Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಸಿಬ್ಬಂದಿಗೆ ಕಿರುಕುಳ: ಇಬ್ಬರು...

ವಿಮಾನ ಸಿಬ್ಬಂದಿಗೆ ಕಿರುಕುಳ: ಇಬ್ಬರು ವಿದೇಶಿ ಪ್ರಯಾಣಿಕರಿಗೆ ಗೇಟ್‌ಪಾಸ್

8 Jan 2023 7:59 AM IST
share
ವಿಮಾನ ಸಿಬ್ಬಂದಿಗೆ ಕಿರುಕುಳ: ಇಬ್ಬರು ವಿದೇಶಿ ಪ್ರಯಾಣಿಕರಿಗೆ ಗೇಟ್‌ಪಾಸ್

ಪಣಜಿ: ಚಲಿಸುತ್ತಿದ್ದ ವಿಮಾನದಲ್ಲಿ ಯಾನಿಗಳ ದುರ್ನಡತೆ ಘಟನೆ ವರದಿಯಾದ ಬೆನ್ನಲ್ಲೇ, ಗೋವಾದ ಮೋಪಾದಲ್ಲಿ ಹೊಸದಾಗಿ ಉದ್ಘಾಟನೆಗೊಂಡಿರುವ ಮನೋಹರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಥಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಗೋವಾ- ಮುಂಬೈ ವಿಮಾನದಲ್ಲಿ ಇಬ್ಬರು ವಿದೇಶಿ ಪುರುಷ ಪ್ರಯಾಣಿಕರು ವಿಮಾನ ಸಿಬ್ಬಂದಿಗೆ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ.

ಈ ಇಬ್ಬರು ವಿದೇಶಿ ಪ್ರಯಾಣಿಕರ ರಾಷ್ಟ್ರೀಯತೆಯನ್ನು ವಿಮಾನಯಾನ ಸಂಸ್ಥೆ ಬಹಿರಂಗಪಡಿಸಿಲ್ಲ. ಹೊಸ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭಿಸಿದ ಮರುದಿನವೇ ಇಬ್ಬರು ವಿದೇಶಿ ಪ್ರಯಾಣಿಕರು ಗೋ ಫಸ್ಟ್ ವಿಮಾನ ಜಿ8 372ನಲ್ಲಿ ಶುಕ್ರವಾರ ಸಂಜೆ ವಿಮಾನ ಸಹಾಯಕಿಯರ ಜತಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಸಿಐಎಸ್‌ಎಫ್‌ಗೆ ನೀಡಿರುವ ದೂರಿನ ಪ್ರಕಾರ, ವಿದೇಶಿ ಪ್ರಯಾಣಿಕರಲ್ಲೊಬ್ಬ, ವಿಮಾನ ಸಹಾಯಕಿಯನ್ನು ತನ್ನ ಜತೆ ಕುಳಿತುಕೊಳ್ಳುವಂತೆ ಒತ್ತಾಯಪಡಿಸಿದ್ದ. ಇಬ್ಬರು ವಿದೇಶಿ ಪ್ರಯಾಣಿಕರನ್ನು ವಿಮಾನದಿಂದ ಕೆಳಕ್ಕೆ ಇಳಿಸಿ ಸಿಐಎಸ್‌ಎಫ್ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ. ವಿಮಾನಯಾನ ಸಂಸ್ಥೆ ತಕ್ಷಣವೇ ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರಗೆ ದೂರು ನೀಡಿದೆ.

"ಜಿ8 382 ವಿಮಾನದಲ್ಲಿ ಹಲವು ಮಂದಿ ವಿದೇಶಿಯರು ಇದ್ದರು. ವಿಮಾನ ಏರಿದ ತಕ್ಷಣವೇ ಅವರು ಅಶ್ಲೀಲ ಮಾತುಗಳನ್ನು ಆಡುತ್ತಿದ್ದರು. ಅದರ ತೀವ್ರತೆ ಹೆಚ್ಚುತ್ತಾ ಹೋಯಿತು. ಇವರು ಅಶ್ಲೀಲ ಪದಗಳನ್ನು ಬಳಸುತ್ತಿದ್ದ ಬಗ್ಗೆ ಸಹ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದರು" ಎಂದು ವಿಮಾನಯಾನ ಸಂಸ್ಥೆ ಅಧಿಕಾರಿ ಹೇಳಿದ್ದಾರೆ. ಇವರ ಕಿರಿ ಕಿರಿ ಸಹಿಸಲಾಗದೇ ಸಹ ಪ್ರಯಾಣಿಕರು ಇವರನ್ನು ಕೆಳಕ್ಕೆ ಇಳಿಸುವಂತೆ ಆಗ್ರಹಿಸಿದರು. ಸುರಕ್ಷತೆಯ ಹಿತದೃಷ್ಟಿಯಿಂದ ಇಬ್ಬರನ್ನೂ ಕೆಳಕ್ಕೆ ಇಳಿಸಲಾಯಿತು. ಈ ಬಗ್ಗೆ ಸಹ ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು ಎಂದು ವಿವರಿಸಿದ್ದಾರೆ.

share
Next Story
X