Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜ.4ರಿಂದ ಅಖಿಲ ಭಾರತ ಅಂತರ ವಿವಿ...

ಉಡುಪಿ: ಜ.4ರಿಂದ ಅಖಿಲ ಭಾರತ ಅಂತರ ವಿವಿ ಪುರುಷರ ವಾಲಿಬಾಲ್ ಟೂರ್ನಿ

ಮಂಗಳೂರು ವಿವಿ ಸೇರಿದಂತೆ 16 ತಂಡಗಳು ಸ್ಪರ್ಧಾಕಣದಲ್ಲಿ

3 Jan 2023 9:15 PM IST
share
ಉಡುಪಿ: ಜ.4ರಿಂದ ಅಖಿಲ ಭಾರತ ಅಂತರ ವಿವಿ ಪುರುಷರ ವಾಲಿಬಾಲ್ ಟೂರ್ನಿ
ಮಂಗಳೂರು ವಿವಿ ಸೇರಿದಂತೆ 16 ತಂಡಗಳು ಸ್ಪರ್ಧಾಕಣದಲ್ಲಿ

ಉಡುಪಿ: ಬುಧವಾರದಿಂದ (ಜ.4) ಮುಂದಿನ ಐದು ದಿನಗಳ ಕಾಲ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪ್ರದರ್ಶನಕ್ಕೆ ಉಡುಪಿ ಸಾಕ್ಷಿಯಾಗಲಿದೆ. ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಮತ್ತು ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ  ಜಂಟಿ ಆಶ್ರಯದಲ್ಲಿ 2022-23ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಚಾಂಪಿಯನ್‌ಷಿಪ್ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ.

ಜ.4ರಿಂದ 8ರವರೆಗೆ ಹೊನಲು ಬೆಳಕಿನಲ್ಲಿ ನಡೆಯಲಿರುವ ಈ ಚಾಂಪಿಯನ್‌ಷಿಪ್‌ನಲ್ಲಿ ನಾಲ್ಕು ವಲಯಗಳಿಂದ ಅಗ್ರಸ್ಥಾನ ಪಡೆದ ತಲಾ ನಾಲ್ಕು ತಂಡಗಳಂತೆ ಒಟ್ಟು  ಹದಿನಾರು ತಂಡಗಳು ರಾಷ್ಟ್ರೀಯ ವಿವಿ ಚಾಂಪಿಯನ್ ತಂಡದ ಪ್ರಶಸ್ತಿಗಾಗಿ ಸೆಣಸಲಿವೆ ಎಂದು ವಾಲಿಬಾಲ್ ಟೂರ್ನಿಯ ಸಂಘಟನಾ ಸಮಿತಿಯ  ಸಂಯೋಜಕ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಸುಕುಮಾರ್ ತಿಳಿಸಿದ್ದಾರೆ.

ಹಾಲಿ ರಾಷ್ಟ್ರೀಯ ಚಾಂಪಿಯನ್ ಕೇರಳದ ಕಲ್ಲಿಕೋಟೆ ವಿವಿ ಹಾಗೂ ರನ್ನರ್ ಅಪ್ ಹರಿಯಾಣದ ಕುರುಕ್ಷೇತ್ರ ವಿವಿಗಳು ಈ ಬಾರಿಯೂ ಅಂತರ ವಲಯ ಸ್ಪರ್ಧೆಗೆ ತೇರ್ಗಡೆಗೊಂಡಿವೆ.  ಭಾಗವಹಿಸುವ 16 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಚಾಂಪಿಯನ್ ಕಲ್ಲಿಕೋಟೆ ವಿವಿ ಡಿ ಗುಂಪಿನಲ್ಲಿದ್ದರೆ, ರನ್ನರ್‌ಅಪ್ ಕುರುಕ್ಷೇತ್ರ ವಿವಿ ಎ ಗುಂಪಿನಲ್ಲಿದೆ. ಆತಿಥೇಯ ಮಂಗಳೂರು ವಿವಿ ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ.

ತಂಡಗಳ ವಿವರ:

ಎ ಗುಂಪು: ಕುರುಕ್ಷೇತ್ರ ವಿವಿ, ಜೈಪುರದ ರಾಜಾಸ್ತಾನ ವಿವಿ, ಕೋಲ್ಕತ್ತಾದ ಅದಮಾಸ್ ವಿವಿ, ಚೆನ್ನೈನ ಮದರಾಸು ವಿವಿ.

ಬಿ ಗುಂಪು: ಎಸ್‌ಆರ್‌ಎಂ ವಿವಿ ಚೆನ್ನೈ, ಮಹಾತ್ಮಗಾಂಧಿ ಕಾಶಿ ವಿದ್ಯಾಪೀಠ ವಾರಣಸಿ, ಗುರುನಾನಕ್ ದೇವ್ ವಿವಿ ಅಮೃತಸರ, ಶ್ರೀಕುಶಾಲದಾಸ್ ವಿವಿ ಹನುಮಾನ್‌ಗಡ್.

