Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕೊಲಾಸೊ ಅವರ ಹೃದಯವೇ ಪ್ರಾರ್ಥನಾ ಮಂದಿರ:...

ಕೊಲಾಸೊ ಅವರ ಹೃದಯವೇ ಪ್ರಾರ್ಥನಾ ಮಂದಿರ: ಸಿ.ಟಿ. ರವಿ

ಭಾರತೀಯರ ಹೃದಯದಲ್ಲಿ, ವಿಶ್ವ ಸಮುದಾಯದಲ್ಲಿ ಕೊಲಾಸೊ ಹೆಸರು

6 Jan 2023 5:37 PM IST
share
ಕೊಲಾಸೊ ಅವರ ಹೃದಯವೇ ಪ್ರಾರ್ಥನಾ ಮಂದಿರ: ಸಿ.ಟಿ. ರವಿ
ಭಾರತೀಯರ ಹೃದಯದಲ್ಲಿ, ವಿಶ್ವ ಸಮುದಾಯದಲ್ಲಿ ಕೊಲಾಸೊ ಹೆಸರು

ಶುದ್ದವಾದ ಹೃದಯವೇ ನಿಜವಾದ ಮಂದಿರ ಎನ್ನುವ ಮಾತಿಗೆ ಉಪಮೆಯಾಗಿ ಬದುಕಿರುವವರು ರೊನಾಲ್ಡ್ ಕೊಲಾಸೊ ಎಂದು ಮಾಜಿ ಸಚಿವ ಹಾಗೂ ಡಾ. ರೊನಾಲ್ಡ್ ಕೊಲಾಸೊ ಅಭಿನಂದನಾ ಸಮಿತಿ ಅಧ್ಯಕ್ಷರಾದ ಸಿ.ಟಿ.ರವಿ ನುಡಿದರು.

ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಳಿದವರಿಗೆ ಇಲ್ಲ ಎಂದು ವಾಪಾಸ್ ಕಳುಹಿಸಿದ ಉದಾಹರಣೆಯೇ ಇಲ್ಲದಂತೆ ಕೊಲಾಸೊ ದಾನ ಮಾಡಿದ್ದಾರೆ. ಪ್ರಜಾಪ್ರಭುತ್ವ ಪ್ರತಿಯೊಬ್ಬರಿಗೂ ಅವಕಾಶಗಳನ್ನು ಕೊಡುತ್ತದೆ. ಬಸ್ ಕಂಡಕ್ಟರ್ ಆಗಿದ್ದ ವೀರೇಂದ್ರ ಶರ್ಮ ಅವರು ಲಂಡನ್‌ನಲ್ಲಿ  ಐದು ಬಾರಿ ಸಂಸದರಾಗಿದ್ದಾರೆ ಎಂದರೆ ಅದಕ್ಕೆ ಪ್ರಜಾಪ್ರಭುತ್ವದ ಕೊಡುಗೆ ಅಪಾರ ಇದೆ. ರಾಜ್ಯ ಸರ್ಕಾರ ಕೊಲಾಸೊ ಅವರ ಸೇವೆಯನ್ನು ಗಮನಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.

