Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೃಹ ಸಚಿವ ಖಾತೆಯಲ್ಲಿ ಈಗ ನಾನು...

ಗೃಹ ಸಚಿವ ಖಾತೆಯಲ್ಲಿ ಈಗ ನಾನು ಎಕ್ಸ್‌ಪರ್ಟ್ ಆಗಿದ್ದೇನೆ: ಆರಗ ಜ್ಞಾನೇಂದ್ರ

''ಗೃಹ ಸಚಿವರನ್ನು ಕಾಡುವಷ್ಟು ವಿಷಯಗಳು ಬೇರೆ ಯಾರಿಗೂ ಇಲ್ಲ...''

4 Jan 2023 5:37 PM IST
share
ಗೃಹ ಸಚಿವ ಖಾತೆಯಲ್ಲಿ ಈಗ ನಾನು ಎಕ್ಸ್‌ಪರ್ಟ್ ಆಗಿದ್ದೇನೆ: ಆರಗ ಜ್ಞಾನೇಂದ್ರ
''ಗೃಹ ಸಚಿವರನ್ನು ಕಾಡುವಷ್ಟು ವಿಷಯಗಳು ಬೇರೆ ಯಾರಿಗೂ ಇಲ್ಲ...''

ಶಿವಮೊಗ್ಗ, ಜ.04: ನಾನೇನೂ ಐದು ವರ್ಷ ಮಂತ್ರಿಯಾಗಿದ್ದವನಲ್ಲ. ಕೇವಲ ಒಂದೂವರೆ ವರ್ಷದ ಗೃಹಮಂತ್ರಿ.ಇರುವ ಅವಧಿಯಲ್ಲಿ ಜಿಲ್ಲೆಗೆ ಗರಿಷ್ಠ ಅನುದಾನ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದ ಪೂರ್ವ ಸಂಚಾರ ಪೊಲೀಸ್  ಠಾಣೆಯ ನೂತನ ಕಟ್ಟಡವನ್ನು ಲೋಕಾರ್ಪಣೆ ಗೊಳಿಸಿ ಅವರು ಮಾತನಾಡಿದರು.

''ರಾಜ್ಯದಲ್ಲಿ ಗೃಹ ಸಚಿವರನ್ನು ಕಾಡುವಷ್ಟು ವಿಷಯಗಳು ಬೇರೆ ಯಾರಿಗೂ ಇಲ್ಲ. ಈ ವಿಚಾರದಲ್ಲಿ ಹೆಚ್ಚಿನ ಅನುಭಗಳಿಲ್ಲದೆ ಇದ್ದ ನನಗೆ ಆರಂಭದಲ್ಲಿ ಸಂಕೋಚವಾಗುತ್ತಿತ್ತು. ಆಯನೂರು ಮಂಜುನಾಥರಂಥವರು ನಿನಗ್ಯಾಕೆ ಗೃಹ ಖಾತೆ ಅಂತಲೂ ಕೇಳಿದ್ದಾರೆ. ಆದರೆ, ಈಗ ನಾನು ಎಕ್ಸ್‌ಪರ್ಟ್ ಆಗಿದ್ದೇನೆ'' ಎಂದರು.

''ಶಿವಮೊಗ್ಗದ ಸೆಂಟ್ರಲ್ ಜೈಲು ಆವರಣದಲ್ಲಿ 108 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಜೈಲು ನಿರ್ಮಾಣವಾಗಲಿದೆ. 10 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗಕ್ಕೆ ಎಫ್ ಎಸ್ ಎಲ್ ಕೇಂದ್ರ ಸ್ಥಾಪನೆ ಆಗುತ್ತಿದೆ. 48 ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ಪ್ರತಿ ಠಾಣಿಗೆ ಸೈಬರ್ ಕ್ರೈಮ್ ತಜ್ಞರ ನೇಮಕ ಮಾಡಲಾಗಿದೆ. ಇಲಾಖೆಗೆ ಹೊಸ ವಾಹನ ಕೊಟ್ಟಿದ್ದೇವೆ'' ಎಂದರು.

''ನಾನು ಮಂತ್ರಿಯಾದ ಬಳಿಕ  ಹಿಜಾಬ್ ಸೇರಿದಂತೆ ಎಲ್ಲ ಸವಾಲು ನನ್ನ ಅವಧಿಯಲ್ಲಿ ನಡೆಯಿತು. ಪಿಎಸ್ ಐ ನೇಮಕಾತಿ ಹಗರಣ ಕೂಡಾ ಸವಾಲಾಗಿತ್ತು. ಬೇಲಿಯೇ ಎದ್ದು ಮೇಯ್ದ ಪರಿಸ್ಥಿತಿ ಅದು. ಆದರೂ ನಮ್ಮ ಇಲಾಖೆ ಪಾರದರ್ಶಕವಾಗಿ ತನಿಖೆ ಮಾಡಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಐಪಿಎಸ್ ಅಧಿಕಾರಿಯನ್ನು ಜೈಲಿಗೆ ಕಳಿಸಿದ್ದೇವೆ. ಗೃಹ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಇದರ ಕ್ರೆಡಿಟ್ ಸಾಮಾನ್ಯ ಪೇದೆಯಿಂದ ಅಧಿಕಾರಿಗಳವರೆಗೆ ಸಲ್ಲುತ್ತದೆ'' ಎಂದರು.

''ಪ್ರತಿಪಕ್ಷಗಳು ವಿತಂಡವಾದ ಮಾಡುತ್ತಿವೆ. ಆರೋಪಿಗಳಿಗೆ ರಕ್ಷಣೆ ನೀಡುತ್ತಿವೆ. ಶಿವಮೊಗ್ಗದಲ್ಲಿ ನಡೆದ ಹಿಂದು ಹರ್ಷ ಕೊಲೆ ಖಂಡಿಸುವುದನ್ನು ಬಿಟ್ಟು  ಮೆರವಣಿಗೆಯಲ್ಲಿ ಭಾಗಿಯಾದ ಈಶ್ವರಪ್ಪ ವಿರುದ್ಧ ಮಾತನಾಡುವ ಮೂಲಕ ರಾಜಕಾರಣ ಮಾಡಿದರು. ಮೈಸೂರಿನಲ್ಲಿ ನಡೆದ ಅತ್ಯಾಚಾರ ಖಂಡಿಸುವುದು ಬಿಟ್ಟು ನನ್ನ ಮೇಲೆ ಹರಿಹಾಯ್ದರು'' ಎಂದರು.

ಶಿವಮೊಗ್ಗ ರೌಡಿಗಳ ರಾಜ್ಯವಾಗಿತ್ತು. ರೌಡಿಗಳ ಫೀಡಿಂಗ್ ಸೆಂಟ್ರ್ ಆಗಿತ್ತು. ಈಗ ಯಾರೂ ಬಾಲ ಬಿಚ್ಚುತ್ತಿಲ್ಲ. ಶಿವಮೊಗ್ಗ, ಭದ್ರಾವತಿಯಲ್ಲಿ ಇನ್ನು ರೌಡಿಗಳ ಆಟ ನಡೆಯದು ಎಂದರು.

ಕಾರ್ಯಕ್ರಮದಲ್ಲಿ ಪೂರ್ವ ವಲಯ  ಐಜಿಪಿ ಕೆ.ತ್ಯಾಗರಾಜನ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್,ಎಎಸ್ಪಿ ರೋಹನ್ ಜಗದೀಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳಿದ್ದರು.

share
Next Story
X