ಸಿ ಗುಂಪು: ಪುಣೆಯ ಭಾರತಿ ವಿವಿ, ಚಂಡಿಗಢದ ಪಂಜಾಬ್ ವಿವಿ, ಮಂಗಳೂರಿನ ಮಂಗಳೂರು ವಿವಿ, ಭುವನೇಶ್ವರದ ಕೆಐಐಟಿ ಡೀಮ್ಡ್ ವಿವಿ.

ಡಿ ಗುಂಪು: ಉತ್ಕಲ ವಿವಿ ಭುವನೇಶ್ವರ, ಕಲ್ಲಿಕೋಟೆ ವಿವಿ ಕಲ್ಲಿಕೋಟೆ, ಡಾ.ಬಿಎಎಂ ವಿವಿ ಔರಂಗಬಾದ್ ಹಾಗೂ ಹಿಮಾಚಲ ಪ್ರದೇಶ ವಿವಿ.

ಸ್ಪರ್ಧೆಗಳು ಜ.4ರಂದೇ ಪ್ರಾರಂಭಗೊಳ್ಳಲಿದ್ದು, ಮೊದಲ ದಿನ ಬೆಳಗ್ಗೆ 7:30ರಿಂದ ರಾತ್ರಿ 10:30ರವರೆಗೆ ಒಟ್ಟು ಎಂಟು ಲೀಗ್ ಪಂದ್ಯಗಳು ನಡೆಯಲಿವೆ. ನಾಳೆ ಮಂಗಳೂರು ವಿವಿ, ಪಂಜಾಬ್ ವಿವಿಯನ್ನು, ಕಲ್ಲಿಕೋಟೆ ವಿವಿ, ಡಾ.ಬಿಎಎಂ ವಿವಿ ಔರಂಗಬಾದ್ ತಂಡವನ್ನು ಹಾಗೂ ದಿನದ ಮೊದಲ ಪಂದ್ಯದಲ್ಲಿ ಕುರುಕ್ಷೇತ್ರ ವಿವಿ, ಚೆನ್ನೈನ ಮದರಾಸು ವಿವಿಯನ್ನು ಎದುರಿಸಲಿವೆ ಎಂದು ಸುಕುಮಾರ್ ವಿವರಿಸಿದರು.

ಉದ್ಘಾಟನೆ: ಟೂರ್ನಿಯ ಅಧಿಕೃತ ಉದ್ಘಾಟನೆ ಜ.5ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ. ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥರು ಹಾಗೂ ಶ್ರೀಈಶಪ್ರಿಯತೀರ್ಥರ ಆಶೀರ್ವಚನದೊಂದಿಗೆ ಕರ್ನಾಟಕ   ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಟೂರ್ನಿಯನ್ನು ಉದ್ಘಾಟಿಸಲಿದ್ದಾರೆ.

ಅಲ್ಲದೇ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಜಂಟಿ ಕಾವ್ಯದರ್ಶಿ ಡಾ.ಬಲ್ವಿತ್ ಸಿಂಗ್, ಜಿಲ್ಲಾ ಉಸುತಿವಾರಿ ಸಚಿವ ಎಸ್. ಅಂಗಾರ, ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತುತಿ ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಹಾಗೂ ಶಾಸಕರ ಸಹಿತ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಜ.4ರಿಂದ 6ರವರೆಗೆ ಲೀಗ್ ಪಂದ್ಯಗಳು ನಡೆಯಲಿದ್ದು, ಜ.7ರಂದು ಪ್ರತಿ ಗುಂಪಿನ ಎರಡು ಅಗ್ರಸ್ಥಾನಿಗಳು ಕ್ವಾರ್ಟರ್ ಪೈನಲ್‌ನಲ್ಲಿ ಆಡಲಿದೆ. ಜ.8ರಂದು ಸೆಮಿಪೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ.

ಜ.7ರಂದು ಸಂಜೆ 5:30ಕ್ಕೆ ‘ಪ್ರಜ್ಞಾ ಗೌರವ’ ಎಂಬ ವಿಶೇಷ ಕಾರ್ಯಕ್ರಮ ದಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಸಾಧಕ ರಿಗೆ ಸನ್ಮಾನವಿದೆ. ಜ.8ರಂದು ಸಂಜೆ 7 ಗಂಟೆಗೆ ಫೈನಲ್ ಪಂದ್ಯದ ಬಳಿಕ  ಸಮಾರೋಪ ಸಮಾರಂಭ, ವಿಜೇತರಿಗೆ ಬಹುಮಾನ ವಿತರಣೆ  ನಡೆಯಲಿದೆ.

share
Next Story
X