Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಿತ್ಯ ಸಮ್ಮೇಳನ ಮಳಿಗೆಗಳಲ್ಲಿ ತಗ್ಗಿದ...

ಸಾಹಿತ್ಯ ಸಮ್ಮೇಳನ ಮಳಿಗೆಗಳಲ್ಲಿ ತಗ್ಗಿದ ದಲಿತ, ಬಂಡಾಯ ಸಾಹಿತ್ಯ!

ಯೋಗೇಶ್ ಮಲ್ಲೂರುಯೋಗೇಶ್ ಮಲ್ಲೂರು8 Jan 2023 12:01 AM IST
share
ಸಾಹಿತ್ಯ ಸಮ್ಮೇಳನ ಮಳಿಗೆಗಳಲ್ಲಿ ತಗ್ಗಿದ ದಲಿತ, ಬಂಡಾಯ ಸಾಹಿತ್ಯ!

ಹಾವೇರಿ: ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಭಾಗಗಳಲ್ಲಿ ದಲಿತ, ಮುಸ್ಲಿಮ್ ಸಮುದಾಯಗಳು ಹೆಚ್ಚಾಗಿರುವ ಹಿನ್ನೆಲೆ ಸಮ್ಮೇಳನದಲ್ಲಿ ದಲಿತ, ಬಂಡಾಯ ಸಾಹಿತ್ಯದ ಪುಸ್ತಕಗಳಿಗೆ ಬೇಡಿಕೆ ಇದೆ. ಆದರೆ, ಶೇ.10ರಷ್ಟು ಮಾತ್ರ ಪ್ರಗತಿಪರ ಪ್ರಕಾಶಕರ ಮಳಿಗೆಗಳು ಸ್ಥಾಪಿತಗೊಂಡಿದ್ದರಿಂದ ಸಾಹಿತ್ಯಾಸಕ್ತರು ನಿರಾಸೆ ಅನುಭವಿಸುವಂತಾಗಿದೆ. 

ಸಮ್ಮೇಳನದಲ್ಲಿ ಸ್ಥಾಪಿತಗೊಂಡಿದ್ದ ಸುಮಾರು 150ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳಲ್ಲಿ ಕೇವಲ 10ರಿಂದ 15 ಪ್ರಗತಿಪರ ವಿಚಾರಧಾರೆಗಳ ಪುಸ್ತಕ ಮಳಿಗೆಗಳು ಕಂಡುಬಂದವು. ಲಂಕೇಶ್, ಸಿದ್ದಲಿಂಗಯ್ಯ, ದೇವನೂರು ಮಹಾದೇವ, ಬರಗೂರು ರಾಮಚಂದ್ರಪ್ಪ, ಡಿ.ಆರ್.ನಾಗರಾಜ್, ಚಂಪಾ, ಬಂಜಗೆರೆ ಜಯಪ್ರಕಾಶ್ ಸೇರಿದಂತೆ ಹಲವು ದಲಿತ, ಬಂಡಾಯ ಸಾಹಿತಿಗಳ ಪುಸ್ತಕಗಳಿಗೆ ಬೇಡಿಕೆ ಇದ್ದರೂ ಬೆರಳೆಣಿಕೆಯಷ್ಟಿದ್ದವು. ಇದಿಷ್ಟೇ ಅಲ್ಲದೆ, ಮುಸ್ಲಿಮ್ ಸಾಹಿತಿಗಳಾದ ನಿಸ್ಸಾರ್ ಅಹಮ್ಮದ್, ಸಾರಾ ಅಬೂಬಕರ್, ರಂಜಾನ್ ದರ್ಗಾ, ರಹಮತ್ ತರೀಕೆರೆ, ಇಸ್ಮಾಯಿಲ್, ಡಾ.ಕೆ.ಶರೀಫಾ, ಅಬ್ದುಲ್ ರಶೀದ್ ಸೇರಿದಂತೆ ಹಲವರ ಪುಸ್ತಕಗಳೂ ವಿರಳವಾಗಿದ್ದು, ಬಹುತೇಕ ಮಳಿಗೆಗಳಲ್ಲಿ ಬಲಪಂಥೀಯ ಸಾಹಿತಿಗಳ ಕೃತಿಗಳೇ ರಾರಾಜಿಸಿದ್ದರು. 

ಆ್ಯಪ್ ಮೂಲಕ ನೋಂದಣಿ ಎಂಬ ಕಸಾಪದ ಹೊಸ ನಿಯಮ ಹಾಗೂ ತಳ ಸಮುದಾಯ ಕಡೆಗಣಿಸಿರುವ ತಾರತಮ್ಯ ನೀತಿಯಿಂದಲೇ ಪ್ರಗತಿಪರ ಪ್ರಕಾಶಕರು ಈ ಬಾರಿಯ ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಹಲವರಲ್ಲಿ ಕೇಳಿಬಂದವು. ಇನ್ನು ಮಳಿಗೆಗಳತ್ತ ಪರಿಷತ್ತಿನ ಯಾವೊಬ್ಬ ಪ್ರತಿನಿಧಿಯೂ ಸುಳಿಯದಿರುವುದರಿಂದ ಮಳಿಗೆಗಳಲ್ಲಿ ಬಿದ್ದಿರುವ ಕಸದ ವಿಲೇವಾರಿಗೆ ಕ್ರಮ ಜರುಗಿಸಿಲ್ಲ.

