Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಕಾಕಂಬಿ ರಫ್ತು’ ಮುಂಬೈ ಮೂಲದ ಕಂಪೆನಿಗೆ...

‘ಕಾಕಂಬಿ ರಫ್ತು’ ಮುಂಬೈ ಮೂಲದ ಕಂಪೆನಿಗೆ ಕಾನೂನುಬಾಹಿರ ರಹದಾರಿ ಪತ್ರ ನೀಡಿಕೆ: ಆರೋಪ

ಜಿ.ಮಹಾಂತೇಶ್ಜಿ.ಮಹಾಂತೇಶ್9 Jan 2023 8:52 AM IST
share
‘ಕಾಕಂಬಿ ರಫ್ತು’ ಮುಂಬೈ ಮೂಲದ ಕಂಪೆನಿಗೆ ಕಾನೂನುಬಾಹಿರ ರಹದಾರಿ ಪತ್ರ ನೀಡಿಕೆ: ಆರೋಪ

ಬೆಂಗಳೂರು: ಕರ್ನಾಟಕದ ಸಕ್ಕರೆ ಕಾರ್ಖಾನೆಗಳಲ್ಲಿರುವ 2 ಲಕ್ಷ ಮೆಟ್ರಿಕ್ ಟನ್ ಕಾಕಂಬಿಯನ್ನು ಎತ್ತುವಳಿ ಮಾಡಿ ರಫ್ತು ಮಾಡಲು ಮುಂಬೈ ಮೂಲದ ಕೆ.ಎನ್.ರಿಸೋರ್ಸ್ ಪ್ರೈ.ಲಿಮಿಟೆಡ್‌ಗೆ ಅನುಮೋದನೆ ನೀಡಿರುವುದರ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಪುತ್ರನ ಹೆಸರು ಕೇಳಿ ಬಂದಿರುವ ಬೆನ್ನಲ್ಲೇ ಇದೀಗ ಉತ್ತರ ಕನ್ನಡ ಜಿಲ್ಲಾಧಿಕಾರಿ ಹೊರಡಿಸಿದ್ದ ಅಧಿಸೂಚನೆ ಉಲ್ಲಂಘಿಸಿ ಕೆ.ಎನ್.ರಿಸೋರ್ಸ್ ಕಂಪೆನಿಗೆ ಬೆಳಗಾವಿ ಉಪ ಆಯುಕ್ತರು ಗೋವಾ ಮಾರ್ಗದ ರಹದಾರಿ ಪತ್ರ ನೀಡಿರುವುದು ಬಹಿರಂಗವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ರಾಮನಗರ-ಅನಮೋಡ್ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ಹರೀಶ್‌ಕುಮಾರ್ ಅವರು (ಅಧಿಸೂಚನೆ ಸಂಖ್ಯೆ: ಡಿ.ಸಿ.ಬಿ./ಎಂ.ಎ.ಜಿ-1/ಸಿ.ಆರ್-9/2018-19 ದಿನಾಂಕ 07-11-2020) ರಂದು ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ವಿರುದ್ಧವಾಗಿ ಬೆಳಗಾವಿ ಉಪ ಆಯುಕ್ತರು ಕೆ.ಎನ್.ರಿಸೋರ್ಸ್ ಪ್ರೈವೈಟ್ ಲಿಮಿಟೆಡ್‌ಗೆ ರಹದಾರಿ ಪತ್ರ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಪ್ರತಿ ''the-file.in''ಗೆ ಲಭ್ಯವಾಗಿದೆ.

ಎಂ-2 ಲೈಸೆನ್ಸ್ ಇಲ್ಲದಿದ್ದರೂ ನಿಯಮಬಾಹಿರವಾಗಿ 2 ಲಕ್ಷ ಮೆಟ್ರಿಕ್ ಟನ್ ಕಾಕಂಬಿಯನ್ನು ಎತ್ತುವಳಿ ಮಾಡಲು ಅನುಮೋದನೆ ನೀಡಿರುವುದು ಚರ್ಚೆಗೆ ಗ್ರಾಸವಾಗಿರುವ ಹೊತ್ತಿನಲ್ಲೇ ಧಾರವಾಡ-ಅಂಕೋಲಾ-ಕಾರವಾರ ಮೂಲಕ ಗೋವಾಕ್ಕೆ ಸಂಚರಿಸಲು ಅಬಕಾರಿ ಇಲಾಖೆಯ ಬೆಳಗಾವಿ ಉಪ ಆಯುಕ್ತರು ಕಾನೂನುಬಾಹಿರವಾಗಿ ರಹದಾರಿ ಪತ್ರ ನೀಡಿದ್ದಾರೆ ಎಂಬ ಗುರುತರವಾದ ಆರೋಪಗಳು ವಿರುದ್ಧ ಕೇಳಿ ಬಂದಿವೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶದಲ್ಲೇನಿದೆ?:

