Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3000 ಕಿ.ಮೀ. ಕ್ರಮಿಸಿದ 'ಭಾರತ್ ಜೋಡೋ...

3000 ಕಿ.ಮೀ. ಕ್ರಮಿಸಿದ 'ಭಾರತ್ ಜೋಡೋ ಯಾತ್ರೆ'

3 Jan 2023 11:19 AM IST
share
3000 ಕಿ.ಮೀ. ಕ್ರಮಿಸಿದ ಭಾರತ್ ಜೋಡೋ ಯಾತ್ರೆ

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ' ಇಂದಿಗೆ 110 ದಿನಗಳನ್ನು ಪೂರೈಸಿ, 3000 ಕಿಮೀಗೂ ಹೆಚ್ಚು ದೂರ ಕ್ರಮಿಸಿದ್ದು, ಒಂಬತ್ತು ದಿನಗಳ ವಿರಾಮದ ನಂತರ ಉತ್ತರ ಪ್ರದೇಶದಿಂದ ತನ್ನ ಯಾತ್ರೆಯನ್ನು ಮತ್ತೆ ಶುರು ಮಾಡಿದೆ.

ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಭಾರತ್ ಜೋಡೋ ಯಾತ್ರೆಯು ಈವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ತಾನ, ಮಹಾರಾಷ್ಟ್ರ ಮತ್ತು ಹರ್ಯಾಣ ರಾಜ್ಯಗಳಲ್ಲಿ ತನ್ನ ಯಾತ್ರೆಯನ್ನು ಪೂರೈಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಾರೋಪಗೊಳ್ಳಲಿದೆ.

ಭಾರತೀಯ ರಾಜಕಾರಣಿಗಳು ಈವರೆಗೆ ನಡೆಸಿರುವ ಪಾದಯಾತ್ರೆಗಳ ಪೈಕಿ ಈ ಯಾತ್ರೆಯು ಅತ್ಯಂತ ದೂರದ ಯಾತ್ರೆಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಪ್ರತಿಪಾದಿಸಿದೆ.

ಜನವರಿ 26ರಂದು ಶ್ರೀನಗರದಲ್ಲಿ ಈ ಯಾತ್ರೆಯು ಸಮಾರೋಪಗೊಳ್ಳಿದ್ದು, ಇದರ ನಂತರ ಯಾತ್ರೆಯ ಸಂದೇಶವನ್ನು ಜನರ ನಡುವೆ ಹರಡಲು 'ಕೈ ಜೊತೆ ಕೈ ಜೋಡಿಸಿ' ಅಭಿಯಾನವನ್ನು ಕಾಂಗ್ರೆಸ್ ಪಕ್ಷ ನಡೆಸಲಿದೆ.

ಮೂಲಗಳ ಪ್ರಕಾರ, ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಹಿಳೆಯರನ್ನು ವಿಶೇಷ ಆದ್ಯತೆಯಾಗಿಸಿಕೊಂಡು ದೇಶಾದ್ಯಂತ ಹಮ್ಮಿಕೊಳ್ಳಲಾಗುವ 'ಕೈ ಜೊತೆ ಕೈ ಜೋಡಿಸಿ' ಅಭಿಯಾನದ ನೇತೃತ್ವವನ್ನು ತಮ್ಮ ಸಹೋದರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ವಹಿಸಿದ್ದಾರೆ ಎಂದು ಹೇಳಿವೆ ಎಂದು ndtv.com ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, "ಭಾರತ್ ಜೋಡೋ ಯಾತ್ರೆಯ ನಂತರ ಕಾಂಗ್ರೆಸ್ ಪಕ್ಷದ ವತಿಯಿಂದ 'ಕೈ ಜೊತೆ ಕೈ ಜೋಡಿಸಿ' ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ಎಲ್ಲ ರಾಜ್ಯದ ರಾಜಧಾನಿಗಳಲ್ಲಿ 'ಭಾರತ್ ಜೋಡೋ ಯಾತ್ರೆ'ಯ ಸಂದೇಶ ಹರಡಲು ಮಹಿಳಾ ಸದಸ್ಯರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಪಾದಯಾತ್ರೆ ಮತ್ತು ಸಮಾವೇಶಗಳು ನಡೆಯಲಿವೆ" ಎಂದು ತಿಳಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಪಕ್ಷದ ಮಹಿಳಾ ಸದಸ್ಯರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಕೃತಜ್ಞತಾ ಯಾತ್ರೆಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ವಿಶೇಷವಾಗಿ ಮಧ್ಯಮ ವರ್ಗ ಅನುಭವಿಸುತ್ತಿರುವ ಬೆಲೆಯೇರಿಕೆ ಹಾಗೂ ಅದರಿಂದ ಸಾರ್ವಜನಿಕ ಜೀವನದ ಮೇಲೆ ಆಗಿರುವ ದುಷ್ಪರಿಣಾಮಗಳ ಕುರಿತು ಗಮನ ಸೆಳೆಯಲಿವೆ. ಇದರೊಂದಿಗೆ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳೂ ಪ್ರಮುಖ ಸಂಗತಿಗಳಾಗಲಿವೆ ಎಂದೂ ಮೂಲಗಳು ತಿಳಿಸಿವೆ ಎಂದು ndtv.com ವರದಿ ಮಾಡಿದೆ.

share
Next Story
X