Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್...

ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜಾ ಬೆಂಬಲದೊಂದಿಗೆ ಅಕ್ರಮ ಮರಳು ಗಣಿಗಾರಿಕೆ: ಶೇಖರ್ ಲಾಯಿಲ ಆರೋಪ

5 Jan 2023 6:04 PM IST
share
ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜಾ ಬೆಂಬಲದೊಂದಿಗೆ ಅಕ್ರಮ ಮರಳು ಗಣಿಗಾರಿಕೆ: ಶೇಖರ್ ಲಾಯಿಲ ಆರೋಪ

ಬೆಳ್ತಂಗಡಿ: ತಾಲೂಕಿನಲ್ಲಿ ಕೇವಲ ಐದು ಕಡೆ ಮಾತ್ರ ಮರಳು ಗಣಿಗಾರಿಕೆಗೆ ಅನುಮತಿ ನೀಡಿದ್ದರೂ ಶಾಸಕರ ಸಂರಕ್ಷಣೆಯಲ್ಲಿ ಬಳ್ಳಾರಿಯ ಗಣಿ ಮಾಫಿಯಾವನ್ನೂ ಮೀರಿಸುವ ರೀತಿಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಯುತ್ತಿದೆ ಎಂದು ಸಿಪಿಐಎಂ ಮುಖಂಡ ಶೇಖರ್ ಲಾಯಿಲ ಆರೋಪಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಗುರುವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಗಣಿಗಾರಿಕೆಯ ಬಗೆಗಿನ ದಾಖಲೆಗಳನ್ನು ಬಹಿರಂಗಪಡಿಸಿ ಮಾತನಾಡಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬೆಳ್ತಂಗಡಿ ತಾಲೂಕಿನಲ್ಲಿ ಕೇವಲ 5 ಕಡೆಗಳಲ್ಲಿ ಮಾತ್ರ ಅಧಿಕೃತ ಮರಳುಗಾರಿಕೆಗೆ ಅನುಮತಿ ನೀಡಿದ್ದು, ಇದೀಗ ತಾಲೂಕಿನಾದ್ಯಂತ ಜಿಲ್ಲೆಯ ಜೀವನದಿ ನೇತ್ರಾವತಿ ಹಾಗೂ ಅದರ ಉಪನದಿಗಳಲ್ಲಿ ಎಗ್ಗಿಲ್ಲದೆ ಶಾಸಕ ಹರೀಶ್ ಪೂಂಜಾ (Harish Poonja) ಅವರ ಬೆಂಬಲದೊಂದಿಗೆ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. 

ತಾಲೂಕಿನಲ್ಲಿ ಪಟ್ರಮೆಯಲ್ಲಿ ಒಂದು ತೆಕ್ಕಾರಿನಲ್ಲಿ ಎರಡು ಹಾಗೂ ಬಾರ್ಯದಲ್ಲಿ ಎರಡು ಕಡೆ ಮಾತ್ರ ಮರಳು ತೆಗೆಯಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ನೀಡಿದೆ. ಆದರೆ ತಾಲೂಕಿನ ಗ್ರಾಮ ಗ್ರಾಮಗಳಿಂದ ಪ್ರತಿ ದಿನ ಅಕ್ರಮ ಮರಳು ಸಾಗಾಟದ ನೂರಾರು ಲಾರಿಗಳು ಓಡಾಡುತ್ತಿದೆ. ತಾಲೂಕಿನಲ್ಲಿ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದು ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣವಿಲ್ಲದೆ ನಡೆಯುತ್ತಿದೆ. ಮರಳು ದಂಧೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ ಮರುದಿನ ಅದೇ ಸ್ಥಳದಲ್ಲೇ ಮರಳುಗಾರಿಕೆ ನಡೆಸುತ್ತಾರೆ ಎಂದರೆ ಇದರ ಹಿಂದೆ ನೇರವಾಗಿ ಶಾಸಕ ಹರೀಶ್ ಪೂಂಜಾ ಅವರ ಕೈವಾಡವಿದೆ ಎಂದು ಸ್ಪಷ್ಟವಾಗುತ್ತದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ , ತಾಲೂಕು ಆಡಳಿತ, ಪೋಲಿಸ್ ಇಲಾಖೆಗಳನ್ನು ಶಾಸಕ ಹರೀಶ್ ಪೂಂಜಾ ತನ್ನ ಕೈಗೊಂಬೆಗಳಂತೆ ಕುಣಿಸುತ್ತಿದ್ದಾರೆ. ಅಧಿಕಾರಿಗಳು ಮಾಮೂಲಿಗಾಗಿ ಕೈಯೊಡ್ಡಿ ಮೌನವಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 

ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಗೂಂಡಾಗಿರಿ ನಡೆಯುತ್ತಿದೆ. ತೋಟತ್ತಾಡಿ ಚಂದ್ರಶೇಖರ ಪೂಜಾರಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳ ಜಾಮೀನು ಅರ್ಜಿ ನ್ಯಾಯಾಲಯವು ತಿರಸ್ಕರಿಸಿತು. ಜನರ ಕಣ್ಣಿಗೆ ಮಣ್ಣೆರೆಚಲು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆದರೆ ನೆರಿಯ ಗ್ರಾಮ ಪಂಚಾಯತ್ ನ ಬಿಜೆಪಿ ಸದಸ್ಯ , ಶಾಸಕರ ಆಪ್ತ ಸಚಿನ್ ಎಂಬಾತ ಇಂದಿಗೂ ಬಹಿರಂಗವಾಗಿ ಓಡಾಡುತ್ತಿದ್ದರೂ ಆತನನ್ನು ಮುಟ್ಟುವ ಧೈರ್ಯ ಧರ್ಮಸ್ಥಳ ಪೋಲಿಸರಿಗೆ ಇಲ್ಲ. ಶಿಬಾಜೆಯಲ್ಲಿ ನಡೆದ ಕೊಲೆ, ದರೋಡೆ, ದಲಿತ ದೌರ್ಜನ್ಯ ತಡೆ ಕಾಯ್ದೆ ಪ್ರಕರಣದ ಆರೋಪಿಗಳನ್ನು ಶಿಬಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧರ್ಮಸ್ಥಳ ಪೋಲಿಸ್ ಠಾಣೆ, ಬಂಟ್ವಾಳ ಡಿವೈಎಸ್ಪಿ ಕಛೇರಿಗೆ ಕರೆದುಕೊಂಡು ಹೋದರೂ ಅವರನ್ನು ಬಂಧಿಸದರೆ ರಾಜ್ಯಾಥಿತ್ಯ ನೀಡಲಾಗಿದೆ. ಕ್ರಿಮಿನಲ್ ಆರೋಪಿಗಳ ಜೊತೆಗೆ ಬಂಟ್ವಾಳ ಡಿವೈಎಸ್ಪಿ ಶಾಮೀಲಾಗಿದ್ದು ಅವರನ್ನು ತಕ್ಷಣ ಸೇವೆಯಿಂದ ಅಮಾನತು ಗೊಳಿಸಬೇಕು. ಆರಂಬೋಡಿಯಲ್ಲಿ ನಡೆದ ಸುರತ್ಕಲ್ ನ ನಾಟಕ ತಂಡದ ನಾಟಕವನ್ನು ಅರ್ಧಕ್ಕೆ ನಿಲ್ಲಿಸಿ, ಕಲಾವಿದರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿರುವುದು ಇಡೀ ಕಲಾ ಜಗತ್ತಿನ ಮೇಲೆ ನಡೆದ ದೌರ್ಜನ್ಯವಾಗಿದೆ.  ಒಟ್ಟಿನಲ್ಲಿ ಇಡೀ ತಾಲೂಕಿನಾದ್ಯಂತ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ ಭೀಕರ ಸ್ವರೂಪ ಪಡೆಯುತ್ತಿದೆ. ಆರೋಪಿಗಳ ರಕ್ಷಣೆಯನ್ನು ಶಾಸಕ ಹರೀಶ್ ಪೂಂಜಾ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಜಯಾನಂದ ಪಿಲಿಕಲ ಉಪಸ್ಥಿತರಿದ್ದರು.

ಇದನ್ನೂ ಓದಿ: ನನ್ನನ್ನು 'ಟಗರು' 'ಟಗರು' ಅನ್ನುತ್ತಾರೆ, ನಾನು ಯಾರಿಗೆ ಗುಮ್ಮಿದ್ದೇನೆ?: ಸಿದ್ದರಾಮಯ್ಯ 

share
Next Story
X