬಂದಿದೆ’ ಎಂದು ಫೆಲಸ್ತೀನ್ ಅಧ್ಯಕ್ಷರ ವಕ್ತಾರ ನಬೀ ಅಬು ರುಡಿನೆಹ್ ಹೇಳಿದ್ದಾರೆ. ವಿಶ್ವಸಂಸ್ಥೆಯಲ್ಲಿನ ಮತದಾನ ಇಸ್ರೇಲ್ನ ರಾಜತಾಂತ್ರಿಕ ಗೆಲುವನ್ನು ಪ್ರತಿಬಿಂಬಿಸುತ್ತದೆ ಎಂದು ಹಿರಿಯ ಫೆಲಸ್ತೀನ್ ಅಧಿಕಾರಿ ಹುಸೇನ್ ಅಲ್ಶೇಖ್ ಟ್ವೀಟ್ ಮಾಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X