Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕಲ್ಲು ಮುಳ್ಳಿನ ಹಾದಿಯಲ್ಲಿ ಅರಳಿದ ಹೂ...

ಕಲ್ಲು ಮುಳ್ಳಿನ ಹಾದಿಯಲ್ಲಿ ಅರಳಿದ ಹೂ ಕೊಲಾಸೊ: ಬೋಜೇಗೌಡ

6 Jan 2023 5:52 PM IST
share
ಕಲ್ಲು ಮುಳ್ಳಿನ ಹಾದಿಯಲ್ಲಿ ಅರಳಿದ ಹೂ ಕೊಲಾಸೊ: ಬೋಜೇಗೌಡ

ಮೂರೂವರೆ ದಶಕಗಳ ಕಠಿಣ ಪರಿಶ್ರಮ, ರಾಜಿರಹಿತ ಮಾನವೀಯತೆ ಮತ್ತು ಸಾಮಾಜಿಕ ಬದ್ದತೆಯ ಪ್ರತಿಫಲದ ಹೆಸರು ರೊನಾಲ್ಡ್ ಕೊಲಾಸೊ ಎಂದು ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಭಿಪ್ರಾಯಪಟ್ಟರು.

ಕೊಲಾಸೊ ಅವರ ಬದುಕು ಹೂವಿನ ಹಾಸಿಗೆ ಆಗಿರಲಿಲ್ಲ. ಇವರದ್ದು ಕಲ್ಲು ಮುಳ್ಳಿನ ಹಾದಿಯಾಗಿತ್ತು. ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ ಕೊಲಾಸೊ ಅವರು ಪ್ರತಿ ದಿನದ, ಪ್ರತಿ ಗಳಿಗೆಯ ಪರಿಶ್ರಮದಿಂದ ದೊಡ್ಡ ಉದ್ಯಮಿಯಾದರು. ಕುವೆಂಪು ಅವರ ವಿಶ್ವ ಮಾನವ ಸಂದೇಶವನ್ನು ತಮ್ಮ ಬದುಕಿನುದ್ದಕ್ಕೂ ಪಾಲಿಸಿದ್ದಾರೆ. ಬಲಗೈಲಿ  ಕೊಟ್ಟದ್ದು ಎಡಗೈಗೆ ಗೊತ್ತಾಗಬಾರದು ಎನ್ನುವ ಜನಪದ ಮೌಲ್ಯದಂತೆ ಬದುಕಿದ್ದಾರೆ. ಇವೆಲ್ಲದರ ಪರಿಣಾಮವಾಗಿ ಕೊಲಾಸೊ ಹೆಸರು ವಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಾಗುವಂತಾಗಿದೆ.

ಕುವೆಂಪು ಅವರ ನಾಡಗೀತೆಯನ್ನು ನಾವು ಹಾಡುತ್ತೇವೆ. ಸಂಭ್ರಮಿಸುತ್ತೇವೆ. ಆದರೆ ನಾಡಗೀತೆಯ ಆಶಯದಂತೆ ಸರ್ವಜನಾಂಗದ ಶಾಂತಿಯ ತೋಟವಾಗಿ ಈ ನಾಡನ್ನು ರೂಪಿಸುವ ಹೊಣೆಗಾರಿಕೆಯನ್ನು ಎಷ್ಟು ಜನ ನಿಭಾಯಿಸುತ್ತಿದ್ದೇವೆ ಎನ್ನುವುದನ್ನು ನಾವು ಗಮನಿಸಬೇಕು. ಆದರೆ, ಈ ಕನ್ನಡ ನಾಡು ನಿಜವಾದ ಶಾಂತಿಯ ಬೀಡಾಗಿ, ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸಬೇಕು ಎನ್ನುವುದನ್ನು ಸದ್ದಿಲ್ಲದೆ, ಪ್ರಚಾರವಿಲ್ಲದೆ, ಅಹಂ ಇಲ್ಲದೆ ಕೊಲಾಸೊ ಮಾಡುತ್ತಿದ್ದಾರೆ. ಕೊಲಾಸೊ ಅವರ ಜತೆಗೆ ಅವರ ಇಡಿ ಕುಟುಂಬ ಜತೆಗಿದೆ. "ಹೆಂಡತಿಯೊಲುಮೆಯ ಭಾಗ್ಯವರಿಯದ" ಗಂಡು ಯಶಸ್ವಿ ಆಗಲು ಸಾಧ್ಯವಿಲ್ಲ. ಆದರೆ ಕೊಲಾಸೊ ಅವರ ಸೇವಾ ಕೈಂಕರ್ಯದಲ್ಲಿ  ಅವರ ಪತ್ನಿ ಬಹಳ ಬದ್ದತೆಯಿಂದ ಸಹಕಾರ ನೀಡುತ್ತಿದ್ದಾರೆ ಎನ್ನುವುದನ್ನು ಪ್ರಸ್ತಾಪಿಸಿ ಇಡಿ ಕುಟುಂಬಕ್ಕೆ ಧನ್ಯತೆ ಅರ್ಪಿಸಿದರು.

ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿತ್ಯ ನಿರಂತರ ಸೇವೆಯಿಂದ ಸಪ್ತ ಸಾಗರವನ್ನು ದಾಟಿ ಲಂಡನ್‌ನ ಹೌಸ್ ಆಫ್ ಕಾಮನ್ಸ್ ನಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಗೆ ಸೇರುವ ಘನತೆ ಮತ್ತು ಮೆಚ್ಚುಗೆಗೆ ಕೊಲಾಸೊ ಪಾತ್ರವಾಗಿದ್ದಾರೆ. ಇದು ಕನ್ನಡಿಗರಿಗೆ, ಭಾರತೀಯರಿಗೆ ಧಕ್ಕಿದ ಹೆಮ್ಮೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

share
Next Story
X