Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಂಬೇಡ್ಕರ್ ಬದುಕಿನ ಸುತ್ತಮುತ್ತ...

ಅಂಬೇಡ್ಕರ್ ಬದುಕಿನ ಸುತ್ತಮುತ್ತ...

Ashwani12 March 2023 12:05 AM IST
share
ಅಂಬೇಡ್ಕರ್ ಬದುಕಿನ ಸುತ್ತಮುತ್ತ...

ಡಾ.ಎಂ. ವೆಂಕಟಸ್ವಾಮಿ


ಸುಳ್ಳನ್ನು ಸಾವಿರ ಸಲ ಹೇಳಿದರೆ ಸತ್ಯವಾಗುತ್ತದೆ ಎನ್ನುವ ಈ ಕಾಲದಲ್ಲಿ ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ಅವರು ಹಾಕಿಕೊಟ್ಟ ಸಾಮಾಜಿಕ ಬುನಾದಿಯ ಬಗ್ಗೆ ಪದೇಪದೇ ಹೇಳುತ್ತಲೇ ಇರಬೇಕಾದ ಪರಿಸ್ಥಿತಿ ಈಗ ನಿರ್ಮಾಣವಾಗಿಬಿಟ್ಟಿದೆ. ಪ್ರೊ. ಎಚ್.ಟಿ.ಪೋತೆ ಅವರು ಬರೆದಿರುವ ‘ಅಂಬೇಡ್ಕರ್ ಮತ್ತು...’ 290 ಪುಟಗಳ ಈ ಕೃತಿಯಲ್ಲಿ 25 ಲೇಖನಗಳಿದ್ದು, ಅಂಬೇಡ್ಕರ್ ಅವರ ವ್ಯಕ್ತಿ ಚಿತ್ರಣ, ಅವರ ಹೋರಾಟ ಮತ್ತು ಸಮಾಜಕ್ಕಾಗಿ ಅವರು ನಡೆಸಿದ ಅವಿರತ ಆಂದೋಲನಗಳು ಮತ್ತು ದೇಶದ ಅಭಿವೃದ್ಧಿಗೆ ಶ್ರಮಿಸಿದ ವಿಷಯಗಳ ಬಗ್ಗೆ ಚಿತ್ರಿಸಲಾಗಿದೆ. ಅಂಬೇಡ್ಕರ್ ಅವರ ತಂದೆ ರಾಮ್‌ಜಿ ಸಕ್ಪಾಲ್, ರಮಾಬಾಯಿ, ಸವಿತಾ ಅಂಬೇಡ್ಕರ್, ಇವರ ಜೊತೆಗಿನ ಸಂಬಂಧಗಳ ಚಿತ್ರಣ, ಅಂಬೇಡ್ಕರ್ ಅವರ ಮೂಲಕ ಹುಟ್ಟಿಕೊಂಡ ದಲಿತ ಚಳವಳಿ, ಕೋಮುಸೌಹಾರ್ದತೆ, ಸ್ತ್ರೀವಾದಿ ದೃಷ್ಟಿ ಮತ್ತು ಅಂಬೇಡ್ಕರ್ ಜೀವನದ ಕೆಲವು ವಿಶೇಷ ಘಟನೆಗಳನ್ನು ಚಿತ್ರಿಸಲಾಗಿದೆ. ಅಂಬೇಡ್ಕರ್ ಇಲ್ಲದೆ ಈ ಹೊತ್ತು, ದಲಿತಲೋಕ, ಮಾನವೀಯ ಮೌಲ್ಯ, ನೈತಿಕತೆ, ಅವರ ಪುಸ್ತಕ ಪ್ರೀತಿ, ಅವರನ್ನು ಪ್ರಭಾವಿಸಿದವರು ಹೀಗೆ ಅನೇಕ ವಿಷಯಗಳನ್ನು ಪುಸ್ತಕದಲ್ಲಿ ಕಟ್ಟಿಕೊಡಲಾಗಿದೆ.

