Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗೊಂದಲದಲ್ಲಿ ಪ್ರಥಮ ದರ್ಜೆ ಕಾಲೇಜಿನ...

ಗೊಂದಲದಲ್ಲಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು

ಅತಿಥಿ ಉಪನ್ಯಾಸಕ ಹುದ್ದೆಗೆ ಹೊಸ ಅರ್ಜಿ ಆಹ್ವಾನಿಸುವ ಸಾಧ್ಯತೆ

ಅನಿಲ್ ಕುಮಾರ್ ಎಂ.ಅನಿಲ್ ಕುಮಾರ್ ಎಂ.3 Jan 2023 11:53 PM IST
share
ಗೊಂದಲದಲ್ಲಿ  ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು
ಅತಿಥಿ ಉಪನ್ಯಾಸಕ ಹುದ್ದೆಗೆ ಹೊಸ ಅರ್ಜಿ ಆಹ್ವಾನಿಸುವ ಸಾಧ್ಯತೆ

ಬೆಂಗಳೂರು, ಜ.3: ಕಾಲೇಜು ಶಿಕ್ಷಣ ಇಲಾಖೆಯು ಡಿ.21ರಂದು ಸುತ್ತೋಲೆಯನ್ನು ಹೊರಡಿಸಿದ್ದು, ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸೇವಾವಧಿಯನ್ನು ಡಿ.31ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿತ್ತು. ಈ ಗೊಂದಲಕಾರಿ ಆದೇಶದಿಂದ 10 ಸಾವಿರ ಅತಿಥಿ ಉಪ್ಯಾಸಕರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಸುತ್ತೋಲೆಯಲ್ಲಿ ತಿಳಿಸಿರುವಂತೆ ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಆದ ಅತಿಥಿ ಉಪನ್ಯಾಸಕರು ಡಿಸೆಂಬರ್ ಅಂತ್ಯದವರೆಗೆ ಸೇವೆಯನ್ನು ಸಲ್ಲಿಸಲು ಸರಕಾರ ಅನುಮತಿಯನ್ನು ನೀಡಿದೆ. ಹಾಗಾಗಿ ಕಾಲೇಜು ಶಿಕ್ಷಣ ಇಲಾಖೆ ಅವರ ಸೇವಾವಧಿಯನ್ನು ವಿಸ್ತರಿಸಿದೆ.

ಆದರೆ ಡಿಸೆಂಬರ್ ಮುಗಿದು ಜನವರಿ ತಿಂಗಳು ಬಂದಿದ್ದು, ಸೇವಾವಧಿಯ ಕುರಿತು ಶಿಕ್ಷಣ ಇಲಾಖೆಯು ಯಾವುದೇ ಆದೇಶವನ್ನು ಪ್ರಕಟಿಸಿಲ್ಲ. ಇದು ಅತಿಥಿ ಉಪನ್ಯಾಸಕರನ್ನು ಸಂಕಷ್ಟಕ್ಕೆ ದೂಡಿದೆ. ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಇಲಾಖೆಯು ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿ, ಆಯ್ಕೆ ಮಾಡುತ್ತದೆಯೋ ಅಥವಾ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರನ್ನೇ ಮುಂದುವರೆಸುತ್ತದೆಯೋ ಎಂದು ಅತಿಥಿ ಉಪನ್ಯಾಸಕರಲ್ಲಿ ಗೊಂದಲ ಸೃಷ್ಟಿಯಾಗಿದೆ.

ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರಿಗೂ ಅತಿಥಿ ಉಪನ್ಯಾಸಕರ ಸೇವಾವಧಿ ವಿಸ್ತರಣೆ ಕುರಿತು ಗೊಂದಲ ಸೃಷ್ಟಿಯಾಗಿದೆ. ಸರಕಾರದ ಆದೇಶ ಇಲ್ಲದೆ, ಅತಿಥಿ ಉಪನ್ಯಾಸಕರನ್ನು ಮುಂದುವರಿಸುವುದು ಹೇಗೆ ಎಂದು ಗೊಂದಲದಲ್ಲಿದ್ದಾರೆ. ಹಾಗಾಗಿ ಕೆಲ ಕಾಲೇಜುಗಳ ಪ್ರಾಂಶುಪಾಲರು ಸೇವೆಯನ್ನು ಮುಂದುವರಿಸುವುದು ಬಿಡುವುದು ಅತಿಥಿ ಉಪನ್ಯಾಸಕರಿಗೆ ಬಿಟ್ಟ ವಿಷಯ ಎಂದು ಹೇಳುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರೊಬ್ಬರು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಸೇವಾವಧಿಯನ್ನು ವಿಸ್ತರಿಸುವುದಾಗಿ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡಲಾಗಿದೆಯೇ ಹೊರತು, ಅಧಿಕೃತವಾಗಿ ಇಲಾಖೆಯು ಸುತ್ತೋಲೆಯನ್ನು ಪ್ರಕಟಿಸಿಲ್ಲ. ಇಲಾಖೆಯ ಮಟ್ಟದಲ್ಲಿ ಸಭೆ ನಡೆದಿದ್ದು, ಪ್ರಸಕ್ತ ವರ್ಷದ ಅತಿಥಿ ಉಪನ್ಯಾಸಕ ಹುದ್ದೆಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗುತ್ತದೆ. ಬಂದ ಅರ್ಜಿಗಳನ್ನು ಸೇವಾ ಅನುಭವದ ಆಧಾರದ ಮೇಲೆ ವಿಂಗಡಿಸಿ, ಕೌನ್ಸಿಲಿಂಗ್ ನಡೆಸಲು ನಿರ್ಧರಿಸಲಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಅತಿಥಿ ಉಪನ್ಯಾಸಕರೊಬ್ಬರು ಹೇಳಿದ್ದಾರೆ. ಸರಕಾರದ ದ್ವಂದ್ವ ನೀತಿಯಿಂದ ಬಹುತೇಕ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಸೇವೆಯನ್ನು ಸಲ್ಲಿಸಲು ಹಿಂಜರಿಯುತ್ತಿದ್ದು, ತರಗತಿಗಳನ್ನು ನಿರಾಕರಿಸುತ್ತಿದ್ದಾರೆ.

ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ ಬೆರಳೆಣಿಕೆಯ ಖಾಯಂ ಉಪನ್ಯಾಸಕರೆ ಕಾಲೇಜುಗಳಲ್ಲಿ ಪಾಠ ಮಾಡುತ್ತಿದ್ದು, ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬೋಧನೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

ಅತಿಥಿ ಉಪನ್ಯಾಸಕ ಹುದ್ದೆಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿ, ನೂತನವಾಗಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಿದರೆ ಅತಿಥಿ ಉಪನ್ಯಾಸಕರು ಅತಂತ್ರರಾಗುತ್ತಾರೆ. ಸರಕಾರ ಅತಿಥಿ ಉಪನ್ಯಾಸಕರಿಗೆ ಯಾವುದೇ ಭತ್ತೆಗಳನ್ನು ನೀಡುವುದಿಲ್ಲ. ಹಾಗಾಗಿ ಹಿಂದಿನ ವರ್ಷ ಸರಕಾರ ತೆಗೆದುಕೊಂಡ ನಿರ್ಧಾರದಿಂದ ಅತಿಥಿ ಉಪನ್ಯಾಸಕರಿಗೆ ಅನ್ಯಾಯವೇ ಆಗಿದೆ. ಮೊದಲು ಕರ್ತವ್ಯ ನಿರ್ವಹಿಸಿದ್ದ ಕಾಲೇಜಿನಲ್ಲಿ ಅವರು ಕರ್ತವ್ಯ ನಿರ್ವಹಿಸಲು ಸಾಧ್ಯವಾಗಿಲ್ಲ. ಸರಕಾರವು ನಿಯೋಜನೆ ಮಾಡಿದ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೂ ಆ ಕಾಲೇಜಿಗೆ ಹೊಂದಿಕೊಂಡಿದ್ದೇವೆ. ಈಗ ಕೌನ್ಸಿಲಿಂಗ್‌ನಲ್ಲಿ ಬೇರೆ ಜಿಲ್ಲೆಯ ಕಾಲೇಜಿಗೆ ಆಯ್ಕೆಯಾದರೆ, ಆ ಜಿಲ್ಲೆಗೆ ನಾವು ಕುಟುಂಬ ಸಮೇತವಾಗಿ ಹೋಗಲು ಕಷ್ಟವಾಗುತ್ತದೆ.

- ಡಾ.ಸೋಮಶೇಖರ್ ಎಚ್.ಶಿಮೊಗ್ಗ್ಗಿ, ರಾಜ್ಯಾಧ್ಯಕ್ಷ, ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮನ್ವಯ ಸಮಿತಿ

share
ಅನಿಲ್ ಕುಮಾರ್ ಎಂ.
ಅನಿಲ್ ಕುಮಾರ್ ಎಂ.
Next Story
X