Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಲ್ಡೋಝರ್ ಗಳು ಶಾಂತಿ ಮತ್ತು ಪ್ರಗತಿಯ...

ಬುಲ್ಡೋಝರ್ ಗಳು ಶಾಂತಿ ಮತ್ತು ಪ್ರಗತಿಯ ಸಂಕೇತವಾಗಬಹುದು: ಯೋಗಿ ಆದಿತ್ಯನಾಥ್

5 Jan 2023 3:00 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬುಲ್ಡೋಝರ್ ಗಳು ಶಾಂತಿ ಮತ್ತು ಪ್ರಗತಿಯ ಸಂಕೇತವಾಗಬಹುದು: ಯೋಗಿ ಆದಿತ್ಯನಾಥ್

ಮುಂಬೈ,ಜ.5: ಕಾನೂನು ಮತ್ತು ಸುವ್ಯವಸ್ಥೆಯನ್ನು ಅನುಷ್ಠಾನಿಸುವ ಮೂಲಕ ಬುಲ್ಡೋಝರ್ ಗಳು ಶಾಂತಿ ಮತ್ತು ಪ್ರಗತಿಯ ಸಂಕೇತವಾಗಬಹುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರು ಬುಧವಾರ ಇಲ್ಲಿ ಹೇಳಿದರು.

ಸುದ್ದಿಗಾರರು ತನ್ನ ‘ಬುಲ್ಡೋಝರ್ ಬಾಬಾ’ ಅಡ್ಡಹೆಸರಿನ ಕುರಿತು ಪ್ರಶ್ನಿಸಿದಾಗ ಆದಿತ್ಯನಾಥ ಈ ಉತ್ತರವನ್ನು ನೀಡಿದರು.

ಆದಿತ್ಯನಾಥ ಮತ್ತು ಬಿಜೆಪಿ ‘ಬುಲ್ಡೋಝರ್ ನ್ಯಾಯ’ಎಂದು ಹೆಸರಾಗಿರುವ ಬುಲ್ಡೋಜರ್ ಕಾರ್ಯಾಚರಣೆಗಳ ಪರವಾಗಿ ದೃಢವಾಗಿ ನಿಂತಿದ್ದಾರೆ. ಅವರ ಬೆಂಬಲಿಗರು ಇದನ್ನು ಕ್ರಿಮಿನಲ್ ಗಳ ವಿರುದ್ಧ ಕಟ್ಟುನಿಟ್ಟಾದ ಕ್ರಮ ಎಂದು ಬಣ್ಣಿಸಿದರೆ ಅವರ ಟೀಕಾಕಾರರು ಇದನ್ನು ಭಿನ್ನಾಭಿಪ್ರಾಯಗಳ ವಿರುದ್ಧ ಉದ್ದೇಶಿತ ಅಸಮಾನ ಕ್ರಮ ಎಂದು ಬಣ್ಣಿಸಿದ್ದಾರೆ.

ಉ.ಪ್ರ.ಸರಕಾರವು ಫೆ.10ರಿಂದ 12ರವರೆಗೆ ಲಕ್ನೋದಲ್ಲಿ ಆಯೋಜಿಸಿರುವ ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಮುನ್ನ ದೇಶಿಯ ಹೂಡಿಕೆದಾರರನ್ನು ಆಕರ್ಷಿಸಲು ಆದಿತ್ಯನಾಥ್ ಮುಂಬೈಗೆ ಎರಡು ದಿನಗಳ ಭೇಟಿ ನೀಡಿದ್ದರು.

