Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯ...

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯ ಕಾಫಿನಾಡಿನ ನಂಟು

3 Jan 2023 6:55 PM IST
share
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯ ಕಾಫಿನಾಡಿನ ನಂಟು

ಚಿಕ್ಕಮಗಳೂರು, ಜ.3: ಸೋಮವಾರ ನಿಧನರಾಗಿರುವ ನಡೆದಾಡುವ ದೇವರು, ಶತಮಾನದ ಸಂತ ಎಂದೇ ಖ್ಯಾತರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಿಗೂ ಕಾಫಿನಾಡಿಗೂ ಅವಿನಾಭಾವ ಸಂಬಂಧ ಇದ್ದು, 2004ರಲ್ಲಿ  ಜಿಲ್ಲೆಗೆ ಭೇಟಿನೀಡಿದ್ದ ಅವರು ಇಲ್ಲಿನ ಪರಿಸರದ ಸೌಂದರ್ಯಕ್ಕೆ ಮನಸೋತ್ತಿದ್ದರು. ಇಲ್ಲಿನ ರಮಣೀಯ ಪರಿಸರದ ನಡುವೆ ಹೆಜ್ಜೆ ಹಾಕುವ ಮೂಲಕ ಜಿಲ್ಲೆಯಲ್ಲೂ ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳು ಸೋಮವಾರ ನಿಧನರಾಗಿದ್ದಾರೆ. ಈ ಹಿಂದೆ ಅವರು ಚಿಕ್ಕಮಗಳೂರಿಗೆ ಬಂದು ಪ್ರವಚನ ನೀಡಿದ್ದ ಸವಿಗಳಿಗೆಯನ್ನು ಜಿಲ್ಲೆಯ ಜನತೆ ಮೆಲುಕು ಹಾಕುತ್ತಾ ಅವರನ್ನು ಸ್ಮರಿಸಿದ್ದಾರೆ. ಶ್ರೀಗಳು ಅವರು ಉಳಿಸಿ ಹೋಗಿರುವ ಹೆಜ್ಜೆ ಗುರುತುಗಳನ್ನು ಜನತೆ ಇಂದು ನೆನೆದು ಬಾವುಕರಾಗಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ಅವರು 2004ರಲ್ಲಿ ಡಿಎಸ್‍ಎಜಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಒಂದು ತಿಂಗಳುಗಳ ಕಾಲ ಪ್ರವಚನದಲ್ಲಿ ಪಾಲ್ಗೊಂಡು ಭಕ್ತರಿಗೆ ಸಂದೇಶ ನೀಡಿದ್ದರು. ಸಾವಿರಾರು ಜನರ ಅವರ ಪ್ರವಚನವನ್ನು ಆಲಿಸಿದ್ದರು.

ಕಾರ್ಯಕ್ರಮದಲ್ಲಿ ಮಾನವೀಯ ಮೌಲ್ಯ ಮತ್ತು ಬದುಕಿನ ಬಗ್ಗೆ ಸುಧೀರ್ಘ ಪ್ರವಚನ ನೀಡಿದ್ದ ಅವರನನ್ನು ಜೂನಿಯರ್ ಕಾಲೇಜು ಅಧ್ಯಾಪಕ ಗಣಾಚಾರಿ ಅವರ ತಂಡ ಚಿಕ್ಕಮಗಳೂರಿಗೆ ಕರೆಸಿ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಸಿದ್ದೇಶ್ವರ ಸ್ವಾಮೀಜಿ ಅವರದ್ದು ಚಿಕ್ಕಮಗಳೂರಿನಲ್ಲಿ ಇದೇ ಮೊದಲ ಹಾಗೂ ಕೊನೆಯ ಕಾರ್ಯಕ್ರಮವಾಗಿದ್ದು, ಆ ಬಳಿಕ ಅವರು ಚಿಕ್ಕಮಗಳೂರಿಗೆ ಬಂದಿರಲಿಲ್ಲ. 