ಕೊಲಾಸೊ ಅವರಿಗೆ ಕೇಂದ್ರ ಸರ್ಕಾರದ ಪುರಸ್ಕಾರ ಸಲ್ಲಬೇಕು. ಆದರೆ ಕೊಲಾಸೊ ಹೆಸರನ್ನು ಕೇಂದ್ರ ಪ್ರಶಸ್ತಿಗೆ ಶಿಫಾರಸ್ಸು ಮಾಡುವ ಧೈರ್ಯ ನನಗಿಲ್ಲ. ಏಕೆಂದರೆ ಪ್ರಧಾನಿ ಮೋದಿ ಅವರು ಯಾವುದೇ ಶಿಫಾರಸ್ಸುಗಳನ್ನು ಕೇಳುವುದಿಲ್ಲ. ಸಾಲು ಮರದ ತಿಮ್ಮಕ್ಕ ಅವರ ಹೆಸರನ್ನು ಯಾರೂ ಶಿಫಾರಸ್ಸು ಮಾಡಿರಲಿಲ್ಲ. ಆದರೂ ಅವರಿಗೆ ಪದ್ಮ ಪ್ರಶಸ್ತಿ ಬಂತು. ಹೀಗಾಗಿ ಕೇಂದ್ರ ಸರ್ಕಾರ ಈಗ ಶಿಫಾರಸ್ಸುಗಳ ಮೇಲೆ ಪ್ರಶಸ್ತಿಗಳನ್ನು ಕೊಡದೆ ತನ್ನದೇ ಮಾನದಂಡವನ್ನು ಅನುಸರಿಸುತ್ತದೆ. ಶಿಫಾರಸ್ಸಿನ ಮೇಲೆ ಪ್ರಶಸ್ತಿಗಳನ್ನು ಕೊಡುವ ಕಾಲ ಹಿಂದಿತ್ತು. ಈಗ ಇಲ್ಲ. ಆದರೆ, ಕೊಲಾಸೊ ಅವರ ಹೆಸರು ಭಾರತೀಯರ ಹೃದಯದಲ್ಲಿ, ವಿಶ್ವ ಸಮುದಾಯದಲ್ಲಿ ದಾಖಲಾಗಿದೆ. ಜನರ ಹೃದಯದಲ್ಲಿ ಸ್ಥಾನ ಪಡೆಯುವುದು ಎಲ್ಲಕ್ಕಿಂತ ದೊಡ್ಡ ಪ್ರಶಸ್ತಿ. ಅದು ಕೊಲಾಸೊ ಅವರಿಗೆ ಪ್ರಾಪ್ತಿಯಾಗಿದೆ ಎಂದರು.

ಕೊಲಾಸೊ ಅವರನ್ನು ಲಂಡನ್‌ನ ಹೌಸ್ ಆಫ್ ಕಾಮನ್ಸ್ ಸನ್ಮಾನಿಸಿತು. ಆ ಬಳಿಕ ರಾಜ್ಯದಲ್ಲೂ ಇವರನ್ನು ಅಭಿನಂದಿಸಬೇಕು ಎನ್ನುವ ಆಶಯ ನಮ್ಮಲ್ಲಿ ಬಂತು. ನಾನು ಮತ್ತು ಕೆ.ಇ.ರಾಧಾಕೃಷ್ಣ ಅವರು ಕೊಲಾಸೊ ಅವರನ್ನು ಈ ಬಗ್ಗೆ ಸಂಪರ್ಕಿಸಿದೆವು. ಆದರೆ ಮೊದಲಿಗೆ ಕೊಲಾಸೊ ಒಪ್ಪಲಿಲ್ಲ. ಯಾವಾಗಲೂ ದಾನಿಗಳಿಗೆ ತಾವು ಮಾಡಿದ ದಾನ ಹೊರಜಗತ್ತಿಗೆ ಗೊತ್ತಾಗಬಾರದು ಎನ್ನುವುದು ಇರುತ್ತದೆ. ಆದರೆ, ದಾನಿಗಳನ್ನು ಗುರುತಿಸಿ ಅಭಿನಂದಿಸುವ ಮೂಲಕ ದಾನಕಾರ್ಯಕ್ಕೆ ಇನ್ನಷ್ಟು ಮಂದಿ ಮುಂದಾಗಲಿ, ಇನ್ನಷ್ಟು ಉದ್ಯಮಿಗಳಿಗೆ ಪ್ರೇರಣೆಯಾಗಲಿ ಎನ್ನುವುದು ನಮ್ಮ ಆಶಯವಾಗಿತ್ತು. ಹೀಗಾಗಿ ಕೊಲಾಸೊ ಅವರು ವಿಶ್ವ ಪ್ರಜ್ಞೆಗೆ ಪ್ರೇರಣೆಯಾಗಿದ್ದಾರೆ. ಇದು ಇನ್ನಷ್ಟು ಮಂದಿಯನ್ನು ಪ್ರೇರೇಪಿಸಲಿ ಎನ್ನುವ ಉದ್ದೇಶದಿಂದ ನಾವು ಈ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡೆವು ಎಂದು ವಿವರಿಸಿದರು.

share
Next Story
X