ತವರು ರಾಜ್ಯದಲ್ಲಿ ಫಿಲ್ಮ್ ಸಿಟಿಯನ್ನು ಸ್ಥಾಪಿಸುವುದರ ಹಿಂದಿನ ಉದ್ದೇಶ ಮುಂಬೈನಿಂದ ಅದನ್ನು ಕಿತ್ತುಕೊಳ್ಳುವುದಲ್ಲ ಎಂದು ಅವರು ಒತ್ತಿ ಹೇಳಿದರು. ಯೋಗಿ ಸರಕಾರವು ಜೇವಾರ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿ ಯಮುನಾ ಎಕ್ಸ್ಪ್ರೆಸ್ ವೇ ಉದ್ದಕ್ಕೂ ಜಾಗತಿಕ ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಉದ್ದೇಶಿಸಿರುವುದರಿಂದ ಬಾಲಿವುಡ್ ಉತ್ತರ ಪ್ರದೇಶಕ್ಕೆ ಸ್ಥಳಾಂತರಗೊಳ್ಳುತ್ತದೆ ಎಂಬ ಕಳವಳಗಳನ್ನು ಮಹಾರಾಷ್ಟ್ರದಲ್ಲಿ ಕೆಲವರು ವ್ಯಕ್ತಪಡಿಸಿದ್ದಾರೆ. ಉ.ಪ್ರ.ಫಿಲ್ಮ್ ಸಿಟಿಯು 1,200 ಎಕರೆ ಪ್ರದೇಶದಲ್ಲಿ ತಲೆಯೆತ್ತಲಿದ್ದರೆ ಮುಂಬೈನ ಗೋರೆಗಾಂವ್ ನಲ್ಲಿರುವ ಫಿಲ್ಮ್ಸಿಟಿ 520 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ.

‘‘ಮುಂಬೈ ಎಂದರೆ ಮುಂಬೈ. ಅದು ‘ಅರ್ಥಭೂಮಿ (ಆರ್ಥಿಕತೆಯ ಪ್ರದೇಶ)’ಯಾಗಿದೆ ಮತ್ತು ಉ.ಪ್ರದೇಶವು ‘ಧರ್ಮಭೂಮಿ (ಧರ್ಮಗಳ ನಾಡು)’ಯಾಗಿದೆ. ಇವೆರಡರ ಸಂಗಮವಾಗಬಹುದು. ನಾವು ಇಲ್ಲಿಯ ಫಿಲ್ಮ್ಸಿಟಿಯನ್ನು ಒಯ್ಯಲು ಬಯಸಿಲ್ಲ,ಆದರೆ ನಮ್ಮದೇ ಆದ ಫಿಲ್ಮ್ ಸಿಟಿಯನ್ನು ನಿರ್ಮಿಸುತ್ತಿದ್ದೇವೆ. ಕಾಮಗಾರಿಯು ಪ್ರಗತಿಯಲ್ಲಿದೆ ಮತ್ತು ಕೆಲವು ಪ್ರಮುಖ ಸ್ಟುಡಿಯೋಗಳು ಅಲ್ಲಿಗೆ ಬರಲು ಆಸಕ್ತಿಯನ್ನು ತೋರಿಸಿವೆ ’’ಎಂದು ಹೇಳುವ ಮೂಲಕ ಆದಿತ್ಯನಾಥ ಕಳವಳಗಳನ್ನು ನಿವಾರಿಸಲು ಪ್ರಯತ್ನಿಸಿದರು.

ಜಾಗತಿಕ ಹೂಡಿಕೆದಾರರ ಶೃಂಗಸಭೆಗೆ ಹೂಡಿಕೆದಾರರನ್ನು ಆಕರ್ಷಿಸಲು ತನ್ನ ತಂಡಗಳನ್ನು 16 ರಾಷ್ಟ್ರಗಳಿಗೆ ಕಳುಹಿಸಿದ ಬಳಿಕ ಉ.ಪ್ರ.ಸರಕಾರವು ಮಂಬೈನಿಂದ ತನ್ನ ದೇಶಿಯ ಪ್ರವಾಸವನ್ನು ಆರಂಭಿಸಿದೆ. ದೇಶಿಯ ಹೂಡಿಕೆದಾರರನ್ನು ಸೆಳೆಯಲು ದೇಶದ ವಿವಿಧ ನಗರಗಳಲ್ಲಿ ಶೀಘ್ರವೇ ನಡೆಯಲಿರುವ ರೋಡ್ಶೋಗಳನ್ನು ಯಶಸ್ವಿಗೊಳಿಸಲು ರಾಜ್ಯ ಸರಕಾರವು ಪರಿಣಾಮಕಾರಿ ಕಾರ್ಯತಂತ್ರಗಳನ್ನು ರೂಪಿಸಲಿದೆ ಎಂದು ಉ.ಪ್ರ.ಮುಖ್ಯ ಕಾರ್ಯದರ್ಶಿ ದುರ್ಗಾಶಂಕರ ಮಿಶ್ರಾ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X