Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ...

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿ ಪೊಲೀಸರಿಗೆ ಸೆರೆ ಸಿಕ್ಕಿದ್ದು ಹೇಗೆ?: ಇಲ್ಲಿದೆ ಮಾಹಿತಿ...

7 Jan 2023 1:36 PM IST
share
ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿ ಪೊಲೀಸರಿಗೆ ಸೆರೆ ಸಿಕ್ಕಿದ್ದು ಹೇಗೆ?: ಇಲ್ಲಿದೆ ಮಾಹಿತಿ...

ಹೊಸದಿಲ್ಲಿ: ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಏರ್ ಇಂಡಿಯಾ (Air India) ವಿಮಾನದಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಮುಂಬೈ ಮೂಲದ ಆರೋಪಿ ಶಂಕರ್ ಮಿಶ್ರಾನನ್ನು (Shankar Mishra) ದಿಲ್ಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕಾಗಿ ಪೊಲೀಸರು ಆತನ ಚಲನವಲನದ ಮೇಲೆ ನಿಗಾ ಇರಿಸಲು ಕೈಗೊಂಡ ವಿನೂತನ ಪತ್ತೆ ಕ್ರಮಗಳು ಅಚ್ಚರಿಗೆ ಕಾರಣವಾಗಿವೆ ಎಂದು ndtv.com ವರದಿ ಮಾಡಿದೆ.

ಆರೋಪಿ ಶಂಕರ್ ಮಿಶ್ರಾ ಪತ್ತೆಗೆ ವಿಮಾನ ನಿಲ್ದಾಣಗಳಿಗೆ ಮುನ್ಸೂಚನೆ ನೀಡಿದ್ದ ದಿಲ್ಲಿ ಪೊಲೀಸರು, ಆತನ ಫೋನ್ ಕರೆಗಳ ಮೇಲೆ ನಿಗಾ, ಡಿಜಿಟಲ್ ಹೆಜ್ಜೆಗುರುತುಗಳ ಪತ್ತೆ, ಆತನ ಬ್ಯಾಂಕ್ ವಹಿವಾಟುಗಳ ಮೇಲ್ವಿಚಾರಣೆಯಂತಹ ವಿನೂತನ ಪತ್ತೆ ಕ್ರಮಗಳನ್ನು ಅಳವಡಿಸಿಕೊಂಡಿದ್ದರು ಎಂದು ದಿಲ್ಲಿ ಪೊಲೀಸ್ ಉನ್ನತ ಮೂಲಗಳು ತಿಳಿಸಿವೆ.

ಆರೋಪಿ ಶಂಕರ್ ಮಿಶ್ರಾ ವಾಸಸ್ಥಳದ ಬಗ್ಗೆ ದೊರೆತ ಖಚಿತ ಸುಳಿವನ್ನು ಆಧರಿಸಿ ದಿಲ್ಲಿ ಪೊಲೀಸರು ಒಂದು ತಂಡವನ್ನು ಬೆಂಗಳೂರಿಗೆ ರವಾನಿಸಿದ್ದರು. 71 ವರ್ಷದ ಮಹಿಳೆಯೊಬ್ಬರು ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಆ ದೂರನ್ನು ಆಧರಿಸಿದ ಪ್ರಾಥಮಿಕ ಮಾಹಿತಿ ವರದಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ, ಆರೋಪಿಯನ್ನು ಬಂಧಿಸಬೇಕು ಎಂಬ ಆಗ್ರಹ ತೀವ್ರಗೊಂಡಿತ್ತು. ಇದರಿಂದ ಭೀತಿಗೊಂಡ ಶಂಕರ್ ಮಿಶ್ರಾ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿ ಶಂಕರ್ ಮಿಶ್ರಾ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ಡ್ ಆಫ್ ಮಾಡಿದ್ದರೂ, ತನ್ನ ಗೆಳೆಯರೊಂದಿಗೆ ಸಂಪರ್ಕ ಸಾಧಿಸಲು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಬಳಸುತ್ತಿದ್ದ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆ ಹಚ್ಚಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

34 ವರ್ಷದ ಶಂಕರ್ ಮಿಶ್ರಾ, ಕನಿಷ್ಠ ಪಕ್ಷ ಒಂದು ಪ್ರದೇಶಗಳಲ್ಲಿ ತನ್ನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳೆರಡನ್ನೂ ಬಳಸಿದ್ದ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಉಪ ಆಯುಕ್ತ (ವಿಮಾನ ನಿಲ್ದಾಣ), ರವಿಕುಮಾರ್ ಸಿಂಗ್, "ಮೂತ್ರ ವಿಸರ್ಜನೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದಿಲ್ಲಿಗೆ ಕರೆ ತರಲಾಗಿದ್ದು, ಪ್ರಕರಣದ ಕುರಿತು ಮತ್ತಷ್ಟು ತನಿಖೆ ಪ್ರಗತಿಯಲ್ಲಿದೆ" ಎಂದು ತಿಳಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

"ಆರೋಪಿಯು ಸಂಜಯನಗರದಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿ ಉಳಿದುಕೊಂಡಿದ್ದ. ಬೆಂಗಳೂರು ನಗರ ಪೊಲೀಸರು ಆರೋಪಿಯನ್ನು ಬಂಧಿಸಲು ದಿಲ್ಲಿ ಪೊಲೀಸರಿಗೆ ನೆರವು ನೀಡಿದರು" ಎಂದು ಬೆಂಗಳೂರು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕಾಸರಗೋಡು: ಹೊಟೇಲ್ ನಿಂದ ಬಿರಿಯಾನಿ ಆರ್ಡರ್ ಮಾಡಿ ಸೇವಿಸಿದ್ದ ವಿದ್ಯಾರ್ಥಿನಿ ಅನಾರೋಗ್ಯಕ್ಕೀಡಾಗಿ ಸಾವು

share
Next Story
X