Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ವರ್ಷದಿಂದ ಮೊಬೈಲ್ ಬಿಲ್ ದುಬಾರಿ...

ಈ ವರ್ಷದಿಂದ ಮೊಬೈಲ್ ಬಿಲ್ ದುಬಾರಿ ಸಾಧ್ಯತೆ: ಏಕೆ ಮತ್ತು ಹೇಗೆ?

4 Jan 2023 3:29 PM IST
share
ಈ ವರ್ಷದಿಂದ ಮೊಬೈಲ್ ಬಿಲ್ ದುಬಾರಿ ಸಾಧ್ಯತೆ: ಏಕೆ ಮತ್ತು ಹೇಗೆ?

ಹೊಸದಿಲ್ಲಿ: ಈ ವರ್ಷ ಮೊಬೈಲ್ ಸೇವಾ ಕಂಪನಿಗಳು ಮೊಬೈಲ್ ಸೇವಾ ಶುಲ್ಕ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು gadgetsnow.com ವರದಿ ಮಾಡಿದೆ.

ಮೊಬೈಲ್ ಸೇವಾ ಕಂಪನಿಗಳು ಈ ವರ್ಷದ ಮಧ್ಯಭಾಗದಲ್ಲಿ ಮೊಬೈಲ್ ಸೇವಾ ಶುಲ್ಕ ಏರಿಕೆ ಮಾಡುವ ಸಾಧ್ಯತೆ ಇದೆ. ಈ ಕುರಿತು ವರದಿ ಪ್ರಕಟಿಸಿರುವ ಮಧ್ಯಸ್ಥ ಕಂಪನಿ IIFL Securities, "5G ಸೇವೆಗೆ ಸಂಬಂಧಿಸಿದಂತೆ ಪ್ರತಿ ಬಳಕೆದಾರನಿಂದ ಗಳಿಸುವ ಸರಾಸರಿ ಆದಾಯ (ARPU) ತಕ್ಷಣದಲ್ಲಿ ಏರಿಕೆ ಕಾಣುವುದು ಅಸಾಧ್ಯವಾಗಿದ್ದು, ಟೆಲಿಕಾಂ ಕಂಪನಿಗಳ ಪಾಲಿಗೆ 4G ಪ್ರೀಪೇಯ್ಡ್ ಶುಲ್ಕ ಏರಿಕೆ ಮಾತ್ರ ಬಹು ಮುಖ್ಯ ಪ್ರತಿ ಬಳಕೆದಾರನಿಂದ ಗಳಿಸುವ ಸರಾಸರಿ ಆದಾಯವಾಗಿದೆ. 2023ರ ಮಧ್ಯಭಾಗದಲ್ಲಿ 4G ಸೇವಾ ಶುಲ್ಕ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ" ಎಂದು ಹೇಳಿದೆ.

ಇದೇ ವೇಳೆ ಮೊಬೈಲ್ ಸೇವಾ ಶುಲ್ಕ ಏರಿಕೆ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಆಸುಪಾಸು ನಡೆದರೆ, ಅದರಿಂದ ರಾಜಕೀಯ ತಿರುಗೇಟು ಆಗುವ ಸಾಧ್ಯತೆಯೂ ಇದೆ ಎಂದೂ ವರದಿಯಲ್ಲಿ ಹೇಳಲಾಗಿದೆ.