ಕೃತಿಯಲ್ಲಿ ಅಂಬೇಡ್ಕರ್ ಅವರ ಈ ಮಾತುಗಳು ಇಲ್ಲಿ ಉಲ್ಲೇಖನಿಯ: ‘‘ಸ್ವಾಭಿಮಾನದಿಂದ ಈ ಜಗತ್ತಿನಲ್ಲಿ ಬದುಕುವುದನ್ನು ಕಲಿಯಿರಿ. ಈ ಪ್ರಪಂಚದಲ್ಲಿ ಏನಾದರೂ ಸಾಧಿಸಬೇಕು ಎನ್ನುವ ಅಭಿಲಾಷೆಯನ್ನು ಹೊಂದಿರಿ, ಶ್ರಮ ಪಡುವವರನ್ನು ಇದೊಂದೇ ಮೇಲೆತ್ತುತ್ತದೆ. ವಿಶ್ವದಲ್ಲಿ ನಾನು ಮೇಲೆ ಬರಲು ಸಾಧ್ಯವೇ ಇಲ್ಲ ಎಂಬ ಕೀಳರಿಮೆಯನ್ನು ಬಿಟ್ಟುಬಿಡಿ, ಕಾಲ ಬದಲಾಗಿದೆ, ಹೊಸ ಯುಗ ಆರಂಭವಾಗಿದೆ. ಪ್ರತಿಯೊಬ್ಬರೂ ಎಲ್ಲಾ ಕಡೆ, ಎಲ್ಲಾ ಉದ್ಯಮಗಳಲ್ಲೂ ರಾಜಕೀಯದಲ್ಲಿ, ಶಾಸನ ಸಭೆಗಳಲ್ಲಿ ಭಾಗವಹಿಸುವ ಅವಕಾಶಗಳು ಸೃಷ್ಟಿಯಾಗಿರುವುದರಿಂದ, ತಾವು ಸಾಧಿಸಬೇಕಾದದ್ದನ್ನು ಸಾಧಿಸುವ ಸಾಧ್ಯತೆಗಳು ಹೆಚ್ಚಾಗಿವೆ...’’ ಪ್ರೊ.ಎಚ್.ಟಿ. ಪೋತೆ ನಾಡಿನ ಸಂವೇದನಾಶೀಲ ಕಥೆಗಾರ, ಕಾದಂಬರಿಕಾರ ಅನುವಾದಕ, ಚಿಂತಕ ಜನಪದ ವಿದ್ವಾಂಸ ಹಾಗೂ ಸಂಶೋಧಕರಾಗಿದ್ದಾರೆ. ಇವರ ಅನೇಕ ಕೃತಿಗಳಿಗೆ ಹಲವಾರು ಪ್ರಶಸ್ತಿಗಳು ಸಂದಿವೆ. ಇವರ ‘ಅಂಬೇಡ್ಕರ್ ಭಾರತ’, ಮತ್ತು ‘ಬಯಲೆಂಬೋ ಬಯಲು’ ಕೃತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿಗಳು ಲಭಿಸಿವೆ. ಇವರ ಕೃತಿ ‘ಅಂಬೇಡ್ಕರ್ ಮತ್ತು...’ ಇನ್ನೊಂದು ರೀತಿಯ ಸಂಶೋಧನೆಯಾಗಿದ್ದು ಓದಲೇಬೇಕಾದ ಕೃತಿಯಾಗಿದೆ.


ಕೃತಿ: ಅಂಬೇಡ್ಕರ್ ಮತ್ತು...
(ಅಂಬೇಡ್ಕರ್ ಕುರಿತ ಪುಸ್ತಕ)
ಲೇಖಕರು: ಪ್ರೊ.ಎಚ್.ಟಿ.ಪೋತೆ

ಬೆಲೆ: 300 ರೂ

ಪ್ರಕಾಶಕರು: ಸಪ್ನಾ ಬುಕ್ ಹೌಸ್

share
Ashwani
Ashwani
Next Story
X