ಪಾಂಡವಪುರ: ಮಹಿಳೆ ಮೇಲೆ ಚಿರತೆ ದಾಳಿ
ಮಂಡ್ಯ, ಜ.6: ಚಿರತೆ ದಾಳಿಯಿಂದ ಮಹಿಳೆ ಗಾಯಗೊಂಡಿರುವ ಘಟನೆ ಪಾಂಡವಪುರ ತಾಲೂಕು ಅವ್ವೇರಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಗ್ರಾಮದ ದೇವರಾಜು ಅವರ ಪತ್ನಿ ಬಸವಮ್ಮಣ್ಣಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಜಾನುವಾರು ಕಟ್ಟಲು ಜಮೀನಿ ಬಳಿ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ.
ಗ್ರಾಮದ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯವರು ದಾಳಿ ತಡೆಯುವಂತೆ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Next Story