Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ವಿಶ್ವದ ಮೂರನೇ ಒಂದು ಭಾಗಕ್ಕೆ ಆರ್ಥಿಕ...

​ವಿಶ್ವದ ಮೂರನೇ ಒಂದು ಭಾಗಕ್ಕೆ ಆರ್ಥಿಕ ಹಿಂಜರಿತದ ಆಘಾತ: ಐಎಂಎಫ್ ಎಚ್ಚರಿಕೆ

2 Jan 2023 10:40 PM IST
share
​ವಿಶ್ವದ ಮೂರನೇ ಒಂದು ಭಾಗಕ್ಕೆ ಆರ್ಥಿಕ ಹಿಂಜರಿತದ ಆಘಾತ: ಐಎಂಎಫ್ ಎಚ್ಚರಿಕೆ

ವಾಷಿಂಗ್ಟನ್, ಜ.2: ಈ ವರ್ಷ ಜಗತ್ತಿನ ಮೂರನೇ ಒಂದರಷ್ಟು ಆರ್ಥಿಕತೆಗೆ ಹಿಂಜರಿತದ ಬಿಸಿ ತಟ್ಟಲಿದ್ದು ಅಮೆರಿಕ, ಯುರೋಪಿಯನ್ ಯೂನಿಯನ್ ಮತ್ತು ಚೀನಾದ ಅರ್ಥವ್ಯವಸ್ಥೆ ನಿಧಾನಗತಿಯಲ್ಲಿರುವುದರಿಂದ 2023 ಕಳೆದ ವರ್ಷಕ್ಕಿಂತ ಕಠಿಣವಾಗಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್)ಯ ಮುಖ್ಯಸ್ಥರು ಎಚ್ಚರಿಸಿದ್ದಾರೆ.

ಸಿಬಿಎಸ್ ಟಿವಿ ಕಾರ್ಯಕ್ರಮ ‘ಫೇಸ್ ದಿ ನೇಷನ್’ನಲ್ಲಿ ಮಾತನಾಡಿದ ಐಎಂಎಫ್ ಮುಖ್ಯಸ್ಥೆ ಕ್ರಿಸ್ತಲಿನಾ ಜಾರ್ಜಿಯೆವಾ, ಈ ವರ್ಷ ಮೂರನೇ ಒಂದರಷ್ಟು ಜಾಗತಿಕ ಅರ್ಥವ್ಯವಸ್ಥೆಗೆ ಹಿಂಜರಿತದ ಬಿಸಿ ತಾಗುವ ನಿರೀಕ್ಷೆಯಿದೆ. ಆರ್ಥಿಕ ಹಿಂಜರಿತದಲ್ಲಿಲ್ಲದ ದೇಶಗಳಲ್ಲಿಯೂ ಸಹ, ನೂರಾರು ದಶಲಕ್ಷ ಜನರಿಗೆ ಇದು ಆರ್ಥಿಕ ಹಿಂಜರಿತದಂತೆಯೇ ಭಾಸವಾಗಲಿದೆ ಎಂದು ಹೇಳಿದ್ದಾರೆ.

ಉಕ್ರೇನ್ ನಲ್ಲಿನ ಸಂಘರ್ಷ 10 ತಿಂಗಳ ಬಳಿಕವೂ ಅಂತ್ಯಗೊಳ್ಳುವ ಲಕ್ಷಣ ಗೋಚರಿಸದ ಸಂದರ್ಭದಲ್ಲಿ ಐಎಂಎಫ್ನ ಈ ಎಚ್ಚರಿಕೆ ಹೊರಬಿದ್ದಿದೆ. ಹೆಚ್ಚುತ್ತಿರುವ ಹಣದುಬ್ಬರ, ಅಧಿಕ ಬಡ್ಡಿದರ, ಚೀನಾದಲ್ಲಿ ಮತ್ತೆ ಕೊರೋನ ಸೋಂಕು ಉಲ್ಬಣಗೊಂಡಿರುವುದು ಆರ್ಥಿಕ ಹಿಂಜರಿತದ ಅಪಾಯವನ್ನು ಮತ್ತಷ್ಟು ಹೆಚ್ಚಿಸಿದೆ. ‘ಜಾಗತಿಕ ಬೆಳವಣಿಗೆಯು 2021ರಲ್ಲಿ 6% ಇದ್ದರೆ, 2022ರಲ್ಲಿ 3.2%ಕ್ಕೆ ಮತ್ತು 2023ರಲ್ಲಿ 2.7%ಕ್ಕೆ ನಿಧಾನವಾಗಲಿದೆ ಎಂದು ಮುನ್ಸೂಚಿಸಲಾಗಿದೆ. 2021ರಿಂದ (ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಕೋವಿಡ್ ಸಾಂಕ್ರಾಮಿಕದ ತೀವ್ರ ಹಂತ ಹೊರತುಪಡಿಸಿ) ಇದು ಅತ್ಯಂತ ದುರ್ಬಲ ಬೆಳವಣಿಗೆಯ ವಿವರವಾಗಿದೆ’ ಎಂದು ಕಳೆದ ವರ್ಷದ ಅಕ್ಟೋಬರ್ ನಲ್ಲಿ ಐಎಂಎಫ್ ಹೇಳಿತ್ತು.

ದೇಶದಲ್ಲಿ ಸರಕಾರ ವಿರೋಧಿ ಪ್ರತಿಭಟನೆಯ ಅಲೆ ಕಾಣಿಸಿಕೊಂಡ ಬಳಿಕ ಎಚ್ಚೆತ್ತ ಚೀನಾ, ಶೂನ್ಯ ಕೋವಿಡ್ ನೀತಿಯನ್ನು ಕೈಬಿಟ್ಟು ತನ್ನ ಆರ್ಥಿಕತೆಯನ್ನು ಮುಕ್ತಗೊಳಿಸಿದೆ. ಮುಂದಿನ ಕೆಲ ತಿಂಗಳುಗಳಲ್ಲಿ ಚೀನಾಕ್ಕೆ ಇದು ಕಠಿಣವಾಗಿರುತ್ತದೆ ಮತ್ತು ಚೀನಾದ ಬೆಳವಣಿಗೆಯ ಮೇಲೆ, ಪ್ರದೇಶದ ಮೇಲೆ, ಜಾಗತಿಕ ಬೆಳವಣಿಗೆಯ ಮೇಲೆ ಇದು ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಕ್ರಿಸ್ತಲಿನಾ ಜಾರ್ಜಿಯೆವಾ ಹೇಳಿದ್ದಾರೆ.

share
Next Story
X