Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‌ʼಬಾಯ್ಕಾಟ್ ಬಾಲಿವುಡ್‌ʼ ಟ್ರೆಂಡ್‌...

‌ʼಬಾಯ್ಕಾಟ್ ಬಾಲಿವುಡ್‌ʼ ಟ್ರೆಂಡ್‌ ನಿಲ್ಲಿಸಲು ಸಹಾಯ ಮಾಡಿ: ಉ.ಪ್ರ. ಸಿಎಂಗೆ ಮನವಿ ಮಾಡಿದ ಸುನೀಲ್‌ ಶೆಟ್ಟಿ

6 Jan 2023 5:16 PM IST
share
‌ʼಬಾಯ್ಕಾಟ್ ಬಾಲಿವುಡ್‌ʼ ಟ್ರೆಂಡ್‌ ನಿಲ್ಲಿಸಲು ಸಹಾಯ ಮಾಡಿ: ಉ.ಪ್ರ.  ಸಿಎಂಗೆ ಮನವಿ ಮಾಡಿದ ಸುನೀಲ್‌ ಶೆಟ್ಟಿ

 ಮುಂಬೈ: ಹಿಂದಿ ಚಿತ್ರರಂಗದ ವಿರುದ್ಧ ಇರುವ ದ್ವೇಷವನ್ನು ಅಳಿಸಲು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ʼಬಾಯ್ಕಾಟ್‌ ಬಾಲಿವುಡ್‌ʼ ಟ್ರೆಂಡ್‌ ಅನ್ನು ನಿಲ್ಲಿಸಲು ಸಹಾಯ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ನಟ ಸುನೀಲ್‌ ಶೆಟ್ಟಿ ಆಗ್ರಹಿಸಿದ್ದಾರೆ.

ನೊಯ್ಡಾ ಫಿಲ್ಮ್‌ ಸಿಟಿಯಲ್ಲಿ ಚಿತ್ರೀಕರಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಗಿ ಆದಿತ್ಯನಾಥ್‌ ತಮ್ಮ ಎರಡು ದಿನಗಳ ಮುಂಬೈ ಭೇಟಿಯ ವೇಳೆ  ಬಾಲಿವುಡ್‌ ಸೆಲೆಬ್ರಿಟಿಗಳಾದ ಸುನೀಲ್ ಶೆಟ್ಟಿ, ಸುಭಾಷ್‌ ಘಾಯ್‌, ಜ್ಯಾಕಿ ಶ್ರಾಫ್‌, ರಾಜಕುಮಾರ್‌ ಸಂತೋಷಿ, ಮನಮೋಹನ್‌ ಶೆಟ್ಟಿ ಮತ್ತು ಬೋನಿ ಕಪೂರ್‌ ಅವರನ್ನು ಭೇಟಿಯಾಗಿದ್ದರು.

ಈ ಸಂದರ್ಭ ಆದಿತ್ಯನಾಥ್‌ ಅವರಿಗೆ ಸುನೀಲ್‌ ಶೆಟ್ಟಿ ಮನವಿಯೊಂದನ್ನು ಮಾಡಿದರು. "ಬಾಯ್ಕಾಟ್‌ ಬಾಲಿವುಡ್‌ ಎಂಬ ಹ್ಯಾಶ್‌ಟ್ಯಾಗ್‌ ಬಗ್ಗೆ ನಿಮ್ಮ ಜೊತೆ ಮಾತನಾಡಬೇಕು. ನೀವು ಅದರ ಬಗ್ಗೆ ಏನಾದರೂ ಹೇಳಿದರೆ ಅದು ನಿಲ್ಲಬಹುದು. ನಾವು ಒಳ್ಳೆ ಕೆಲಸ ಮಾಡುತ್ತಿದ್ದೇವೆ,"ಎಂದು ಹೇಳಿದರು.

"ಬಾಲಿವುಡ್‌ಗೆ ಅಂಟಿಕೊಂಡಿರುವ ಈ ಕಳಂಕ ನೋಡಿದಾಗ ನೋವಾಗುತ್ತದೆ. ಇಲ್ಲಿರುವ ಶೇ 99ರಷ್ಟು ಮಂದಿ ಒಳ್ಳೆಯವರು. ದಯವಿಟ್ಟು ಯೋಗೀಜಿ ಈ ನಿಟ್ಟಿನಲ್ಲಿ ಹೆಜ್ಜೆ ಮುಂದಿಟ್ಟು ಪ್ರಧಾನಿ ಜೊತೆ ಮಾತನಾಡಿ," ಎಂದು ಸುನೀಲ್‌ ಶೆಟ್ಟಿ ಮನವಿ ಮಾಡಿದರು.

"ನಾವು ಕೈಜೋಡಿಸಬೇಕು ಮತ್ತು ಈ ಉದ್ಯಮದ ಜನರು ಒಳ್ಳೆಯವರೆಂದು ಜನರಿಗೆ ತಿಳಿ ಹೇಳಬೇಕು. ನಾವೇನು ಡ್ರಗ್ಸ್‌ ಜೊತೆ ನಂಟು ಹೊಂದಿಲ್ಲ, ಇತರರಿಗೆ ತೊಂದರೆಯುಂಟು ಮಾಡುವುದಿಲ್ಲ. ಭಾರತವನ್ನು ಜಗತ್ತಿನೊಂದಿಗೆ ಜೋಡಿಸಲು ಈ ಉದ್ಯಮ ಶ್ರಮ ಪಟ್ಟಿದೆ. ನೀವು ದೊಡ್ಡ ಹೆಸರು ಸರ್.‌, ನೀವು ಮಾತನಾಡಿದರೆ ಜನರು ಕೇಳುತ್ತಾರೆ," ಎಂದು ಶೆಟ್ಟಿ ಹೇಳಿದರು.

ಬಾಯ್ಕಾಟ್‌ ಬಾಲಿವುಡ್‌ ಟ್ರೆಂಡ್‌ ಅಮೀರ್‌ ಖಾನ್‌ ಅವರ ಲಾಲ್‌ ಸಿಂಗ್‌ ಛಡ್ಡಾ ದಿಂದ ಹಿಡಿದು ಶಾರುಖ್‌ ಅವರ ಪಠಾಣ್‌ ಚಿತ್ರ ಸಹಿತ ಹಲವು ಚಲನಚಿತ್ರಗಳನ್ನು ಬಾಧಿಸಿದೆ.

share
Next Story
X