ಮೊಬೈಲ್ ಸೇವಾ ಕಂಪನಿಗಳು ಪ್ರೀ ಪೇಯ್ಡ್ ಮತ್ತು ಪೋಸ್ಟ್ ಪೇಯ್ಡ್ ಶುಲ್ಕಗಳೆರಡನ್ನೂ ಏರಿಕೆ ಮಾಡುವ ಸಾಧ್ಯತೆ ಇದೆ. ಪೋಸ್ಟ್ ಪೇಯ್ಡ್ ಯೋಜನೆಗಳಿಂದ ಗಳಿಸುತ್ತಿರುವ ಆದಾಯ ಕುಂಠಿತಗೊಳ್ಳುತ್ತಲೇ ಸಾಗುತ್ತಿರುವುದರಿಂದ ಪೋಸ್ಟ್ ಪೇಯ್ಡ್ ಬಳಕೆದಾರರು ತಮ್ಮ ಯೋಜನೆಗಳಲ್ಲಿ ಹೆಚ್ಚು ಶುಲ್ಕ ಏರಿಕೆಯನ್ನು ಕಾಣಲಿದ್ದಾರೆ ಎಂದು ಟೆಲಿಕಾಂ ವಿಶ್ಲೇಷಕರು ಅಂದಾಜಿಸಿದ್ದಾರೆ.

ಭಾರತದಲ್ಲಿ ಮೊಬೈಲ್ ಸೇವಾ ಕಂಪನಿಗಳು ನವೆಂಬರ್, 2021ರಲ್ಲಿ ಮೊಬೈಲ್ ಸೇವಾ ಶುಲ್ಕಗಳ ಏರಿಕೆಯನ್ನು ಪ್ರಕಟಿಸಿದ್ದವು. ಮೊದಲಿಗೆ ವೊಡಾಫೋನ್-ಐಡಿಯಾ ಕಂಪನಿಯು ಮೊಬೈಲ್ ಸೇವಾ ಶುಲ್ಕವನ್ನು ಶೇ. 42ರಷ್ಟು ಏರಿಕೆ ಮಾಡಿತ್ತು. ನಂತರ ವೊಡಾಫೋನ್-ಐಡಿಯಾ ಕಂಪನಿಯನ್ನು ಭಾರ್ತಿ ಏರ್‌ಟೆಲ್ ಮತ್ತು ಜಿಯೊ ಕಂಪನಿಗಳು ಅನುಸರಿಸಿದ್ದವು.

ಆದರೆ, 5G ಸೇವೆಯನ್ನು ಉನ್ನತ ಸೇವೆ ಎಂದು ಪರಿಗಣಿಸುವ ಯಾವುದೇ ಯೋಜನೆ ಹೊಂದಿಲ್ಲ ಎಂದು ಏರ್‌ಟೆಲ್ ಮತ್ತು ಜಿಯೊ ಕಂಪನಿಗಳು ಈಗಾಗಲೇ ಸ್ಪಷ್ಟಪಡಿಸಿವೆ. ಅಂದರೆ, ಮೊಬೈಲ್ ಬಳಕೆದಾರರು ಹಾಲಿ ಶುಲ್ಕ ಯೋಜನೆಯೊಂದಿಗೆ 5G ಸೇವೆ ಪಡೆಯುವುದು ಮುಂದುವರಿಯಲಿದೆ. ಹೀಗಿದ್ದೂ, ಬಳಕೆದಾರರು 5G ಸೇವೆಯನ್ನು ಪಡೆಯಲು ಕನಿಷ್ಠ ಪ್ರಮಾಣದ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕಿದ್ದು, ಆ ನೀತಿ ಈಗಾಗಲೇ ಜಾರಿಯಲ್ಲಿದೆ. ನಿರ್ದಿಷ್ಟ ಸೇವಾ ಶುಲ್ಕ ಯೋಜನೆಗಳನ್ನು ಹೊರತುಪಡಿಸಿ, ಈಗಾಗಲೇ ಏರ್‌ಟೆಲ್ ಮತ್ತು ಜಿಯೊ ಕಂಪನಿಗಳೆರಡೂ ಪ್ರೀಪೇಯ್ಡ್ ಬಳಕೆದಾರರಿಗೆ 5G ಸೇವೆಯನ್ನು ಒದಗಿಸುತ್ತಿವೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ 4,000 ಮನೆಗಳು, ಶಾಲೆಗಳು, ಮಸೀದಿಗಳ ತೆರವು ವಿರುದ್ಧ ಅರ್ಜಿ: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

share
Next Story
X