Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂತ್ ಕಾರು ಅಪಘಾತಕ್ಕೆ ಎರಡು ಸರಕಾರಿ...

ಪಂತ್ ಕಾರು ಅಪಘಾತಕ್ಕೆ ಎರಡು ಸರಕಾರಿ ಇಲಾಖೆಗಳ ನಡುವಿನ ವಿವಾದ ಕಾರಣವೇ?

4 Jan 2023 8:57 PM IST
share
ಪಂತ್ ಕಾರು ಅಪಘಾತಕ್ಕೆ ಎರಡು ಸರಕಾರಿ ಇಲಾಖೆಗಳ ನಡುವಿನ ವಿವಾದ ಕಾರಣವೇ?

ಹೊಸದಿಲ್ಲಿ,ಜ.4: ಕಳೆದ ಶುಕ್ರವಾರ ಕಾರು ಅಪಘಾತದಿಂದ ಗಾಯಗೊಂಡಿರುವ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಅವರು ಡೆಹ್ರಾಡೂನಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂತ್ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೆ ಕಾರಣ ಕುರಿತು ಚರ್ಚೆ ನಡೆಯುತ್ತಿದೆ.

‌ಪಂತ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರಸಿಂಗ್ ಧಾಮಿಯವರು,ರಸ್ತೆಯ ಮೇಲಿನ ಗುಂಡಿಯ ಮೇಲೆ ಕಾರು ಚಲಾಯಿಸುತ್ತಿದ್ದಾಗ ಪಂತ್ ನಿದ್ರೆಯ ಮಂಪರಿನಲ್ಲಿದ್ದರು ಎಂದು ಹೇಳಿದ್ದರು. ಆದರೆ ಘಟನೆಯ ಪ್ರತ್ಯಕ್ಷದರ್ಶಿಗಳಾಗಿರುವ ಸ್ಥಳೀಯರು ನೀರಾವರಿ ಇಲಾಖೆಯ ಸಣ್ಣ ಕಾಲುವೆಯೊಂದರ ಭಾಗವೇ ಅಪಘಾತಕ್ಕೆ ಕಾರಣವಾಗಿತ್ತು ಎಂದು ಪ್ರತಿಪಾದಿಸಿದ್ದಾರೆ.

ರಾ.ಹೆ.58ರಲ್ಲಿ ಪಂತ್ ಕಾರು ಅಪಘಾತಕ್ಕೀಡಾಗಿದ್ದ ಸ್ಥಳವು ಹರಿದ್ವಾರ ಜಿಲ್ಲೆಯ ಮಂಗಳೂರು ಕೋತ್ವಾಲಿ ಪ್ರದೇಶ ವಾಪ್ತಿಯ ನರ್ಸಾನ್ ಪೊಲೀಸ್ ಠಾಣೆಯ ಎದುರಿಗಿದ್ದು,ತುಂಬ ಕಿರಿದಾಗಿದೆ. ಇಲ್ಲಿ ನೀರಾವರಿ ಇಲಾಖೆಗೆ ಸೇರಿದ ಕಾಲುವೆಯ ಒಂದು ಭಾಗವು ಹೆದ್ದಾರಿಯೊಳಗೆ ಸುಮಾರು ಎರಡು ಮೀ.ಗಳಷ್ಟು ವ್ಯಾಪಿಸಿದೆ. ಇದರಿಂದಾಗಿ ಸುಮಾರು 20 ಮೀ.ದೂರದವರೆಗೆ ಹೆದ್ದಾರಿಯ ಅಗಲವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಇದೇ ಕಾರಣದಿಂದ ದಿಲ್ಲಿ ಕಡೆಯಿಂದ ವೇಗವಾಗಿ ಬರುವ ವಾಹನಗಳನ್ನು ಈ ನಿರ್ದಿಷ್ಟ ಸ್ಥಳದಲ್ಲಿ ಏಕಾಏಕಿಯಾಗಿ ನಿಯಂತ್ರಿಸುವುದು ಕಷ್ಟವಾಗುತ್ತದೆ ಎನ್ನಲಾಗಿದೆ.

