Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ನಾಶಕ್ಕೆ ಪಾಶ್ಚಿಮಾತ್ಯರಿಂದ...

ರಶ್ಯ ನಾಶಕ್ಕೆ ಪಾಶ್ಚಿಮಾತ್ಯರಿಂದ ಉಕ್ರೇನ್ ಬಳಕೆ: ಪುಟಿನ್

1 Jan 2023 11:48 PM IST
share
ರಶ್ಯ ನಾಶಕ್ಕೆ ಪಾಶ್ಚಿಮಾತ್ಯರಿಂದ ಉಕ್ರೇನ್ ಬಳಕೆ: ಪುಟಿನ್

ಮಾಸ್ಕೊ, ಜ.1: ರಶ್ಯಾವನ್ನು ನಾಶಗೊಳಿಸಲು ಉಕ್ರೇನ್ ಅನ್ನು ಸಾಧನವಾಗಿ ಬಳಸುವ ಪಶ್ಚಿಮದ ಪ್ರಯತ್ನಗಳಿಗೆ ತಮ್ಮ ದೇಶ ಎಂದಿಗೂ ಮಣಿಯುವುದಿಲ್ಲ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.

‘ ತನ್ನ ಮಾತೃಭೂಮಿಯ ರಕ್ಷಣೆಗೆ ಮತ್ತು ತನ್ನ ಜನರಿಗೆ ನಿಜವಾದ ಸ್ವಾತಂತ್ರ್ಯವನ್ನು ಖಾತರಿಪಡಿಸಲು ರಶ್ಯವು ಉಕ್ರೇನ್ನಲ್ಲಿ ಹೋರಾಡುತ್ತಿದೆ’ ಎಂದು ಸರಕಾರಿ ಸ್ವಾಮ್ಯದ ಟಿವಿ ವಾಹಿನಿಯಲ್ಲಿ ಪ್ರಸಾರವಾದ ವೀಡಿಯೊ ಸಂದೇಶದಲ್ಲಿ ಪುಟಿನ್ ಪ್ರತಿಪಾದಿಸಿದ್ದಾರೆ.

‘ನೈತಿಕ, ಐತಿಹಾಸಿಕ ಸತ್ಯ ನಮ್ಮ ಕಡೆಗಿದೆ. ಡೊನ್ಬಾಸ್ನ ಬಿಕ್ಕಟ್ಟು ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳನ್ನು ಶಾಂತಿಯುತ ರೀತಿಯಲ್ಲಿ ಪರಿಹರಿಸಲು ತಾವು ಆಸಕ್ತರಾಗಿದ್ದೇವೆ ಎಂದು ಪಾಶ್ಚಿಮಾತ್ಯ ಗಣ್ಯರು ಹಲವು ವರ್ಷಗಳಿಂದ ಪುನರುಚ್ಚರಿಸುತ್ತಾ ಬಂದಿದ್ದರು. ಆದರೆ ನಿಜವಾಗಿ ಅವರು ಮಾಡಿದ್ದೆಂದರೆ ಉಕ್ರೇನ್ ನಲ್ಲಿನ ನಾಝಿಗಳನ್ನು ಪ್ರೋತ್ಸಾಹಿಸಿದ್ದು. ಶಾಂತಿಯ ಬಗ್ಗೆ ಸುಳ್ಳು ಹೇಳುತ್ತಾ ಅವರು ಆಕ್ರಮಣಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.

2022 ಕಷ್ಟಕರ, ಅಗತ್ಯ ನಿರ್ಧಾರದ ವರ್ಷವಾಗಿತ್ತು. ರಶ್ಯ ಒಕ್ಕೂಟದ ಸಂಪೂರ್ಣ ಸಾರ್ವಭೌಮತ್ವವನ್ನು ಸಾಧಿಸುವತ್ತ ಪ್ರಮುಖ ಹೆಜ್ಜೆ ಇರಿಸುವ, ಸಮಾಜವನ್ನು ಸಶಕ್ತಗೊಳಿಸುವ ವರ್ಷವಾಗಿತ್ತು. ಈ ವರ್ಷ ಸ್ಪಷ್ಟವಾಗಿ ಎಲ್ಲವನ್ನೂ ಅದಕ್ಕೆ ತಕ್ಕುದಾದ ಸ್ಥಾನದಲ್ಲಿ ಇರಿಸಿದೆ. ಧೈರ್ಯಶಾಲಿಗಳು ಮತ್ತು ಧೀರರನ್ನು ದ್ರೋಹಿಗಳು ಮತ್ತು ಹೇಡಿಗಳಿಂದ ಪ್ರತ್ಯೇಕಿಸಿದೆ ’ ಎಂದು ಪುಟಿನ್ ಹೇಳಿದ್ದಾರೆ.
ತಮ್ಮ ಭಾಷಣದುದ್ದಕ್ಕೂ ನಿರಂತರ ಕೆಮ್ಮುತ್ತಿದ್ದ ಪುಟಿನ್ ಅನಾರೋಗ್ಯದಿಂದ ಬಳಲುತ್ತಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಅವರ ಜತೆಯಲ್ಲಿ ಕಾಣಿಸಿಕೊಂಡ ಮಿಲಿಟರಿ ಅಧಿಕಾರಿಗಳು ನಟರು. ಪ್ರತೀ ಬಾರಿ ಪುಟಿನ್ ಭಾಷಣದ ಸಂದರ್ಭ ಈ ನಟರೇ ಫೋಟೋಗೆ ಫೋಸ್ ನೀಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

share
Next Story
X