Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಕಾರ್ಮಿಕ ಕಲ್ಯಾಣ ಮಂಡಳಿಯಿಂದ...

ಪುತ್ತೂರು: ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಂಚನೆ ಆರೋಪ

4 Jan 2023 6:12 PM IST
share

ಪುತ್ತೂರು: ಕಾರ್ಮಿಕರ ಕಲ್ಯಾಣದ ಉದ್ದೇಶಕ್ಕಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು ಸಂಗ್ರಹಿಸುತ್ತಿರುವ ಕೋಟ್ಯಾಂತರ ಹಣವನ್ನು ಸದುದ್ದೇಶಕ್ಕಾಗಿ ಬಳಸದೆ ಕಾರ್ಮಿಕರಿಗೆ ವಂಚನೆ ನಡೆಸುತ್ತಿದ್ದು, ಈ ಬಗ್ಗೆ ಪ್ರತಿಭಟನೆಗೆ ಮುಂದಾದರೆ ಅದನ್ನು ಹತ್ತಿಕ್ಕುವ ಕೆಲಸ ಪೊಲೀಸರಿಂದ ನಡೆಸುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯ ಧೋರಣೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಕಡಬ ಮರ್ಧಾಳದ ಶ್ರಮಿಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಕೆ.ಪಿ. ಮೋಹನ್ ಎಚ್ಚರಿಸಿದ್ದಾರೆ. 

ಅವರು ಬುಧವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರಿಗೆ 18 ವಿಧದ ಸೌಲಭ್ಯಗಳಿವೆ. ಅವುಗಳಲ್ಲಿ ಒಂದೆರಡು ಸೌಲಭ್ಯ ಹೊರತು ಉಳಿದ ಯಾವುದೇ ಸವಲತ್ತುಗಳನ್ನು ನೀಡುತ್ತಿಲ್ಲ. ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿ ಕಳೆದ ಸಾಲಿನಲ್ಲಿ 42 ಸಾವಿರ ಅರ್ಜಿಗಳು ಬಾಕಿ ಇವೆ ಎಂದು ಸಚಿವರು ಸದನದಲ್ಲಿ ಹೇಳಿಕೆ ನೀಡಿದ್ದರು. ತಾಂತ್ರಿಕ ಸಮಸ್ಯೆ ಬಗೆಹರಿಸಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಅದು ಈವರೆಗೂ ಈಡೇರಿಲ್ಲ. 2022-23 ನೇ ಸಾಲಿನ ಅರ್ಜಿಯನ್ನಾದರೂ ಸ್ವೀಕರಿಸುವ ನಿರೀಕ್ಷೆ ಇತ್ತು. ಅದಕ್ಕೂ ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಸ್ಕಾಲರ್ ಶಿಪ್ ಗೆ ಸಂಬಂಧಿಸಿ 600 ಕೋಟಿ ಇರಿಸಲಾಗಿದೆ. ಆದರೂ ಅರ್ಜಿ ಸ್ವೀಕಾರ ಆರಂಭಿಸಿಲ್ಲ. ತಾಂತ್ರಿಕ ಸಮಸ್ಯೆ ಎಂದಾದರೆ ಈ ಹಿಂದೆ ಮಾಡಿರುವಂತೆ ಆಫ್ ಲೈನ್ ಅರ್ಜಿಗಳನ್ನು ಸ್ವೀಕರಿಸಬಹುದಿತ್ತು. ಇವರಿಗೆ ಇಚ್ಛಾಶಕ್ತಿಯ ಕೊರತೆ ಇದೆ. ವಿವಿಧ ಪಕ್ಷಗಳಲ್ಲಿ ಕಾರ್ಮಿಕ ಘಟಕಗಳು ಕಾರ್ಯನಿರ್ವಹಿಸುತ್ತಿದ್ದರೂ, ಯಾರೂ ಮಾತನಾಡದೇ ಇರುವುದು ಆಶ್ಚರ್ಯದ ಸಂಗತಿ ಎಂದು ಮೋಹನ್ ಹೇಳಿದರು.

ರಾಜ್ಯದಲ್ಲಿ 34 ಲಕ್ಷ ಮಂದಿ ಕಟ್ಟಡ ಮತ್ತು ಇತರೆ ಕಾರ್ಮಿಕರಿದ್ದಾರೆ. ಈ ಪೈಕಿ 3 ಲಕ್ಷ ಮಂದಿಗೆ ಅವರು ಕೇಳದಿದ್ದರೂ ಬಸ್ ಪಾಸ್ ನೀಡಲಾಗಿದೆ. ಒಬ್ಬನಿಗೆ 16 ಸಾವಿರದಷ್ಟು ಕಲ್ಯಾಣ ಮಂಡಳಿಯಿಂದ ಕೆ.ಎಸ್.ಆರ್.ಟಿ.ಸಿ. ಗೆ ಹೋಗುತ್ತಿದೆ. ಈಗ ನೀಡಿರುವ ಪಾಸ್‍ನ ಅವಧಿ ಡಿಸೆಂಬರ್ ಗೆ ಮುಗಿದಿದೆ. ನವೀಕರಣಕ್ಕೆ 3 ದಿನ ಮಾತ್ರ ಅವಕಾಶ ನೀಡಿ ಈಗ ಅವಕಾಶ ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿ ಜ. 9 ರಂದು ಕಾರ್ಮಿಕ ಕಲ್ಯಾಣ ಮಂಡಳಿ ಎದುರು ಪ್ರತಿಭಟನೆಗೆ ಅವಕಾಶ ಕೋರಿ ಐಜಿ, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆವು. ಆದರೆ ಸಿದ್ಧಾಪುರ ಪೊಲೀಸ್ ಠಾಣೆಯಿಂದ ನಮಗೆ ಬೆದರಿಕೆ ಕರೆ ಮಾಡಿ ಪ್ರತಿಭಟನೆಗೆ ಅವಕಾಶವಿಲ್ಲ. ಬಂಧಿಸಿ ಕೇಸು ಹಾಕುತ್ತೇವೆ ಎಂದು ಹೇಳಿದ್ದಾರೆ. ಈ ಕಾರಣದಿಂದ ಮುಂದೆ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ಕೆ.ಪಿ. ಮೋಹನ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಶಿವಶಂಕರ್ ಕೆ., ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ., ಸದಸ್ಯರಾದ ಹರೀಶ್ಚಂದ್ರ, ವಿಶ್ವನಾಥ ಗೌಡ ಉಪಸ್ಥಿತರಿದ್ದರು.

share
Next Story
X