ವೇಗದಲ್ಲಿದ್ದ ಪಂತ್ ಕಾರಿಗೆ ಮಣ್ಣಿನ ದಿಬ್ಬ ಎದುರಾದಾಗ ಅವರು ಬಲಬದಿಗೆ ತಿರುಗಿಸಿರಬಹುದು ಮತ್ತು ಅತಿವೇಗದಿಂದಾಗಿ ಅದು ವಿಭಜಕವನ್ನು ಹತ್ತಿರಬಹುದು ಎಂದು ಊಹಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ ಕಾಮಗಾರಿ ಆರಂಭಗೊಂಡಾಗಿನಿಂದ ಅದು ಪೂರ್ಣಗೊಳ್ಳುವವರೆಗೂ ಕಾಲುವೆಯನ್ನು ಸ್ಥಳಾಂತರಿಸುವಂತೆ ಕೋರಿ ನೀರಾವರಿ ಇಲಾಖೆಗೆ ಪತ್ರಗಳನ್ನು ಬರೆಯಲಾಗಿತ್ತು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ದ ತಾಂತ್ರಿಕ ಘಟಕದ ಅಧಿಕಾರಿ ರಾಘವ ತ್ರಿಪಾಠಿ ತಿಳಿಸಿದರು. ಆದರೆ ನೀರಾವರಿ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ, ಪರಿಣಾಮವಾಗಿ ಇಲ್ಲಿ ಹೆದ್ದಾರಿ ಕಿರಿದಾಗಿಯೇ ಉಳಿದುಕೊಂಡಿದೆ. ಈ ಸ್ಥಳವನ್ನು ಸಮೀಪಿಸುವ ವಾಹನಗಳಿಗೆ ನೆರವಾಗಲು ಇಲ್ಲಿ ಗುರುತುಗಳನ್ನು ಮಾಡಲಾಗಿದೆ ಎಂದರು.

ಈ ಸ್ಥಳದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ,ಆದರೆ ಇಲಾಖೆಯು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಆಡಳಿತ ಮತ್ತು ಅಧಿಕಾರಿಗಳ ನಿರ್ಲಕ್ಷದಿಂದಾಗಿ ಹಲವಾರು ಜೀವಗಳು ಬಲಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹೈಪ್ರೊಫೈಲ್ ಕ್ರಿಕಿಟಿಗನ ಕಾರಿನ ಅಪಘಾತದಿಂದ ಪಾಠ ಕಲಿತುಕೊಂಡಿರುವ ಎನ್ಎಚ್ಎಐ ಮರುದಿನವೇ ಸ್ಥಳದಲ್ಲಿ ರಿಫ್ಲೆಕ್ಟರ್ಗಳನ್ನು ಅಳವಡಿಸಿದೆ. ಹಲವಾರು ಇಲಾಖೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಆರಂಭಿಸಿವೆ.

ರಸ್ತೆ ಅಪಘಾತಗಳನ್ನು ತಗ್ಗಿಸಲು ಸಮಿತಿಯೊಂದನ್ನು ರಚಿಸಲಾಗಿದೆ. ನರ್ಸಾನ್ ಗಡಿಯಿಂದ ಹರಿದ್ವಾರದ ಸಿಂಗ್ದ್ವಾರ್ ಚೌಕ್ವರೆಗಿನ ರಸ್ತೆಯ ಸುರಕ್ಷಿತೆಯ ಆಡಿಟ್ ಹೊಣೆಯನ್ನು ಸಮಿತಿಗೆ ವಹಿಸಲಾಗಿದೆ. ಪಿಡಬ್ಲುಡಿ,‌ ಸಾರಿಗೆ ಇಲಾಖೆ ಮತ್ತು ಎನ್ಎಚ್ಎಐ ಅಧಿಕಾರಿಗಳನ್ನು ಈ ಸಮಿತಿಗೆ ಸೇರಿಸಲಾಗುವುದು ಎಂದು ಆರ್ಟಿಒ ಶೈಲೇಶ್ ತಿವಾರಿ ತಿಳಿಸಿದರು.

share
Next Story
X