Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅಖಿಲ ಭಾರತ ವಿವಿ ಪುರುಷರ...

ಉಡುಪಿ: ಅಖಿಲ ಭಾರತ ವಿವಿ ಪುರುಷರ ವಾಲಿಬಾಲ್ ಪಂದ್ಯಾಟ: ಕಲ್ಲಿಕೋಟೆ, ಕುರುಕ್ಷೇತ್ರ,ಎಸ್‌ಆರ್‌ಎಂ ವಿವಿ ಸೆಮಿಫೈನಲ್ ಗೆ

7 Jan 2023 4:57 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಅಖಿಲ ಭಾರತ  ವಿವಿ ಪುರುಷರ ವಾಲಿಬಾಲ್ ಪಂದ್ಯಾಟ: ಕಲ್ಲಿಕೋಟೆ, ಕುರುಕ್ಷೇತ್ರ,ಎಸ್‌ಆರ್‌ಎಂ ವಿವಿ ಸೆಮಿಫೈನಲ್  ಗೆ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಜಂಟಿ ಆಶ್ರಯದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜು ಅಂಗಣದಲ್ಲಿ ನಡೆದಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಶನಿವಾರ ನಡೆದ ಕ್ವಾರ್ಟರ್ ಫೈನಲ್‌ನ ಮೂರು ಪಂದ್ಯಗಳು ನಿರೀಕ್ಷೆಯ ಫಲಿತಾಂಶ ನೀಡಿದ್ದು, ಹಾಲಿ ಚಾಂಪಿಯನ್ ಕಲ್ಲಿಕೋಟೆ ವಿವಿ, ರನ್ನರ್ ಅಪ್ ಹರಿಯಾಣದ ಕುರುಕ್ಷೇತ್ರ ವಿವಿ ಹಾಗೂ ಚೆನ್ನೈನ ಬಲಿಷ್ಠ ಎಸ್‌ಆರ್‌ಎಂ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ತಂಡಗಳು ನಾಳೆ ಸೆಮಿಫೈನಲ್‌ನಲ್ಲಿ ಆಡುವ ಅರ್ಹತೆ ಪಡೆದುಕೊಂಡವು.

ಈ ಮೂರು ತಂಡಗಳು ತಮ್ಮ ತಮ್ಮ ಗುಂಪಿನಲ್ಲಿ ಅಗ್ರಸ್ಥಾವನ್ನು ಪಡೆದಿದ್ದು, ಎದುರಾಳಿ ಎರಡನೇ ಸ್ಥಾನಿ ತಂಡಗಳನ್ನು ಸುಲಭವಾಗಿ ಹಿಮ್ಮೆಟ್ಟಿಸಿದವು. ದಿನದ ಕೊನೆಯ ಪಂದ್ಯದಲ್ಲಿ ಸಿ ಗುಂಪಿನ ಅಗ್ರಸ್ಥಾನಿ ಆತಿಥೇಯ ಮಂಗಳೂರು ವಿವಿ, ಚೆನ್ನೈನ ಮದ್ರಾಸು ವಿವಿಯನ್ನು ಎದುರಿಸಿ ಆಡುತ್ತಿದೆ.

ಡಿ ಗುಂಪಿನ ಅಗ್ರಸ್ಥಾನಿ ಕಲ್ಲಿಕೋಟೆ ವಿವಿ, ತನ್ನ ಎದುರಾಳಿ ಬಿ ಗುಂಪಿನ ದ್ವಿತೀಯ ಸ್ಥಾನಿ ವಾರಾಣಸಿಯ ಮಹಾತ್ಮಗಾಂಧಿ ಕಾಶಿ ವಿದ್ಯಾಪೀಠವನ್ನು 3-1ರ ಅಂತರದಿಂದ ಹಿಮ್ಮೆಟ್ಟಿಸಿತು. ಕಲ್ಲಿಕೋಟೆ ತಂಡ ಪಂದ್ಯವನ್ನು 25-18, 25-20, 23-25 ಹಾಗೂ 25-23ರ ಅಂತರದ ಜಯ ದಾಖಲಿಸಿತು.

ಮೊದಲೆರಡು ಸೆಟ್‌ಗಳನ್ನು ಕಲ್ಲಿಕೋಟೆ ವಿವಿ ಸುಲಭವಾಗಿ ಜಯಸಿತ್ತು. ಆದರೆ ಮೂರನೇ ಸೆಟ್‌ನಲ್ಲಿ ತೀವ್ರ ಪ್ರತಿರೋಧ ಒಡ್ಡಿದ ವಾರಾಣಸಿ ತಂಡ, 25-23ರ ಅಂತರದಿಂದ ಅದನ್ನು ಗೆದ್ದುಕೊಂಡಿತು. ನಾಲ್ಕನೇ ಸೆಟ್‌ನಲ್ಲೂ  ತೀವ್ರ ಪೈಪೋಟಿ ಕಂಡುಬಂದಿದ್ದು ಅಂತಿಮವಾಗಿ ಕೇರಳ ತಂಡ 25-23ರ ಅಂತರದಿಂದ ಅದನ್ನು ವಶಪಡಿಸಿಕೊಂಡು ಪ್ರಶಸ್ತಿ ಉಳಿಸಿಕೊಳ್ಳುವ ಅವಕಾಶ ವನ್ನು ಜೀವಂತವಿರಿಸಿತು.

ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಕಳೆದ ಬಾರಿಯ ರನ್ನರ್ ಅಪ್ ಕುರುಕ್ಷೇತ್ರ ವಿವಿ, ಇಂದು ಸಹ ಸಿ ಗುಂಪಿನ ರನ್ನರ್‌ಅಪ್ ಪುಣೆಯ ಭಾರತಿ ವಿದ್ಯಾಪೀಠವನ್ನು 3-0 ನೇರ ಸೆಟ್‌ಗಳಿಂದ ಹಿಮ್ಮೆಟ್ಟಿಸಿತು. ಕುರುಕ್ಷೇತ್ರ ಪಂದ್ಯವನ್ನು 25-23, 25-21, 25-14ರ ಅಂತರದಿಂದ ಏಕಪಕ್ಷೀಯ ರೀತಿಯಲ್ಲಿ ಗೆದ್ದುಕೊಂಡಿತು.

ದಿನದ ಮೂರನೇ ಕ್ವಾರ್ಟರ್ ಫೈನಲ್‌ನಲ್ಲಿ ದಕ್ಷಿಣ ವಲಯದ ಚಾಂಪಿಯನ್ ತಂಡವಾಗಿ ಇಲ್ಲಿಗೆ ಬಂದಿರುವ ಬಿ ಗುಂಪಿನ ಅಗ್ರಸ್ಥಾನಿ ಎಸ್‌ಆರ್‌ಎಂ ವಿವಿ, ಡಿ ಗುಂಪಿನ ಎರಡನೇ ಸ್ಥಾನಿ ತಂಡ ಔರಂಗಬಾದ್‌ನ ಡಾ.ಬಿ.ಎ.ಎಂ. ವಿವಿಯನ್ನು 3-0 ನೇರ ಸೆಟ್‌ಗಳಲ್ಲಿ ಸೋಲಿಸಿತು.

ಪಂದ್ಯದ ಎರಡನೇ ಸೆಟ್ ಅತ್ಯಂತ ರೋಚಕವಾಗಿತ್ತು. ಸೆಟ್‌ನ್ನು ವಶಪಡಿಸಿ ಕೊಳ್ಳಲು ಎರಡೂ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಿದವು. ಆದರೂ ಕೊನೆಗೂ ಸೆಟ್‌ನ್ನು 35-33ರಿಂದ ಚೆನ್ನೈ ತಂಡ, ಕ್ವಾರ್ಟರ್ ಫೈನಲ್‌ನ್ನು  25-17, 35-33, 25-14ರಿಂದ ಜಯಿಸಿ ಅಂತಿಮ ನಾಲ್ಕರ ಹಂತವನ್ನು ಪ್ರವೇಶಿಸಿತು.

ನಾಳೆ ಬೆಳಗ್ಗೆ ನಡೆಯುವ ಸೆಮಿಪೈನಲ್‌ನಲ್ಲಿ  ಕಲ್ಲಿಕೋಟೆ ವಿವಿ, ಕುರುಕ್ಷೇತ್ರ ವಿವಿಯನ್ನು ಎದುರಿಸಲಿದೆ. ಇದು ಕಳೆದ ಬಾರಿಯ ಫೈನಲ್‌ನ ಮರುಪಂದ್ಯ ವೆನಿಸಿಕೊಳ್ಳಲಿದೆ. ಎರಡನೇ ಸೆಮಿಫೈನಲ್‌ನಲ್ಲಿ ಎಸ್‌ಆರ್‌ಎಂ ವಿವಿ, ಮಂಗಳೂರು-ಮದ್ರಾಸು ವಿವಿ ಪಂದ್ಯದ ವಿಜೇತರನ್ನು ಎದುರಿಸಿ ಆಡಲಿದೆ.

ನಾಳೆ ಅಪರಾಹ್ನ 2:00ಗಂಟೆಗೆ ಸೆಮಿಫೈನಲ್‌ನಲ್ಲಿ ಸೋತವರ ನಡುವೆ ಮೂರನೇ ಸ್ಥಾನಕ್ಕೆ ಸೆಣಸಾಟ ನಡೆದರೆ, ವಿಜಯಿ ತಂಡಗಳು ಸಂಜೆ 4:00 ಗಂಟೆಗೆ ಚಾಂಪಿಯನ್ ವಿವಿ ಪ್ರಶಸ್ತಿಗಾಗಿ ಫೈನಲ್‌ನಲ್ಲಿ ಹೋರಾಡಲಿವೆ. ಪಂದ್ಯದ ಮುಗಿದ ಬಳಿಕ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X