Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಯಾಚಿನ್ ಗ್ಲೇಸಿಯರ್ ನಲ್ಲಿ ಮೊದಲ...

ಸಿಯಾಚಿನ್ ಗ್ಲೇಸಿಯರ್ ನಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿಯನ್ನು ನಿಯೋಜಿಸಿದ ಸೇನೆ

4 Jan 2023 9:16 PM IST
share
ಸಿಯಾಚಿನ್ ಗ್ಲೇಸಿಯರ್ ನಲ್ಲಿ ಮೊದಲ ಬಾರಿಗೆ ಮಹಿಳಾ ಅಧಿಕಾರಿಯನ್ನು ನಿಯೋಜಿಸಿದ ಸೇನೆ

ಹೊಸದಿಲ್ಲಿ,ಜ.4: ಜಗತ್ತಿನ ಅತ್ಯಂತ ಎತ್ತರದ ಯುದ್ಧಭೂಮಿಯಾಗಿರುವ ಸಿಯಾಚಿನ್ ಗ್ಲೇಸಿಯರ್ನ ಕುಮಾರ ಪೋಸ್ಟ್ ನಲ್ಲಿ ಕಾರ್ಪ್ಸ್ ಆಫ್ ಇಂಜಿನಿಯರ್ಸ್ ನ ಕ್ಯಾ.ಶಿವ ಚೌಹಾಣ ಅವರನ್ನು ಭಾರತೀಯ ಸೇನೆಯು ನಿಯೋಜಿಸಿದೆ. ಚವಾಣ ಸಮುದ್ರಮಟ್ಟದಿಂದ 15,632 ಅಡಿ ಎತ್ತರದಲ್ಲಿರುವ ಸಿಯಾಚಿನ್ ನೀರ್ಗಲ್ಲು ಪ್ರದೇಶದಲ್ಲಿ ನಿಯೋಜನೆಗೊಂಡಿರುವ ಮೊದಲ ಮಹಿಳಾ ಸೇನಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಮಹಿಳಾ ಅಧಿಕಾರಿಗಳನ್ನು ತಮ್ಮ ಯೂನಿಟ್ಗಳೊಂದಿಗೆ ನಿಯಮಿತ ನಿಯೋಜನೆಗಳ ಭಾಗವಾಗಿ ಸುಮಾರು 9,000 ಅಡಿ ಎತ್ತರದದಲ್ಲಿರುವ ಸಿಯಾಚಿನ್ ಮೂಲ ಶಿಬಿರಕ್ಕೆ ನೇಮಕ ಮಾಡಲಾಗಿತ್ತು.

ರಾಜಸ್ಥಾನದ ಚೌಹಾಣ ಬೆಂಗಾಳ ಸ್ಯಾಪರ್ ಅಧಿಕಾರಿಯಾಗಿದ್ದು, ಉದಯಪುರದ ಎನ್ಜೆಆರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಗಳಿಸಿದ್ದಾರೆ. 11ರ ಹರೆಯದಲ್ಲಿದ್ದಾಗ ಚೌಹಾಣ ತಂದೆಯನ್ನು ಕಳೆದುಕೊಂಡಿದ್ದು,ಗೃಹಿಣಿಯಾಗಿರುವ ತಾಯಿ ಪುತ್ರಿಯ ಶಿಕ್ಷಣದ ಜವಾಬ್ದಾರಿಯನ್ನು ಹೊತ್ತಿದ್ದರು. ಬಾಲ್ಯದಿಂದಲೇ ಸೇನೆಯನ್ನು ಸೇರಬೇಕೆಂಬ ಆಕಾಂಕ್ಷೆ ಹೊಂದಿದ್ದ ಚೌಹಾಣ ಚೆನ್ನೈನ ಆಫೀಸರ್ಸ್ ಟ್ರೇನಿಂಗ್ ಅಕಾಡಮಿಯಲ್ಲಿ ತರಬೇತಿಯ ಬಳಿಕ ಮೇ 2021ರಲ್ಲಿ ಇಂಜಿನಿಯರ್ ರೆಜಿಮೆಂಟ್ಗೆ ಸೇರ್ಪಡೆಗೊಂಡಿದ್ದರು ಎಂದು ಸೇನೆಯ ಮೂಲಗಳು ತಿಳಿಸಿವೆ.

ಸೋಮವಾರ ಸಿಯಾಚಿನ್ ನಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಚೌಹಾಣ್ ಸ್ಯಾಪರ್ಗಳ ತಂಡದ ನೇತೃತ್ವ ವಹಿಸಿಕೊಂಡಿದ್ದಾರೆ ಮತ್ತು ಈ ತಂಡವು ಅಲ್ಲಿ ಮೂರು ತಿಂಗಳ ಕಾಲ ಕರ್ತವ್ಯ ನಿರ್ವಹಿಸಲಿದೆ.

ಕುಮಾರ ಪೋಸ್ಟ್ ಉತ್ತರ ಗ್ಲೇಸಿಯರ್ ಬಟಾಲಿಯನ್ನ ಕೇಂದ್ರ ಕಚೇರಿಯಾಗಿದ್ದು,ಸಿಯಾಚಿನ್ ಗ್ಲೇಸಿಯರ್ನ್ನು ಭಾರತವು ವಶಪಡಿಸಿಕೊಳ್ಳಲು ನೆರವಾಗಿದ್ದ ಅಪ್ರತಿಮ ಪರ್ವತಾರೋಹಿ ಕರ್ನಲ್ ನರೇಂದ್ರ ‘ಬುಲ್’ ಕುಮಾರ್ ಅವರ ಹೆಸರನ್ನು ಹೊಂದಿದೆ.

share
Next Story
X