Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮಿತ್ ಶಾ ದೇವೇಗೌಡರ ಕಾಲಿನ ಉಗುರಿಗೂ...

ಅಮಿತ್ ಶಾ ದೇವೇಗೌಡರ ಕಾಲಿನ ಉಗುರಿಗೂ ಸಮಾನರಲ್ಲ: ಎಚ್.ಡಿ.ಕುಮಾರಸ್ವಾಮಿ

2 Jan 2023 7:47 PM IST
share
ಅಮಿತ್ ಶಾ ದೇವೇಗೌಡರ ಕಾಲಿನ ಉಗುರಿಗೂ ಸಮಾನರಲ್ಲ: ಎಚ್.ಡಿ.ಕುಮಾರಸ್ವಾಮಿ

ಮೈಸೂರು,ಜ.2: ಜೆಡಿಎಸ್ ಕುಟುಂಬದ ಎಟಿಎಂ ಎಂದು ಹೇಳಿರುವ ಕೇಂದ್ರ ಗೃಹ ಸಚಿವ  ಅಮಿತ್ ಶಾ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಕಾಲಿನ ಉಗುರಿಗೂ ಸಮ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಹೇಳುವ ಅಮಿತ್ ಶಾ ಒಂದೇ ಒಂದು ಭ್ರಷ್ಟಾಚಾರವನ್ನು ಜನರ ಮುಂದಿಡಬೇಕಿತ್ತು. ಆದರೆ ಜೆಡಿಎಸ್ ಪಕ್ಷದ ಭಯದಿಂದ ಬಾಯಿಗೆ ಬಂದಹಾಗೆ ಹೇಳಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ, ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ, ಅಥವಾ ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಕುಟುಂಬ ಒಂದೇ ಒಂದು ಭ್ರಷ್ಟಾಚಾರ ಮಾಡಿದ್ದರೆ ಸಾಭೀತುಪಡಿಸಲಿ ಎಂದು ಸವಾಲು ಹಾಕಿದರು.

ಇದೇ ಅಮಿತ್ ಶಾ ತನ್ನ ಮಗನಿಗೆ ಬಿಸಿಸಿಐ ವಾರಸುದಾರಿಕೆ ಯಾವ ಅರ್ಹತೆ ಪ್ರತಿಭೆ ಮೇಲೆ ಕೊಡಿಸಿದ್ದಾರೆ ಗೊತ್ತು. ಇವರ ಪಕ್ಷದ ಭ್ರಷ್ಟಾಚಾರದಿಂದ ಬೇಸತ್ತು ಜನ ಸಾಯುತ್ತಿದ್ದಾರೆ. ಮೊನ್ನೆ ತುಮಕೂರಿನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದ, ನಿನ್ನೆ ಬೆಂಗಳೂರಿನಲ್ಲಿ ಇವರ ಪಕ್ಷದ ಶಾಸಕರ ಹೆಸರನ್ನು ಬರೆದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ನೀಡಿರುವ ಹೊಸ ವರುಷದ ಕೊಡುಗೆ ಎಂದು ಲೇವಡಿ ಮಾಡಿದರು.

ಮುಂಬರುವ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ ಯಾರು ಇವರ ಮನೆ ಬಾಗಿಲಿಗೆ ಅರ್ಜಿ ಹಿಡಿದುಕೊಂಡು ಹೋಗಿದ್ದರು. 2008 ರಲ್ಲಿ ಇದೇ ಬಿಜೆಪಿಯವರು ಜೆಡಿಎಸ್ ಮನೆ ಬಾಗಿಲ ಬಳಿ ನಿಂತಿದ್ದರು ಎಂದು ಕುಟುಕಿದರು.

ದೆಹಲಿ ನಾಯಕರಿಂದ ರಾಜ್ಯದಲ್ಲಿ ಕಮಲ ಅರಳಲಿಲ್ಲ, ರಾಜ್ಯದ ಕೆಲವು ಸಂದರ್ಭಗಳಿಂದ ವೀರಶೈವ ಸಮುದಾಯ ಯಡಿಯೂರಪ್ಪನವರ ಜೊತೆ ನಿಂತ ಕಾರಣಕ್ಕೆ ಬಿಜೆಪಿ ಅಸ್ಥಿತ್ವಕ್ಕೆ ಬಂತು. ಆದರೆ ಅದೇ ಯಡಿಯೂರಪ್ಪ ನವರನ್ನು ಕೇಂದ್ರ ನಾಯಕರು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತು. ಬಸವರಾಜ ಬೊಮ್ಮಾಯಿ ಬರಿ ಹೆಸರಿಗಷ್ಟೇ ಮುಖ್ಯಮಂತ್ರಿ ಎಲ್ಲಾ ಕೇಂದ್ರದ ನಾಯಕರು ಹೇಳಿದ ಹಾಗೆ ಕೇಳಬೇಕು ಎಂದು ಆರೋಪಿಸಿದರು.

