Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್‌ ಕಾರ್ಡ್‌ದಾರರು ಈಗ ಆನ್‌ಲೈನ್‌...

ಆಧಾರ್‌ ಕಾರ್ಡ್‌ದಾರರು ಈಗ ಆನ್‌ಲೈನ್‌ ಮೂಲಕ ವಿಳಾಸ ನವೀಕರಿಸಬಹುದು; ಇಲ್ಲಿದೆ ಮಾಹಿತಿ

3 Jan 2023 4:37 PM IST
share
ಆಧಾರ್‌ ಕಾರ್ಡ್‌ದಾರರು ಈಗ ಆನ್‌ಲೈನ್‌ ಮೂಲಕ ವಿಳಾಸ ನವೀಕರಿಸಬಹುದು; ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಈಗ ಭಾರತೀಯ ನಾಗರಿಕರಿಗೆ ಆಧಾರ್‌ ಆನ್‌ಲೈನ್‌ ಮೂಲಕ ಕುಟುಂಬದ ಮುಖ್ಯಸ್ಥರ ಅನುಮತಿಯೊಂದಿಗೆ ತಮ್ಮ ವಿಳಾಸವನ್ನು ನವೀಕರಿಸಲು ಅನುವು ಮಾಡಿಕೊಟ್ಟಿದೆ ಎಂದು ಅಧಿಕೃತ ಹೇಳಿಕೆ ಮೂಲಕ ಇಂದು ತಿಳಿಸಲಾಗಿದೆ.

ಸಂಬಂಧದ ಪುರಾವೆಗಾಗಿ ದಾಖಲೆಗಳಾದ ರೇಷನ್‌ ಕಾರ್ಡ್‌, ಅಂಕಪಟ್ಟಿ, ವಿವಾಹ ಪ್ರಮಾಣಪತ್ರ, ಪಾಸ್‌ಪೋರ್ಟ್‌ ಇತ್ಯಾದಿಗಳನ್ನು ಸಲ್ಲಿಸಬೇಕು, ಅರ್ಜಿದಾರನ ಹೆಸರು, ಕುಟುಂಬ ಮುಖ್ಯಸ್ಥನ ಹೆಸರು ಮತ್ತು ಅವರ ನಡುವಿನ ಸಂಬಂಧವನ್ನು ಅರ್ಜಿಯಲ್ಲಿ ಉಲ್ಲೇಖಿಸಬೇಕಾಗುತ್ತದೆ. ಈ ಪ್ರಕ್ರಿಯೆಗಾಗಿ ಒಟಿಪಿ ಮೂಲಕ ದೃಢೀಕರಣವನ್ನು ಕುಟುಂಬದ ಮುಖ್ಯಸ್ಥರು ಮಾಡಬೇಕಾಗುತ್ತದೆ.

ಅರ್ಜಿದಾರ ಹಾಗೂ ಕುಟುಂಬದ ಮುಖ್ಯಸ್ಥನ ನಡುವಿನ ಸಂಬಂಧವನ್ನು ಪುಷ್ಠೀಕರಿಸುವ ದಾಖಲೆ ಲಭ್ಯವಿಲ್ಲದೇ ಇದ್ದರೆ ಪ್ರಾಧಿಕಾರದ ನಿರ್ದಿಷ್ಟ ಅರ್ಜಿ ನಮೂನೆಯಲ್ಲಿ ಕುಟುಂಬ ಮುಖ್ಯಸ್ಥ ಸ್ವಯಂ ಡಿಕ್ಲರೇಶನ್‌ ಸಲ್ಲಿಸಬೇಕಾಗುತ್ತದೆ.

ವಿವಿಧ ಕಾರಣಗಳಿಗಾಗಿ ಜನರು ತಮ್ಮ ವಾಸಸ್ಥಳಗಳನ್ನು ಬದಲಾಯಿಸುವ ಸಂದರ್ಭದಲ್ಲಿ ಆಧಾರ್‌ನಲ್ಲಿ ವಿಳಾಸ ನವೀಕರಿಸುವ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕ ಸುಲಭವಾಗಿ ಮಾಡಬಹುದಾಗಿದೆ ಎಂದು ಪ್ರಾಧಿಕಾರದ ಹೇಳಿಕೆ ತಿಳಿಸಿದೆ.

