Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಬಾರಕೂರು ನೇಶನಲ್ ಹೈಸ್ಕೂಲ್‌ಗೆ...

ಉಡುಪಿ: ಬಾರಕೂರು ನೇಶನಲ್ ಹೈಸ್ಕೂಲ್‌ಗೆ ಅಮೃತಮಹೋತ್ಸವ ಸಂಭ್ರಮ

4 Jan 2023 8:58 PM IST
share
ಉಡುಪಿ: ಬಾರಕೂರು ನೇಶನಲ್ ಹೈಸ್ಕೂಲ್‌ಗೆ ಅಮೃತಮಹೋತ್ಸವ ಸಂಭ್ರಮ

ಉಡುಪಿ: ಸ್ವಾತಂತ್ರ್ಯಪೂರ್ವದಲ್ಲಿ ಬಾರಕೂರು, ಬ್ರಹ್ಮಾವರ ಹಾಗೂ ಕೋಟ ಪರಿಸರದ ಜನತೆಗೆ ಹೈಸ್ಕೂಲ್ ಶಿಕ್ಷಣವನ್ನು ಒದಗಿಸಿದ, ಬಾರಕೂರು ವಿದ್ಯಾಭಿವರ್ಧಿನಿ ಸಂಘದಿಂದ 1946ರಲ್ಲಿ ಪ್ರಾರಂಭಗೊಂಡ ನೇಶನಲ್ ಪ್ರೌಢ ಶಾಲೆ ಇದೀಗ ಅಮೃತಮಹೋತ್ಸವದ ಸಂಭ್ರಮದಲ್ಲಿದ್ದು, ಜ.8ರಂದು ಇದನ್ನು ಆಚರಿಸಲಿದೆ ಎಂದು ಅಮೃತಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ರಾಜಾರಾಮ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಶಾಲೆಯು 1972ರಲ್ಲಿ ರಜತ ಮಹೋತ್ಸವ, 1997ರಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು, ಇದೀಗ ಜ.8ರಂದು ತನ್ನ ಅಮೃತಮಹೋತ್ಸವಕ್ಕೆ ಸಜ್ಜಾಗಿದೆ ಎಂದರು.

1946ರಲ್ಲಿ ಪ್ರಾರಂಭಗೊಂಡ ಪ್ರೌಢಶಾಲೆ, 1966ರಲ್ಲಿ ಹೈಯರ್ ಸೆಕಂಡರಿ ಶಾಲೆಯಾಗಿದ್ದು, 1972ರಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭ ಗೊಂಡಿತು. ವಿದ್ಯಾಭಿವರ್ಧಿನಿ ಸಂಘದ ವತಿಯಿಂದ 1983-84ರಲ್ಲಿ ಬಾರಕೂರಿನ ಹೇರಾಡಿಯಲ್ಲಿ ನೇಶನಲ್ ಕೈಗಾರಿಕಾ ತರಬೇತಿ ಕೇಂದ್ರ ಪ್ರಾರಂಭಗೊಂಡಿದ್ದು, ಅದೀಗ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕಾ ತರಬೇತಿ ಕೇಂದ್ರವಾಗಿದೆ ಎಂದರು.

ಆಧುನಿಕತೆಯ ಸಂಕೇತವಾಗಿ ಆಂಗ್ಲ ಭಾಷಾ ಶಿಕ್ಷಣದತ್ತ ಜನರು ಆಕರ್ಷಿತರಾದುದರಿಂದ ಸಂಘ 2003-04ರಲ್ಲಿ ಶ್ರೀವಿದ್ಯೇಶ ವಿದ್ಯಾಮಾನ್ಯ ನೇಶನಲ್ ಆಂಗ್ಲಮಾಧ್ಯಮ ಶಾಲೆಯನ್ನು ಪ್ರಾರಂಭಿಸಿತು. ಅಲ್ಲದೇ ಸಂಘ ಇಂದು ಎರಡು ಪ್ರಾಥಮಿಕ ಶಾಲೆಗಳನ್ನು ಸಹ ನಡೆಸುತ್ತಿದೆ ಎಂದರು.

ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಊರಿನ ವಿದ್ಯಾಭಿಮಾನಿಗಳ ನೆರವಿನಿಂದ ಅಮೃತಮಹೋತ್ಸವ ಸಮಾರಂಭ ನಡೆಯುತಿದ್ದು, ಮುಂದೆ ಕಟ್ಟಡಗಳ ನವೀಕರಣ, ವಿಜ್ಞಾನ ಮತ್ತು ಕಂಪ್ಯೂಟರ್ ಶಿಕ್ಷಣದ ಪ್ರಯೋಗಾಲಯಗಳ ಉನ್ನತೀಕರಣ ಮುಂತಾದ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದರು.

ಶಾಲೆಯ ಅಮೃತಮಹೋತ್ಸವ ಸಮಾರಂಭವನ್ನು ಜ.8ರ ಬೆಳಗ್ಗೆ 10ಗಂಟೆಗೆ ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ,ಡಿಡಿಪಿಯು ಮಾರುತಿ, ಡಿಡಿಪಿಐ ಶಿವರಾಜ್ ಮುಖ್ಯ ಅತಿಥಿಗಳಾಗಿರುವರು ಎಂದರು.

11:30ರಿಂದ ತಜ್ಞರ ಉಪಸ್ಥಿತಿಯಲ್ಲಿ ಹೊಸ ಶಿಕ್ಷಣ ನೀತಿ-2020ರ ಅವಲೋಕನ-ಅನುಷ್ಠಾನದ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಸಮಾರೋಪ ಸಮಾರಂಭ ಸಂಜೆ 5:00ಗಂಟೆಗೆ ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ , ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಡಾ.ಮೋಹನ ಆಳ್ವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ರಾಜಾರಾಮ ಶೆಟ್ಟಿ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಎನ್.ಮಂಜುನಾಥ ಭಟ್, ವಿದ್ಯಾಭಿವರ್ಧಿನಿ ಸಂಘದ ಅಧ್ಯಕ್ಷ ಬಿ.ಶಾಂತಾರಾಮ ಶೆಟ್ಟಿ, ಕಾರ್ಯದರ್ಶಿ ಬಿ.ಸೀತಾರಾಮ ಶೆಟ್ಟಿ ಉಪಾಧ್ಯಕ್ಷ ಎಚ್.ವಿಠಲ ಶೆಟ್ಟಿ ಉಪಸ್ಥಿತರಿದ್ದರು. 

share
Next Story
X