Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಹೆದ್ದಾರಿ...

ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಹೆದ್ದಾರಿ ಕಾಮಗಾರಿ; ಸಂಚಾರ ಅಸ್ತವ್ಯಸ್ತ..!

ಬಹುನಿರೀಕ್ಷಿತ ರಾ.ಹೆದ್ದಾರಿ ಅಂಡರ್‌ಪಾಸ್ ಕಾಮಗಾರಿ ಪ್ರಾರಂಭ

2 Jan 2023 9:10 PM IST
share
ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಹೆದ್ದಾರಿ ಕಾಮಗಾರಿ; ಸಂಚಾರ ಅಸ್ತವ್ಯಸ್ತ..!
ಬಹುನಿರೀಕ್ಷಿತ ರಾ.ಹೆದ್ದಾರಿ ಅಂಡರ್‌ಪಾಸ್ ಕಾಮಗಾರಿ ಪ್ರಾರಂಭ

ಉಡುಪಿ: ಇಲ್ಲಿನ ಕಲ್ಯಾಣಪುರ-ಸಂತೆಕಟ್ಟೆ ಬಳಿ ವಾಹನ ದಟ್ಟಣೆ ತಪ್ಪಿಸುವ ಸಲುವಾಗಿ ಬಹುಕಾಲದ ಬೇಡಿಕೆಯಾಗಿದ್ದ ಅಂಡರ್‌ಪಾಸ್ ನಿರ್ಮಾಣದ ಕಾಮಗಾರಿ ಜ.2  ಸೋಮವಾರದಿಂದ ಪ್ರಾರಂಭಗೊಂಡಿದೆ.

ಸಂತೆಕಟ್ಟೆ ಜಂಕ್ಷನ್ ಸಮೀಪದಿಂದ 150 ಮೀ. ದೂರದಲ್ಲಿ ವೆಹಿಕಲ್ ಅಂಡರ್ಪಾಸ್ (ವಿಯುಪಿ) ಕಾಮಗಾರಿ ನಡೆಸಲಾಗುತ್ತಿದ್ದು ಚಾಲನೆ ಸಿಕ್ಕಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಎರಡೂ ಕಡೆಯ ಹೆದ್ದಾರಿಯನ್ನು ಮುಚ್ಚಿ ಅಗೆಯಲಾಗಿದೆ.

ವಾಹನಗಳ ಪರ್ಯಾಯ ಸಂಚಾರಕ್ಕಾಗಿ ಸಂತೆಕಟ್ಟೆ ಜಂಕ್ಷನ್ ಬಳಿಯಿಂದ ಎರಡೂ ಕಡೆಗಳಲ್ಲಿ ಸರ್ವೀಸ್ ರಸ್ತೆಯಲ್ಲಿ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ. ಇದರಿಂದಾಗಿ ಕುಂದಾಪುರ-ಉಡುಪಿ ಹಾಗೂ ಉಡುಪಿ-ಕುಂದಾಪುರ ಮಾರ್ಗದ ಎಲ್ಲಾ ವಾಹನಗಳ ಸಂಚಾರ ಅಸ್ತವ್ಯಸ್ತ ಆಗುತ್ತಿದ್ದು ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಕಿರಿಕಿರಿ ವಾಹನ ಚಾಲಕರನ್ನು, ಪ್ರಯಾಣಿಕರನ್ನು ಬಾಧಿಸತೊಡಗಿದೆ.

ಕಾಮಗಾರಿ ಆರಂಭದ ದಿನವೇ ಪ್ರಯಾಣಿಕರಿಗೆ, ವಾಹನ ಸವಾರರಿಗೆ ಬಹಳಷ್ಟು ಸಮಸ್ಯೆ ಉಂಟಾಗಿದ್ದು ಇನ್ನೂ ಕಾಮಗಾರಿ ಮುಗಿಯಲು ಹಲವು ತಿಂಗಳುಗಳೇ ಬೇಕಾಗುವ ಸಾಧ್ಯತೆಗಳಿದೆ.

ಈ ಮಾರ್ಗದಲ್ಲಿ ಸಂಚಾರ ದಟ್ಟಣೆ, ಸಂತೆಕಟ್ಟೆ ಜಂಕ್ಷನ್‌ನಲ್ಲಿ ನಾಲ್ಕೈದು ಕಡೆಗಳಿಂದ ಒಮ್ಮೆಲೇ ವಾಹನಗಳು ನುಗ್ಗಿ ಬಂದು ಪ್ರತಿದಿನ ಉಂಟಾಗು ತ್ತಿರುವ ಅಪಘಾತ ಹಾಗೂ ಜೀವಹಾನಿಯನ್ನು  ತಪ್ಪಿಸಲು ಬಹುಕಾಲದ ಬೇಡಿಕೆಯಾದ ಸಂತೆಕಟ್ಟೆಯಲ್ಲಿ ಅಂಡರ್‌ಪಾಸ್ (ಓವರ್‌ಬ್ರಿಜ್ ಬೇಡಿಕೆ ತಿರಸ್ಕೃತಗೊಂಡಿದೆ) ನಿರ್ಮಾಣದ ಘೋಷಣೆ ವರ್ಷದ ಹಿಂದೆಯೇ ಆಗಿದ್ದು, ಈಗ ಕಾಮಗಾರಿ ಆರಂಭಗೊಳ್ಳುತ್ತಿದೆ.

ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸಿ ಸಂಭಾವ್ಯ ಅವಘಡಗಳನ್ನು ತಪ್ಪಿಸಬೇಕು ಎಂದು ವಾಹನಗಳ ಚಾಲಕರು, ಸವಾರರು ಹಾಗೂ ಪ್ರಯಾಣಿಕರು ಆಗ್ರಹಿಸಿದ್ದಾರೆ.

share
Next Story
X