ಮಳಿಗೆಗಳ ಮುಂದೆ ಕಸವನ್ನು ಗುಡ್ಡೆ ಹಾಕಿಕೊಂಡೇ ಪುಸ್ತಕ ಪ್ರೇಮಿಗಳನ್ನು ಆಹ್ವಾನಿಸುವಂತಾಗಿತ್ತು. ಕೊನೆಗೆ ಮಳಿಗೆಗಳ ಮಾಲಕರೆ ಕಸವನ್ನು ಹೊರಹಾಕುವ ದುಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಪ್ರಕಾಶಕರು ಪ್ರತಿಕ್ರಿಯಿಸಿ ಸಮ್ಮೇಳನದ ಸಂಘಟಕರು ಪುಸ್ತಕ ಮಾರಾಟಗಾರರಿಗೆ ಬೇಕಾದ ಅಗತ್ಯತೆಗಳ ಕುರಿತು ಕೇಳುತ್ತಿಲ್ಲ. ಪ್ರತಿಸಲವೂ ಒಂದಲ್ಲ, ಒಂದು ಸಮಸ್ಯೆಯನ್ನು ಪ್ರಕಾಶಕರು ಅನುಭವಿಸುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಭಾಷೆಯ ಬಗ್ಗೆ ಆಸಕ್ತಿ ಇರುವವರು ಅಧ್ಯಕ್ಷರಾದರೆ ಸೂಕ್ತ: ಹೊಸದಾಗಿ ತಯಾರಿ ಮಾಡಿರುವ ಪರಿಷತ್ತಿನ ಆಪ್ ಅನ್ನು ಸರಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಅಧ್ಯಕ್ಷರ ನಡವಳಿಕೆಗೆ ಬೇಸತ್ತಿರುವ ಬಹುತೇಕ ಪುಸ್ತಕ ಮಾರಾಟಗಾರರು ಬಂದಿಲ್ಲ. ಕನ್ನಡ ಭಾಷೆ, ಪುಸ್ತಕ ಮತ್ತು ಪ್ರಕಾಶನದ ಬಗ್ಗೆ ಆಸಕ್ತಿ ಇರುವವರು ಕಸಾಪ ಅಧ್ಯಕ್ಷರಾಗಬೇಕೇ ಹೊರತು ಕೆಎಎಸ್, ಐಎಎಸ್ ಅಧಿಕಾರಿಗಳಲ್ಲ. ಜೋಶಿಯವರು ಕನ್ನಡ, ಕನ್ನಡ ಎನ್ನುತ್ತಾರೆ. ಇಲ್ಲಿನ ಮಳಿಗೆಗಳಿಗೆ ಕ್ರಮಾಂಕ ಕೊಡುವಾಗ ಎ, ಬಿ, ಸಿ, ಡಿ ಅಂತ ನೀಡಿದ್ದಾರೆ. ಅದನ್ನೇ ಅ, ಆ, ಇ, ಈ ಅಂತ ಕೊಡಬಹುದಿತ್ತು.

-ರವಿಚಂದ್ರ ರಾವ್ ಸಾಧನ ಪ್ರಕಾಶನ ಬೆಂಗಳೂರು.

ಬಿಸಿಲ ಧಗೆ: ಹಾವೇರಿನಲ್ಲಿ ಬಿಸಿಲ ಧಗೆ ಹೆಚ್ಚಾಗಿಯೇ ಕಂಡು ಬಂದಿತು. ಇದರಿಂದ ಮಧ್ಯಾಹ್ನದ ವೇಳೆಗೆ ಪೆಂಡಾಲ್‍ಗಳಲ್ಲಿ ಕೂರಲು ಜನ ಪರದಾಟ ನಡೆಸಿದರು. ಧೂಳು ಎದ್ದೇಳದಂತೆ ಹಸಿರು ಕಾರ್ಪೇಟ್ ಹಾಸಿರುವುದರಿಂದ ಧೂಳಿನ ಸಮಸ್ಯೆ ತಲೆದೋರಲಿಲ್ಲ ಎನ್ನುವುದು ಖುಷಿಯ ಸಂಗತಿ. 

share
ಯೋಗೇಶ್ ಮಲ್ಲೂರು
ಯೋಗೇಶ್ ಮಲ್ಲೂರು
Next Story
X