ವಿಳಾಸ ನವೀಕರಿಸುವ ಈ ಹೊಸ ಆಯ್ಕೆಯು ಈಗ ಇರುವ ಮಾನ್ಯವಾದ ವಿಳಾಸ ಸಂಬಂಧಿ ದಾಖಲೆ ಬಳಸಿ ವಿಳಾಸ ನವೀಕರಣ ಸವಲತ್ತಿಗೆ ಹೊರತಾಗಿದೆ. "ಈಗ ಒದಗಿಸಲಾಗಿರುವ ಹೊಸ ಆಯ್ಕೆಯಾಗಿ 18 ವರ್ಷ ಮೇಲ್ಪಟ್ಟ ಯಾವುದೇ ಭಾರತೀಯ ನಾಗರಿಕ ಕುಟುಂಬ ಮುಖ್ಯಸ್ಥನಾಗಿ ತನ್ನ  ವಿಳಾಸವನ್ನು  ಆತ ಅಥವಾ ಆಕೆಯ ಸಂಬಂಧಿಗಳೊಂದಿಗೆ ಈ ಪ್ರಕ್ರಿಯೆ ಮೂಲಕ ಹಂಚಿಕೊಳ್ಳಬಹುದಾಗಿದೆ," ಎಂದು ಹೇಳಿಕೆ ತಿಳಿಸಿದೆ.

ಆನ್‌ಲೈನ್‌ ಮೂಲಕ ವಿಳಾಸ ನವೀಕರಣ ಮಾಡಲು ಬಯಸುವವರು ಮೈ ಆಧಾರ್‌ ವೆಬ್‌ ತಾಣಕ್ಕೆ ಭೇಟಿ ನೀಡಬಹುದಾಗಿದೆ.

ಈ ಸೇವೆ ಪಡೆದುಕೊಳ್ಳಬಯಸುವವರು ರೂ. 50 ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ. ಹಣ ಪಾವತಿ ನಂತರ ಸರ್ವಿಸ್‌ ರಿಕ್ವೆಸ್ಟ್‌ ನಂಬರ್‌ ಅವರಿಗೆ ದೊರೆಯುತ್ತದೆ ಹಾಗೂ ಕುಟುಂಬ ಮುಖ್ಯಸ್ಥನಿಗೆ ವಿಳಾಸ ನವೀಕರಣ ವಿನಂತಿ ಕುರಿತ ಎಸ್ಸೆಮ್ಮೆಸ್‌ ಕಳುಹಿಸಲಾಗುವುದು. ಈ ವಿನಂತಿಯನ್ನು ಆತ ಅಥವಾ ಆಕೆ  ಆಧಾರ್‌ ಪೋರ್ಟಲ್‌ಗೆ ಲಾಗಿನ್‌ ಮಾಡಿ 30 ದಿನಗಳೊಳಗೆ ಅನುಮತಿಸಬೇಕು. ಈ ಅವಧಿಯೊಳಗೆ ಒಪ್ಪಿಕೊಳ್ಳದೇ ಇದ್ದರೆ ಅಥವಾ ನಿರಾಕರಿಸದೇ ಇದ್ದರೆ, ವಿನಂತಿಯನ್ನು ಮುಚ್ಚಲಾಗುವುದು. ವಿಳಾಸ ನವೀಕರಣ ಅರ್ಜಿ ಸಲ್ಲಿಸಿದವರಿಗೆ ಅವರ ಅರ್ಜಿಗೆ ದೊರೆತ ಒಪ್ಪಿಗೆ, ನಿರಾಕರಣೆ ಅಥವಾ ವಿನಂತಿ ಮುಚ್ಚುಗಡೆ ಕುರಿತು ಎಸ್ಸೆಮ್ಮೆಸ್‌ ಮೂಲಕ ಮಾಹಿತಿ ನೀಡಲಾಗುವುದು.

ಇದನ್ನೂ ಓದಿ: 200 ವರ್ಷಗಳ ನಂತರ ಪ್ರಥಮ ಬಾರಿಗೆ ಶ್ರೀ ವರದರಾಜ ಪೆರುಮಾಳ್ ದೇವಸ್ಥಾನವನ್ನು ಪ್ರವೇಶಿಸಿದ ದಲಿತರು

share
Next Story
X