ಸ್ವದೇಶ ದರ್ಶನ್ ಯೋಜನೆಗೆ ಮೈಸೂರು, ಹಂಪಿ ಸೇರ್ಪಡೆ
ಮೈಸೂರು,ಜ.5: ಸ್ವದೇಶ ದರ್ಶನ್ 2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಕೇಂದ್ರೀಯ ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಸಕ್ರ್ಯೂಟ್ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಹಾಗಾಗಿಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ಅನಂತ ಅಭಿನಂದನೆಗಳು ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
A moment of pride for Karnataka as Hampi & Mysuru are enlisted in the Swadesh Darshan Scheme, a Central Sector scheme launched in 2014-15 by Ministry of Tourism & Culture to promote, develop & harness potential of tourism & integrated development of theme-based tourist circuits. pic.twitter.com/TwXtr1DQmI
— CM of Karnataka (@CMofKarnataka) January 5, 2023