ಕಾಫಿನಾಡಿಗೆ ಭೇಟಿ ನೀಡಿದ್ದ ವೇಳೆ ಅವರು ಇಲ್ಲಿನ ಸುಂದರ ರಮಣೀಯ ಪ್ರಾಕೃತಿಕ ಸೌಂದರ್ಯಕ್ಕೆ ಮನಸೋತಿದ್ದರು. ನಿಸರ್ಗದ ಮಡಿಲಿನಲ್ಲಿ ಸದಾ ಬದುಕಬೇಕು ಎಂದು ಹೇಳುತ್ತಿದ್ದ ಶ್ರೀಗಳು ಚಿಕ್ಕಮಗಳೂರಿನಲ್ಲಿ ಒಂದು ತಿಂಗಳ ಕಾಲ ನಗರದ ಹೊರವಲಯದಲ್ಲಿರುವ ಕೈಮರದ ಎನ್‍ಎಂಡಿಸಿ ಬಳಿ ಇರುವ ಆದಿಚುಂಚನಗಿರಿ ಪ್ರದೇಶದಿಂದ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ದಿನನಿತ್ಯ ವಾಕಿಂಗ್ ಮಾಡುತ್ತಿದ್ದರು. ಸ್ಥಳೀಯ ಉತ್ಸಾಹಿ ಯುವಕರು ಇವರ ಜೊತೆ ವಾಕಿಂಗ್, ಟ್ರಕ್ಕಿಂಗ್ ಹೋಗುತ್ತಿದ್ದರು. ಬೆಟ್ಟವನ್ನು ಸಲೀಸಾಗಿ ಹತ್ತುತ್ತಿದ್ದ ಶ್ರೀಗಳು ಈ ಪ್ರದೇಶ ಅತ್ಯಂತ ಪುಣ್ಯದ ಪ್ರದೇಶವೆಂದು ಹೇಳಿ ಮುಳ್ಳಯ್ಯನಗಿರಿ ಭಾಗದಲ್ಲಿ ಟ್ರಕ್ಕಿಂಗ್ ಮಾಡಿದ್ದರು.

ರಾತ್ರಿವೇಳೆಯಲ್ಲಿ ಬೆಟ್ಟದಲ್ಲಿ ನಡೆಯುವ ಸಂದರ್ಭದಲ್ಲಿ ಟಾರ್ಚ್‍ಲೈಟ್ ಇಲ್ಲದೆ ನಡೆಡಯುವಂತೆ ಹೇಳುತ್ತಿದ್ದರು. ಕತ್ತಲಿನಲ್ಲಿ ನಡೆದರೇ ಎಂತಹ ಕಷ್ಟವನ್ನಾದರೂ ಕೂಡ ಎದುರಿಸಬಹುದು ಎನ್ನುವ ಪಾಠವನ್ನು ಅವರು ತಮ್ಮೊಂದಿಗಿದ್ದವರಿಗೆ ಹೇಳಿಕೊಡುತ್ತಿದ್ದರು. ಅಂದು ಅವರ ಜೊತೆ ಒಡನಾಟ ಹೊಂದಿದವರು ಆ ಸವಿ ನೆನಪುಗಳನ್ನು ಮೆಲಕು ಹಾಕಿದ್ದಾರೆ. ಅಂದು ಜಿಲ್ಲೆಗೆ ಆಗಮಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಜೊತೆ ನಗರದ ಉಪ್ಪಳಿಯ ತೇಜೇಶ್‍ಕುಮಾರ್, ಯುವಕರಾದ ಇಂದ್ರೇಶ್, ಪ್ರಕಾಶ್, ಆರಾಧ್ಯ, ಕಿರಣ್, ಹೇಮಂತ್, ಪ್ರಗತಿಪರ ರೈತ, ರಾಜ್ಯೋತ್ಸವ ಪುರಸ್ಕೃತ ಚಂದ್ರಶೇಖರ್ ನಾರಾಯಣಪುರ, ಎಐಟಿ ಪ್ರಾಂಶುಪಾಲ ಸುಬ್ಬರಾಯ, ವೈದ್ಯ ಜೆ.ಪಿ.ಕೃಷ್ಣೇಗೌಡ ಸೇರಿದಂತೆ ಅನೇಕರು ಗಿರಿಶ್ರೇಣಿಗಳಲ್ಲಿ ಹೆಜ್ಜೆ ಹಾಕಿದ್ದರು. ಅವರು ಜಿಲ್ಲೆಗೆ ಆಗಮಿಸಿದ್ದ ವೇಳೆ ಇಲ್ಲಿನ ಪರಿಸರಕ್ಕೆ ಭೇಟಿ ನೀಡಿದ್ದ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗುತ್ತಿವೆ.

share
Next Story
X