ಅಗತ್ಯ ಸಾಮಗ್ರಿಗಳಾದ ಹಾಲು, ಆಹಾರ ಪದಾರ್ಥ, ಆಹಾರ ವರ್ಧಕ, ಬಾಕ್ಸೆಟ್, ಮ್ಯಾಂಗನೀಸ್, ಕಬ್ಬಿಣದ ಅದಿರು ಮುಂತಾದ ಖನಿಜಗಳ ರಫ್ತು, ಪೆಟ್ರೋಲಿಯಂ ಪದಾರ್ಥಗಳು, ಕಟ್ಟಡ ಮತ್ತು ಇತರ ನಿರ್ಮಾಣ ಸಾಮಗ್ರಿಗಳನ್ನು ಉತ್ತರ ಕರ್ನಾಟಕದಿಂದ ರಸ್ತೆ ಮಾರ್ಗದಲ್ಲಿ ಧಾರವಾಡ-ಅಂಕೋಲಾ-ಕಾರವಾರ ಮೂಲಕ ಗೋವಾಕ್ಕೆ ಟ್ರಕ್‌ಗಳ ಮೂಲಕ ಸಾಗಣೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿತ್ತು. ಇದಕ್ಕೆ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರು ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳ ಒಪ್ಪಿಗೆಯೂ ಇತ್ತು ಎಂಬುದು ಆದೇಶದಿಂದ ತಿಳಿದು ಬಂದಿದೆ.

ಈ ಆದೇಶ 2022ರವರೆಗೂ ಚಾಲ್ತಿಯಲ್ಲಿದೆ. ಈಗಲೂ ಆದೇಶ ವನ್ನು ಹಿಂಪಡೆದುಕೊಂಡಿಲ್ಲ ಎಂದು ಗೊತ್ತಾಗಿದೆ. ಆದರೆ, ಕೆ.ಎನ್.ರಿಸೋರ್ಸ್ ಕಂಪೆನಿಗೆ ಕಾಕಂಬಿ ರಫ್ತು ಮಾಡಲು ಅನುಮೋದನೆ ದೊರೆತ ಕೆಲವೇ ಕೆಲವು ದಿನಗಳಲ್ಲಿ ಇದೇ ಕಂಪೆನಿಗೆ 2022ರ ಡಿಸೆಂಬರ್ 23ರಂದು ರಹದಾರಿ ಪತ್ರವನ್ನು ಅಬಕಾರಿ ಇಲಾಖೆಯು ನೀಡಿದೆ. ಈ ರಹದಾರಿ ಪತ್ರವೂ ''the-file.in''ಗೆ ಲಭ್ಯವಾಗಿದೆ.

ಕೆ.ಎನ್.ರಿಸೋರ್ಸ್ ಕಂಪೆನಿಯು ಲೈಲಾ ಶುಗರ್ಸ್‌ನಲ್ಲಿರುವ 5,000 ಮೆಟ್ರಿಕ್ ಟನ್ ಕಾಕಂಬಿಯನ್ನು ರಸ್ತೆ ಮಾರ್ಗದ ಮೂಲಕ 2023ರ ಜನವರಿ 21ರವರೆಗೆ ರಫ್ತು ಮಾಡಲು 2022ರ ಡಿಸೆಂಬರ್ 23ರಂದು ರಹದಾರಿ ಪತ್ರ ನೀಡಿರುವುದು ಗೊತ್ತಾಗಿದೆ.

‘ರಸ್ತೆ ಸಂಚಾರವನ್ನೇ ನಿರ್ಬಂಧಿಸಿದ್ದರೂ ಕೆ.ಎನ್. ರಿಸೋರ್ಸ್ ಪ್ರೈ.ಲಿಮಿಟೆಡ್‌ಗಾಗಿಯೇ ಉತ್ತರ ಕನ್ನಡ ಜಿಲ್ಲಾಧಿಕಾರಿ ಹೊರಡಿಸಿದ್ದ ಅಧಿಸೂಚನೆ ಉಲ್ಲಂಘಿಸಿ ರಹದಾರಿ ಪತ್ರ ನೀಡಿರುವ ಅಬಕಾರಿ ಇಲಾಖೆಯು ಕಾನೂನುಬಾಹಿರ ಕೃತ್ಯ ಎಸಗಿದೆ. ರಹದಾರಿ ಪತ್ರ ನೀಡಲು ಕಾರಣವೇನು, ವಾಹನಗಳ ಸಂಚಾರಕ್ಕೆ ನಿರ್ಬಂಧಿಸಲಾಗಿರುವ ರಸ್ತೆಯಲ್ಲಿ 12 ಮತ್ತು 14 ಚಕ್ರಗಳ ಬೃಹತ್ ಟ್ರಕ್ ಕರ್ನಾಟಕದಿಂದ ಗೋವಾಕ್ಕೆ ಕಾಕಂಬಿ ಸಾಗಣೆ ಮಾಡಲು ರಹದಾರಿ ನೀಡಿರುವುದರ ಹಿಂದೆ ಇರಬಹುದಾದ ಪ್ರಭಾವಿಗಳ್ಯಾರು,’ ಎಂದು ಪ್ರಶ್ನಿಸುತ್ತಾರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿಗೆ ದೂರು ನೀಡಿರುವ ‘ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ’ಯ ರಾಜ್ಯಾಧ್ಯಕ್ಷ ಬಿ.ಎಸ್.ಮಲ್ಲಿಕಾರ್ಜುನ್.

