Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್‌ಐಸಿಯ ‘ನ್ಯೂಜೀವನ್ ಶಾಂತಿ’ ಆ್ಯನುಟಿ...

ಎಲ್‌ಐಸಿಯ ‘ನ್ಯೂಜೀವನ್ ಶಾಂತಿ’ ಆ್ಯನುಟಿ ದರ ಪರಿಷ್ಕರಣೆ

5 Jan 2023 11:54 PM IST
share
ಎಲ್‌ಐಸಿಯ ‘ನ್ಯೂಜೀವನ್ ಶಾಂತಿ’  ಆ್ಯನುಟಿ ದರ ಪರಿಷ್ಕರಣೆ

ಮುಂಬೈ: ಭಾರತೀಯ  ಜೀವವಿಮಾ ನಿಗಮವು  05-01-2023ರಿಂದ ಅನ್ವಯವಾಗುವಂತೆ ಎಲ್‌ಐಸಿ ನ್ಯೂಜೀವನ್ ಶಾಂತಿ (ಪ್ಲ್ಯಾನ್ ನಂ.858)ಯ  ಆ್ಯನುಟಿ  (ವರ್ಷಾಶನ)  ಯೋಜನೆಯನ್ನು ಮೇಲ್ಮುಖವಾಗಿ ಪರಿಷ್ಕರಿಸಿದೆ. ವರ್ಧಿಸಲ್ಪಟ್ಟ ಆ್ಯನುಟಿ ದರಗಳು 05.01.2023ರಿಂದ ಮಾರಾಟಕ್ಕೆ ಲಭ್ಯವಿರುವುದು. ಅಧಿಕ ಖರೀದಿ ದರ ಮೇಲಿನ  ಇನ್‌ಸೆಂಟವ್‌ಗಳನ್ನು  ಕೂಡಾ ಹೆಚ್ಚಿಸಲಾಗಿದೆ. ಅದು ಪ್ರತಿ ಸಾವಿರಕ್ಕೆ 3 ರೂ.ನಿಂದ 9.75 ರೂ.ವರೆಗೆ ಇರಲಿದ್ದು, ಖರೀದಿ ದರ ಹಾಗೂ ಆಯ್ಕೆ ಮಾಡಿಕೊಂಡ  ಮುಂದೂಡಿಕೆಯ (ಡೆಫರ್‌ಮೆಂಟ್) ಅವಧಿಯನ್ನು ಆಧರಿಸಿರುತ್ತದೆ.

ಇದೊಂದು ಏಕ ಪ್ರೀಮಿಯಂನ ಯೋಜನೆಯಾಗಿದ್ದು, ಪಾಲಿಸಿದಾರನು ಸಿಂಗಲ್ ಲೈಫ್ ಹಾಗೂ ಜಾಯಿಂಟ್ ಲೈಫ್ ಡೆಫರ್ಡ್‌ ಆ್ಯನುಟಿ  ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಮುಂದೂಡಿಕೆಯ ಅವಧಿ (ಡೆಫರ್‌ಮೆಂಟ್ ಪೀರಿಯಡ್)ಯ ಆನಂತರ  ಭವಿಷ್ಯದಲ್ಲಿ ನಿಯಮಿತವಾದ  ಆದಾಯ ನೀಡುವ ಯೋಜನೆಯನ್ನು ಹೊಂದಲು ಬಯಸುವಂತಹ ಉದ್ಯೋಗಿಗಳು ಹಾಗೂ ಸ್ವ ಉದ್ಯೋಗಿಗಳಿಗೆ ಇದೊಂದು ಹೇಳಿ ಮಾಡಿಸಿದಂತಹ ಯೋಜನೆಯಾಗಿದೆ. ಆರಂಭಿಕ ಹಂತದಿಂದಲೇ ಭವಿಷ್ಯದಲ್ಲಿನ ನಿವೃತ್ತಿಯ ಕುರಿತಾಗಿ ಯೋಜನೆಗಳನ್ನು ರೂಪಿಸುವ ಯುವ ವೃತ್ತಿಪರರಿಗೆ ಡೆಫರ್ಡ್‌ ಆ್ಯನುಟಿ ಪ್ಲ್ಯಾನ್ ಒಂದು ವರದಾನವಾಗಿದೆ.

ಪಾಲಿಸಿಯ  ಆರಂಭದಿಂದಲೇ ಆ್ಯನುಟಿ ದರಗಳು ಖಾತರಿಗೊಂಡಿರುತ್ತವೆ. ನ್ಯೂಜೀವನ್ ಶಾಂತಿ ಯೋಜನೆಯಡಿ ಆ್ಯನುಟಿ ಮೊತ್ತವನ್ನು ಎಲ್‌ಐಸಿ ವೆಬ್‌ಸೈಟ್‌ನಲ್ಲಿ ಹಾಗೂ ವಿವಿಧ ಎಲ್‌ಐಸಿ ಆ್ಯಪ್‌ಗಳಲ್ಲಿ ಒದಗಿಸಲಾಗುವ ಕ್ಯಾಲುಕ್ಯುಲೇಟರ್ ಮೂಲಕ ಲೆಕ್ಕಹಾಕಬಹುದಾಗಿದೆ.

ಈ ಯೋಜನೆಯು ಆಫ್‌ಲೈನ್ ಹಾಗೂ ಆನ್‌ಲೈನ್ ಮೂಲಕ ಲಭ್ಯವಿರುತ್ತದೆ. ಹೆಚ್ಚಿನ ವಿವರಗಳಿಗೆ www.licindia.in ಅಥವಾ ಇತರ ಯಾವುದೇ ಎಲ್‌ಐಸಿ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಭಾರತೀಯ ಜೀವವಿಮಾ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

share
Next Story
X