ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ವೇ ಕಾಮಗಾರಿ ಪರಿಶೀಲಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು, ಜ.5: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ರಾಜ್ಯಕ್ಕೆ ಭೇಟಿ ನೀಡಿದ್ದು, ಬೆಂಗಳೂರು- ಚೆನ್ನೈ ಎಕ್ಸ್ಪ್ರೆಸ್ವೇ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದರು.
262 ಕಿಲೋ ಮೀಟರ್ ಉದ್ದದ ಅಷ್ಟಪಥ ಹೆದ್ದಾರಿ ಕಾಮಗಾರಿಯನ್ನು 16, 730 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ನಿತಿನ್ ಗಡ್ಕರಿ ಇಂದು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹಾಗೂ ಸಂಸದ ಮುನಿಸ್ವಾಮಿ ಉಪಸ್ಥಿತರಿದರು.
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಅವೈಜ್ಞಾನಿಕ: ಸಂಸದೆ ದೂರು
ಉದ್ಘಾಟನೆಗೆ ಸಿದ್ಧಗೊಂಡಿರುವ ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ವೇ ಹೆದ್ದಾರಿಯ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು ನಿತೀನ್ ಗಡ್ಕರಿಗೆ ದೂರು ಸಲ್ಲಿಸಿ, ಹೆದ್ದಾರಿಯ ನಿರ್ಮಾಣ ಕಾರ್ಯದ ವೈಜ್ಞಾನಿಕ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.
Inspected the progress of the Bengaluru – Chennai Expressway with Karnataka PWD Minister Shri @CCPatilBJP Ji and MP Shri @BNBachegowda_MP Ji. We are constructing this 262 km long 8-Lane structure worth of ₹16,730 Cr.#PragatiKaHighway #GatiShakti #BengaluruChennaiExpressway pic.twitter.com/Lq92uRdGjj
— Nitin Gadkari (@nitin_gadkari) January 5, 2023








