Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಮುನಿಸಿಪಲ್‌ ಕೌನ್ಸಿಲ್‌ ಮೊದಲ...

ದಿಲ್ಲಿ ಮುನಿಸಿಪಲ್‌ ಕೌನ್ಸಿಲ್‌ ಮೊದಲ ಸಭೆಯಲ್ಲಿ ಆಪ್-ಬಿಜೆಪಿ ಸದಸ್ಯರ ಮಾರಾಮಾರಿ

ಮೇಯರ್‌ ಆಯ್ಕೆ ಮುಂದಕ್ಕೆ, ಸಭೆ ಮುಂದೂಡಿಕೆ

6 Jan 2023 3:18 PM IST
share
ದಿಲ್ಲಿ ಮುನಿಸಿಪಲ್‌ ಕೌನ್ಸಿಲ್‌ ಮೊದಲ ಸಭೆಯಲ್ಲಿ ಆಪ್-ಬಿಜೆಪಿ ಸದಸ್ಯರ ಮಾರಾಮಾರಿ
ಮೇಯರ್‌ ಆಯ್ಕೆ ಮುಂದಕ್ಕೆ, ಸಭೆ ಮುಂದೂಡಿಕೆ

ಹೊಸದಿಲ್ಲಿ: ಹೊಸದಾಗಿ ಚುನಾಯಿತವಾದ ದಿಲ್ಲಿ ಮುನಿಸಿಪಲ್‌ ಕಾರ್ಪೊರೇಷನ್‌ನ ಮೊದಲ ಸಭೆಯಲ್ಲಿ ಇಂದು ಆಮ್‌ ಆದ್ಮಿ ಪಕ್ಷ (AAP) ಹಾಗೂ ಬಿಜೆಪಿ (BJP) ಕೌನ್ಸಿಲರ್‌ಗಳ ನಡುವೆ ನಡೆದ ಹೊಯ್‌ಕೈ ಹಿನ್ನೆಲೆಯಲ್ಲಿ ಮೇಯರ್‌ ಚುನಾವಣೆಯನ್ನು ಸದ್ಯಕ್ಕೆ ನಡೆಸದೇ ಇರಲು ನಿರ್ಧರಿಸಲಾಗಿದೆಯಲ್ಲದೆ ಸಭಯನ್ನೂ ಮುಂದೂಡಲಾಗಿದೆ.

ಹೊಸದಾಗಿ ಚುನಾಯಿತ ಸದಸ್ಯರು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Aravind Kejriwal) ವಿರುದ್ಧ ಘೋಷಣೆ ಮೊಳಗಿಸಿದ್ದಾರೆ. ಆಪ್‌ ಹಾಗೂ ಬಿಜೆಪಿ ಸದಸ್ಯರು ಪರಸ್ಪರ ಕೈಕೈಮಿಸಲಾಯಿಸಿ ನೆಲದಲ್ಲೂ ಬಿದ್ದ ದೃಶ್ಯಗಳು ಕಂಡು ಬಂದವು.

ದಿಲ್ಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೇನಾ ಅವರು ನೇಮಕಗೊಳಿಸಿದ ತಾತ್ಕಾಲಿಕ ಸ್ಪೀಕರ್‌ ಸತ್ಯ ಶರ್ಮ ಅವರು  ಮೇಯರ್‌ ಚುನಾವಣೆಗೆ ಮುಂಚಿತವಾಗಿ ನಾಮನಿರ್ದೇಶಿತ ಸದಸ್ಯರಿಗೆ ಪ್ರಮಾಣವಚನ ಬೋಧಿಸುತ್ತಿರುವುದರ ವಿರುದ್ಧ ಪ್ರತಿಭಟನೆಗಳು ನಡೆದವು. ಶರ್ಮ ಅವರು ಮನೋಜ್‌ ಕುಮಾರ್‌ ಅವರನ್ನು ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದಾಗ ಆಪ್‌ ಶಾಸಕರು ಹಾಗು ಕೌನ್ಸಿಲರ್‌ಗಳು ಸಭೆಯ ಮಧ್ಯಭಾಗಕ್ಕೆ ಧಾವಿಸಿ ಘೋಷಣೆಗಳನ್ನು ಮೊಳಗಿಸಿದರಲ್ಲದೆ ಚುನಾಯಿತ ಸದಸ್ಯರ ಪ್ರಮಾಣವಚನ ನಂತರ ನಾಮನಿರ್ದೇಶಿತ ಸದಸ್ಯರ ಪ್ರಮಾಣವಚನ ನಡೆಯಬೇಕೆಂದು ಆಗ್ರಹಿಸಿದರು. ದಿಲ್ಲಿ ಸರ್ಕಾರವನ್ನು ವಿಶ್ವಾಸಕ್ಕೆ ಪಡೆಯದೆ 10 ಮಂದಿ ನಾಮನಿರ್ದೇಶಿತ ಸದಸ್ಯರ ಹೆಸರುಗಳನ್ನು ಎಲ್‌ಜಿ ಸೂಚಿಸಿರುವುದಕ್ಕೆ ಆಪ್‌ ಈ ಹಿಂದೆಯೇ ಆಕ್ಷೇಪಿಸಿತ್ತು.

ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸೋತ ಬಿಜೆಪಿಗೆ ಸಹಾಯ ಮಾಡಿ ಮೇಯರ್‌ ಚುನಾವಣೆ ಮೇಲೆ ಪ್ರಭಾವ ಬೀರಲು ಲೆಫ್ಟಿನೆಂಟ್‌ ಗವರ್ನರ್‌ ಪ್ರಯತ್ನಿಸುತ್ತಿದ್ದಾರೆ ಎಂದು ಆಪ್‌ ಆರೋಪಿಸಿದೆ. ಬಿಜೆಪಿಯತ್ತ ಒಲವು ಹೊಂದಿರುವವರನ್ನು ನಾಮನಿರ್ದೇಶಿತ ಸದಸ್ಯ ಹುದ್ದೆಗೆ ಲೆಫ್ಟಿನೆಂಟ್‌ ಗವರ್ನರ್‌ ಹೆಸರಿಸಿದ್ದಾರೆಂದು ಕೇಜ್ರಿವಾಲ್‌ ಕೂಡ ಆರೋಪಿಸಿದ್ದಾರೆ.

ತಾನು ಮೇಯರ್‌ ಚುನಾವಣೆ ಗೆಲ್ಲುವುದಾಗಿ  ಬಿಜೆಪಿ ಕೂಡ ಹೇಳಿಕೊಳ್ಳುತ್ತಿದೆ.

ಆಪ್‌ ಮೇಯರ್‌ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಶೆಲ್ಲಿ ಒಬೆರಾಯ್‌ ಅವರನ್ನು ಹೆಸರಿಸಿದ್ದರೆ ಬಿಜೆಪಿ ಕೊನೇ ಕ್ಷಣದಲ್ಲಿ ರೇಖಾ ಗುಪ್ತಾ ಅವರ ಹೆಸರು ಮುಂದಿಟ್ಟಿತ್ತು.

ಇದನ್ನೂ ಓದಿ: 2021ಕ್ಕೆ ನಿಗದಿಯಾಗಿದ್ದ ಜನಗಣತಿ ಕಾರ್ಯ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ: ವರದಿ

#WATCH | Delhi: Huge ruckus at Civic Centre, before the commencement of voting for the Delhi Mayor elections, regarding swearing-in of nominated councillors. pic.twitter.com/BCz3HLC9qL

— ANI (@ANI) January 6, 2023
share
Next Story
X