ಗೋವಾ ಸರಕಾರಕ್ಕೆ ಒಂದು ಟನ್ ಕಾಕಂಬಿಗೆ 300 ರೂ. ತೆರಿಗೆಯೊಂದಿಗೆ ರಫ್ತು ಮಾಡಬೇಕು ಎಂಬ ಷರತ್ತು ಇದೆ. ಆದರೆ ಕೆ.ಎನ್. ರಿಸೋರ್ಸ್ ಕಂಪೆನಿಯು ಒಂದು ಟನ್ ಟನ್ ಕಾಕಂಬಿಗೆ ಕೇವಲ 20 ರೂ. ಮಾರಾಟ ಬೆಲೆ ತೋರಿಸಿ ಮಾರಾಟ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಗೋವಾ ಸರಕಾರದಿಂದಲೂ ಗೆಜೆಟ್ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಕಳೆದ 15 ವರ್ಷಗಳಿಂದಲೂ ಚಾಲ್ತಿಯಲ್ಲಿದ್ದ ಕಾನೂನನ್ನೇ ಬುಡಮೇಲು ಮಾಡಲಾಗಿದೆ ಎಂಬ ಆರೋಪಗಳೂ ಕೇಳಿ ಬಂದಿವೆ.

 ಕರ್ನಾಟಕ ರಾಜ್ಯದ ಕಾಕಂಬಿ ಗೋವಾಕ್ಕೆ ರವಾನೆ ಮಾಡುವ ನೆಪದಲ್ಲಿ ಗೋವಾದ ಅಧಿಸೂಚನೆ ದಾಖಲೆ ತೋರಿಸಿ ಸರಕಾರಕ್ಕೆ ಕೇವಲ 4 ಲಕ್ಷ ಮಾತ್ರ ಸುಂಕ ಪಾವತಿಸಲಿದೆ. ಗೋವಾ ಸರಕಾರವೂ ಸಹ ಈ ಕಂಪೆನಿಗೆ ಪೂರಕವಾಗಿಯೇ ಕಾರ್ಯನಿರ್ವಹಿಸಿರುವುದಕ್ಕೆ ಇದೊಂದು ಉತ್ತಮ ನಿದರ್ಶನ. 300 ರೂ.ಗಳ ತೆರಿಗೆ ಪ್ರಕಾರ 6 ಕೋಟಿ ರೂ.ಗಳನ್ನು ಪಾವತಿಸಬೇಕಿತ್ತು. ಆದರೆ ಈ ಕಂಪೆನಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಕೇವಲ 4 ಲಕ್ಷ ರೂ.ಮಾತ್ರ ತೆರಿಗೆ ಪಾವತಿಸಲು ಅನುಕೂಲ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ’ಎಂದು ಬಿ ಎಸ್ ಮಲ್ಲಿಕಾರ್ಜುನ್ ಅವರು ವಿವರಿಸುತ್ತಾರೆ.

 ಎಂ-2 ಲೈಸೆನ್ಸ್ ಇಲ್ಲದಿದ್ದರೂ ನಿಯಮ ಉಲ್ಲಂಘಿಸಿ ಮುಂಬೈ ಮೂಲದ ಕೆ.ಎನ್. ರಿಸೋರ್ಸ್ ಪ್ರೈವೈಟ್ ಲಿಮಿಟೆಡ್‌ಗೆ 2 ಲಕ್ಷ ಮೆಟ್ರಿಕ್ ಟನ್ ಕಾಕಂಬಿ ರಫ್ತು ಮಾಡಲು ಅನುಮತಿ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿ ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಕೆಯಾಗಿದೆ. ಪ್ರಧಾನಿ ಕಚೇರಿ ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರು ಈ ಕುರಿತು ವಿಚಾರಣೆ ನಡೆಸಬೇಕು ಎಂದು ಸಂಬಂಧಿಸಿದ ಇಲಾಖೆಗೆ ದೂರನ್ನು ರವಾನಿಸಿದ್ದಾರೆ ಎಂದು ಗೊತ್ತಾಗಿದೆ.

2 ಲಕ್ಷ ಮೆಟ್ರಿಕ್ ಟನ್ ಕಾಕಂಬಿಯನ್ನು ಎತ್ತುವಳಿ ಮಾಡಲು ಅನುಮೋದನೆ ನೀಡುವ ಕಡತವೇ ತಮ್ಮ ಬಳಿ ಬಂದಿಲ್ಲ ಎಂದು ಸಚಿವ ಕೆ.ಗೋಪಾಲಯ್ಯ ಅವರು ಹೇಳಿಕೆ ನೀಡಿದ್ದರು. ಈ ಹೇಳಿಕೆ ಹೊರಬಿದ್ದ ಕೆಲವೇ ದಿನಗಳಲ್ಲಿ ಈ ಕಡತಕ್ಕೆ ಅನುಮೋದನೆಯನ್ನೂ ನೀಡಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X