Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು...

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು, ಇವರ ವಿಶ್ವಗುರು ಸುಳ್ಳಿನ ಸರದಾರ: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

'' ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಕಣ್ಣು ಒರೆಸುವ ತಂತ್ರ''

2 Jan 2023 2:25 PM IST
share
ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು, ಇವರ ವಿಶ್ವಗುರು ಸುಳ್ಳಿನ ಸರದಾರ: ಬಿ.ಕೆ. ಹರಿಪ್ರಸಾದ್ ವಾಗ್ದಾಳಿ
'' ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಕಣ್ಣು ಒರೆಸುವ ತಂತ್ರ''

ಹುಬ್ಬಳ್ಳಿ: 'ಹೆಣದ ಮೇಲೆ ವಿಜಯೋತ್ಸವ ಮಾಡುವ ಜನರು ಏನೂ ಬೇಕಾದರೂ ಮಾಡತ್ತಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಮಹದಾಯಿ ವಿಚಾರವಾಗಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣ ಮೇಲ್ಡಂಡೆ ಯೋಜನೆ ಕುರಿತಂತೆ ಗೆಜೆಟ್ ನೋಟಿಫಿಕೇಶನ್ ಅನುಷ್ಠಾನ ಆಗಬೇಕೆಂಬ ಕಾಂಗ್ರೆಸ್ ಪಕ್ಷದಿಂದ ವಿಜಯಪುರದಲ್ಲಿ ಸಮಾವೇಶ ಮಾಡಿದ್ದೆವು. ಮಹದಾಯಿ ವಿಷಯದಲ್ಲಿ ಬಿಜೆಪಿ ಡಿಪಿಆರ್ ಮಾಡಿಕೊಂಡು ಬಂದಿದ್ದೇವೆ ಅಂತಾ ಹೇಳತ್ತಾ ಇದ್ದಾರೆ. ಆದರೆ ನಿಜವಾಗಿ ನೋಟಿಪೀಕೇಶನ್ ಮಾಡಬೇಕಾದರೇ ಗೋವಾ ಸರ್ಕಾರ ಒಪ್ಪಿಗೆ ಪಡೆದು ಆಗಬೇಕು. ಇದು ಕಣ್ಣು ಒರೆಸುವ ಕೆಲಸ ಎಂದು ಹರಿಹಾಯ್ದರು.

ಪಂಚಮಸಾಲಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಒಂದು ತಿರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳತ್ತಾರೆ. 9 ಶೆಡ್ಯೂಲ್ ಬರಬೇಕೆಂದರೆ ಸಂವಿಧಾನದ ಡೈರೆಕ್ಟ್ ಪ್ರಿನ್ಸಿಪಲ್ ಅಂತಾ ಇದೆ. 31 ಸಿಯಲ್ಲಿ ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡಿ ಕಳಿಸಬೇಕಿತ್ತು. ಆದರೆ ಬಿಜೆಪಿಯವರು ನಾವು ಹಾಗೇ ಕೇಂದ್ರಕ್ಕೆ ಕಳಿಸತ್ತೇವೆ ಎಂದು ಹೇಳಿ ಸುಮ್ಮನೆ ನಾಟಕ ಮಾಡತ್ತಾ ಇದ್ದಾರೆ. ಉತ್ತರ ಭಾರತದಲ್ಲಿ ಇರುವಂತೆ ಕರ್ನಾಟಕದ ಜನರು ಮೂರ್ಖರು ಎಂದು ತಿಳಿದುಕೊಂಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಜನರು ಬುದ್ಧಿ ಕಲಿಸತ್ತಾರೆ ಎಂದು ಹರಿಹಾಯ್ದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ಇವರ ವಿಶ್ವಗುರುನೇ ಸುಳ್ಳಿನ ಸರದಾರ,  ಅದನ್ನು ಅವರ ಚೇಲಾಗಳು ಸಹ ಕಲಿತುಕೊಂಡಿದ್ದಾರೆ. ಚುನಾವಣೆ ಬಂದಾಗ ಬಿಜೆಪಿಯವರು ನಾಲ್ಕು ಜನಕ್ಕೆ ಕೊಲೆ ಮಾಡಿಸಿ ರಾಜಕಾರಣ ಮಾಡುತ್ತಾರೆ. ಆದರೆ ನಾವು ಅಂತಹ ಜನರಲ್ಲ ಎಂದು ಕುಟುಕಿದರು.

ರಾಜ್ಯಗಳ ಏಕೀಕರಣ ಆದ ನಂತರ ರಾಜ್ಯಗಳ ನಡುವೆ ಕೆಲವು ಸಮಸ್ಯೆ ಬರತ್ತೇವೆ. ಅದನ್ನು ದೇಶದ ಪ್ರಧಾನಿಗಳು ಕರೆದು ಸಂದಾನ ಮಾಡಬೇಕಿತ್ತು. ಗಡಿ ವಿಚಾರದಲ್ಲಿ ಪ್ರಧಾನಮಂತ್ರಿ ಬಾಯಿ ಬಿಟ್ಟಿಲ್ಲ.  ಮೇಘಾಲಯ ಅಸ್ಸಾಂ ಗಡಿಯಲ್ಲಿ ಜನರು ಬಂದೂಕು ಹಿಡಿದುಕೊಂಡಿದ್ದಾರೆ. ಗಡಿ ಮತ್ತು ನದಿ ವಿಷಯದಲ್ಲಿ ಪ್ರಧಾನಿಗಳು ಮಧ್ಯೆ ಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು. ಆದರೆ ಇವರಿಗೆ ಈ ಬಗ್ಗೆ ಮಾತನಾಡೋ ಪುರುಸೋತು ಇಲ್ಲ ಎಂದು ಬಿ.ಕೆ.ಹರಿಪ್ರಸಾದ್ ಹರಿಹಾಯ್ದರು.

share
Next Story
X