Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆ ಇಸ್ರೇಲನ್ನು ತಡೆಯದಿದ್ದರೆ...

ವಿಶ್ವಸಂಸ್ಥೆ ಇಸ್ರೇಲನ್ನು ತಡೆಯದಿದ್ದರೆ ನಮ್ಮ ಜನ ತಡೆಯುತ್ತಾರೆ: ಫೆಲಸ್ತೀನ್ ರಾಯಭಾರಿ

6 Jan 2023 10:59 PM IST
share
ವಿಶ್ವಸಂಸ್ಥೆ ಇಸ್ರೇಲನ್ನು ತಡೆಯದಿದ್ದರೆ ನಮ್ಮ ಜನ ತಡೆಯುತ್ತಾರೆ: ಫೆಲಸ್ತೀನ್ ರಾಯಭಾರಿ

ನ್ಯೂಯಾರ್ಕ್, ಜ.6: ‘ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿಮ್ಮನ್ನು ತಡೆಯಬೇಕು. ಅದು ಅವರ ಜವಾಬ್ದಾರಿ. ಅಂತರಾಷ್ಟ್ರೀಯ ನಿಯಮ ಮತ್ತು ಐತಿಹಾಸಿಕ ಯಥಾಸ್ಥಿತಿಯನ್ನು ಎತ್ತಿಹಿಡಿಯುವುದು ಎಲ್ಲಾ ದೇಶಗಳ ಜವಾಬ್ದಾರಿಯಾಗಿದೆ. ಅವರು ನಿಮ್ಮನ್ನು ತಡೆಯಬೇಕು. ಒಂದು ವೇಳೆ ಅವರು ತಡೆಯದಿದ್ದರೆ ನಮ್ಮ ಜನ ತಡೆಯಲಿದ್ದಾರೆ’ ಎಂದು ವಿಶ್ವಸಂಸ್ಥೆಗೆ ಫೆಲಸ್ತೀನ್ ರಾಯಭಾರಿ ರಿಯಾದ್ ಮನ್ಸೂರ್ ಇಸ್ರೇಲ್ಗೆ ಎಚ್ಚರಿಕೆ ನೀಡಿದ್ದಾರೆ.

ಇಸ್ರೇಲ್ ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಮಂಗಳವಾರ ಪೂರ್ವ ಜೆರುಸಲೇಂನ ಅಲ್-ಅಖ್ಸಾ ಮಸೀದಿಗೆ ಅಚ್ಚರಿಯ ಭೇಟಿ ನೀಡಿರುವ ಬಗ್ಗೆ ಚರ್ಚಿಸಲು ಯುಎಇ ಮತ್ತು ಚೀನಾದ ಪ್ರಸ್ತಾವನೆಯಂತೆ ನಡೆಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತು ಸಭೆಯನ್ನುದ್ದೇಶಿಸಿ ಮನ್ಸೂರ್ ಮಾತನಾಡುತಿದ್ದರು. ನಮ್ಮನ್ನು, ಅಂತರಾಷ್ಟ್ರೀಯ ಸಮುದಾಯವನ್ನು, ವಿಶ್ವಸಂಸ್ಥೆ ಭದ್ರತಾ ಮಂಡಳಿಯನ್ನು ಇಸ್ರೇಲ್ ತಿರಸ್ಕರಿಸಿರುವುದನ್ನು ಗಮನಿಸಿ ಈ ಬಗ್ಗೆ ಸದೃಢ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಇಸ್ರೇಲ್ ಸಚಿವ ಬೆನ್-ಗ್ವಿರ್ ಅವರ ಭೇಟಿಯು ಫೆಲಸ್ತೀನೀಯರ ಬದುಕಿನ ಪವಿತ್ರತೆ, ಅಂತರಾಷ್ಟ್ರೀಯ ಕಾನೂನಿನ ಪವಿತ್ರತೆ ಮತ್ತು ಅಲ್-ಹರಮ್ ಅಲ್-ಶರೀಫ್ನ ಪವಿತ್ರತೆಯ ಸಂಪೂರ್ಣ ಕಡೆಗಣನೆಯಾಗಿದೆ.