ಕಳೆದ ಮೂರುವರ್ಷದ ಆಡಳಿತದಲ್ಲಿ ಕಮಲ ಮುದುಡಿ ಹೋಗಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಇವರ ಅಸ್ತಿತ್ವ ಕುಂದುತ್ತಿದೆ. ಹಾಗಾಗಿ ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಂಡ್ಯಕ್ಕೆ ಬಂದಿದ್ದಾರೆ. ಇವರು ನೂರು ಸಲ ಬಂದು ಹೋದರು ಜೆಡಿಎಸ್ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ.ಮಂಡ್ಯಕ್ಕೆ ಅಮಿತ್ ಶಾ ಕೊಡುಗೆ ಏನು ಎಂದು ಹೇಳಲಿ. ನಮ್ಮ ಕೊಡುಗೆ ಏನು ಎಂದು ಹೇಳುತ್ತೇನೆ. ಬೇಕಿದ್ದರೆ ಸಾರ್ವಜನಿಕ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಐಟಿ, ಇಡಿ ಗೆ ಹೆದರಲ್ಲ: ಬಿಜೆಪಿ ವಿರುದ್ಧ ಯಾರು ಶಕ್ತಿಯುತವಾಗಿ ಇರುತ್ತಾರೊ ಅವರನ್ನು ಐಟಿ, ಇಡಿ ಮೂಲಕ ಹೆದರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನನ್ನ ಮೇಲೆ ಐಟಿ,ಇಡಿ ದಾಳಿ ಮಾಡಿಸಿದರು ನಾನು ಹೆದರುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಈಗಗಾಲೇ ಸಿಸೋಡಿಯಾ, ಮತ್ತು ಕೆ.ಸಿ.ಆರ್. ಪುತ್ರಿ ಮೇಲೆ ಐಟಿ ರೇಡ್ ಮಾಡಿಸಿದ್ದಾರೆ. ನನ್ನ ಮೇಲೆ ಅದ್ಯಾವ ಐಟಿ, ಇಡಿ ಕಳುಹಿಸುತ್ತಾರೊ ನೋಡುತ್ತೇನೆ ಎಂದು ಹೇಳಿದರು.

ಕೆಎಂಎಫ್ ಮಾರಲು ಸಂಚು: ಗುಜರಾತ್ ನ ಅಮುಲ್ ನೊಂದಿಗೆ ಕೆಎಂಎಫ್ ವಿಲೀನ ಮಾಡಿ ಅದನ್ನು ಮಾರಲು ಬಿಜೆಪಿಯವರು ಸಂಚು ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಕೆಎಂಎಫ್ ಉತ್ತಮವಾಗಿದೆ ಅದರ ಮೇಲೆ ಕಣ್ಣು ಹಾಕಿರುವ ಅಮಿತ್ ಶಾ ಅಮುಲ್ ನೊಂದಿಗೆ ವಿಲೀನಗೊಳಿಸಿ ಅದನ್ನು ಮಾರಲು ಹೊರಟಿದ್ದಾರೆ. ಇದಕ್ಕೆ ರಾಜ್ಯದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಲು ಮುಂದಾಗಿದ್ದಾರೆ ಎಂದು ಹರಿಹಾಯ್ದರು.

ಸಂಕ್ರಾಂತಿ ನಂತರ ಜೆಡಿಎಸ್ ಎರಡನೇ ಪಟ್ಟಿ: ಸಂಕ್ರಾಂತಿ ನಂತರ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಮೈಸೂರು ಭಾಗದಲ್ಲಿ ಇನ್ನು 5 ಸ್ಥಾನಗಳ ಪಟ್ಟಿ ಬಿಡುಗಡೆ ಮಾಡಬೇಕಿದೆ. ಯವುದೇ ಗೊಂದಲ ಉಂಟಾಗದಂತೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರುಗಳಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಕೆ.ವಿ.ಮಲ್ಲೇಶ್ ಉಪಸ್ಥಿತರಿದ್ದರು.

ಜೆಡಿಎಸ್ ರಾಜ್ಯದ ರೈತರ ಎಟಿಎಂ, ಈ ನಾಡಿನ 6.5 ಕೋಟಿ ಜನರ ಎಟಿಎಂ ನಮ್ಮ ಬಗ್ಗೆ ಭ್ರಷ್ಟಾಚಾರದ ಟೀಕೆ ಮಾಡುವ ನೈತಿಕತೆ ಬಿಜೆಪಿಗೆ ಇಲ್ಲ.

share
Next Story
X