ಆದರೂ ಭದ್ರತಾ ಮಂಡಳಿ ನೇಪಥ್ಯದಲ್ಲೇ ಉಳಿದಿದೆ. ಭದ್ರತಾ ಮಂಡಳಿ ಒಳ್ಳೆಯ ವಿಷಯಗಳನ್ನು ಹೇಳುತ್ತಿದ್ದರೂ ನೇಪಥ್ಯದಲ್ಲೇ ಉಳಿದಿದೆ ಎಂದು ಹೇಳಿದರು.
ನಮ್ಮ ಜನತೆಯ ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ. ನಾವು ಪ್ರದರ್ಶಿಸುವ ಸಂಯಮ ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು ಎಂದಿಗೂ ದೌರ್ಬಲ್ಯವೆಂದು ಪರಿಗಣಿಸಬಾರದು. ಇಸ್ರೇಲ್ ನಡೆಯುತ್ತಿರುವ ದಾರಿಯು ದಂಗೆಗೆ ಕಾರಣವಾಗುತ್ತದೆ ಎಂಬುದನ್ನು ದಾಖಲೆಯೇ ತೋರಿಸಿಕೊಡುತ್ತದೆ ಎಂದ ಅವರು, ಅಂತರಾಷ್ಟ್ರೀಯ ಕಾನೂನು ಮತ್ತು ಶಾಂತಿಗೆ ಬದ್ಧವಾಗಿರುವ ದೇಶಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು. ಬೆಂಕಿ ನಿಯಂತ್ರಣ ತಪ್ಪಿದ ಬಳಿಕ ಕೊರಗಿದರೆ ಪ್ರಯೋಜನವಿಲ್ಲ ಎಂದು ಮನ್ಸೂರ್ ಹೇಳಿದ್ದಾರೆ.
  
ಈ ಸಂದರ್ಭ ಮಾತನಾಡಿದ ಇಸ್ರೇಲ್ ರಾಯಭಾರಿ ಗಿಲಾಡ್ ಎರ್ಡನ್, ಇರಾನ್ನಲ್ಲಿ ‘ಕೊಲೆಗಾರ’ ಅಯತುಲ್ಲಾ ಆಡಳಿತ ಸೇರಿದಂತೆ ಇತರ ಅಸಂಖ್ಯಾತ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚಿಸಬೇಕಿರುವ ಸಮಯದಲ್ಲಿ, ಸಮಸ್ಯೆಯೇ ಅಲ್ಲದ ವಿಷಯದ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತು ಸಭೆ ನಡೆಸುತ್ತಿದೆ ಎಂದು ಟೀಕಿಸಿದರು. ಬೆನ್-ಗ್ವಿರ್ ಅವರ ಸಂಕ್ಷಿಪ್ತ ಭೇಟಿ ಶಾಂತಿಯುತ ಮತ್ತು ನ್ಯಾಯಸಮ್ಮತವಾಗಿದೆ. ಇದು ಅಲ್-ಅಖ್ಸಾಗೆ ಆಕ್ರಮಣವಲ್ಲ ಅಥವಾ ಫೆಲಸ್ತೀನೀಯರು ಹೇಳುತ್ತಿರುವ ಯಾವುದೇ ಕಟ್ಟುಕಥೆಯನ್ನು ಸಮರ್ಥಿಸುವುದಿಲ್ಲ ಎಂದವರು ಹೇಳಿದ್ದಾರೆ.

ಬೆನ್-ಗ್ವಿರ್ ಅವರ ಭೇಟಿಯು ಪ್ರದೇಶದಲ್ಲಿ ಗಂಭೀರ ಪರಿಸ್ಥಿತಿ ನೆಲೆಸಲು ಕಾರಣವಾಗಿದೆ. ಪವಿತ್ರ ಸ್ಥಳದ ಪವಿತ್ರತೆ ಮತ್ತು ಶಾಂತಿಯನ್ನು ಕಾಪಾಡುವ ಅಗತ್ಯವಿದೆ ಎಂದು ಚೀನಾ ಹಾಗೂ ಯುಎಇಯ ರಾಯಭಾರಿ ಪ್ರತಿಪಾದಿಸಿದರು.

share
Next Story
X