Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಎಂ ಬೊಮ್ಮಾಯಿ ಉದ್ಘಾಟಿಸಿದ ಒಂದೇ...

ಸಿಎಂ ಬೊಮ್ಮಾಯಿ ಉದ್ಘಾಟಿಸಿದ ಒಂದೇ ತಿಂಗಳಲ್ಲಿ ಬಿರುಕು ಬಿಟ್ಟ ರ‍್ಯಾಪಿಡ್‌ ರಸ್ತೆ

ಬಿಬಿಎಂಪಿಯನ್ನು ಸರಿದಾರಿಗೆ ತರಲು ಯಾರಿಂದಲೂ ಸಾಧ್ಯವಿಲ್ಲ ಎಂದ ನೆಟ್ಟಿಗರು

9 Jan 2023 12:43 PM IST
share
ಸಿಎಂ ಬೊಮ್ಮಾಯಿ ಉದ್ಘಾಟಿಸಿದ ಒಂದೇ ತಿಂಗಳಲ್ಲಿ ಬಿರುಕು ಬಿಟ್ಟ ರ‍್ಯಾಪಿಡ್‌ ರಸ್ತೆ
ಬಿಬಿಎಂಪಿಯನ್ನು ಸರಿದಾರಿಗೆ ತರಲು ಯಾರಿಂದಲೂ ಸಾಧ್ಯವಿಲ್ಲ ಎಂದ ನೆಟ್ಟಿಗರು

ಬೆಂಗಳೂರು, ಜ.9: ‘ರ‍್ಯಾಪಿಡ್‌ ರೋಡ್ ವರ್ಕ್’ ತಂತ್ರಜ್ಞಾನ ಬಳಸಿ ನಿರ್ಮಿಸಿರುವ 375 ಮೀಟರ್ ಉದ್ದದ ರಸ್ತೆಯನ್ನು ಒಂದು ತಿಂಗಳ ಹಿಂದೆ ಇಂದಿರಾನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದ್ದು, ಇದೀಗ ರಸ್ತೆ ನಿರ್ಮಾಣಗೊಂಡ ಒಂದೇ ತಿಂಗಳಲ್ಲಿ ಬಿರುಕು ಬಿಟ್ಟಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತ್ತೀಚೆಗೆ ಹಳೆ ಮದ್ರಾಸ್ ರಸ್ತೆಯಲ್ಲಿ ರ‍್ಯಾಪಿಡ್‌ ರೋಡ್ ಟೆಕ್ನಾಲಜಿ ಬಳಸಿಕೊಂಡು ರಸ್ತೆ ನಿರ್ಮಾಣವನ್ನು ಕೈಗೆತ್ತಿಕೊಂಡಿತ್ತು. 40 ವರ್ಷ ಬಾಳಿಕೆ ಬರಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ 30 ದಿನಗಳಿಗಿಂತ ಕಡಿಮೆ ಅವಧಿಯಲ್ಲೇ ರಸ್ತೆ ಬಿರುಕು ಬಿಟ್ಟಿದೆ. 

ಡಿಸೆಂಬರ್ 8ರಂದು ರ‍್ಯಾಪಿಡ್‌ ರಸ್ತೆಗಳ ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ''ಈ ತಂತ್ರಜ್ಞಾನವನ್ನು ಇತರೆಡೆ ಬಳಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು." ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ತಿಳಿಸಿದ್ದರು. 

ಬಿಬಿಎಂಪಿ ವಿರುದ್ಧ ಆಕ್ರೋಶ : ಬಿಬಿಎಂಪಿ ಕಾರ್ಮಿಕರೊಬ್ಬರು ಕಾಂಕ್ರೀಟ್ ಬ್ಲಾಕ್‌ಗಳ ನಡುವಿನ ಬಿರುಕನ್ನು ಟಾರ್‌ನಿಂದ ತುಂಬುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್ ಆಗಿದ್ದು, ಐದಾರು ಕಾಂಕ್ರೀಟ್ ಬ್ಲಾಕ್‌ಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಕೆಲ ವಾಹನ ಸವಾರರು  ರಸ್ತೆಯ ಕಳಪೆ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ನಿರ್ಮಾಣಕ್ಕೆ ಹೊಸ ತಂತ್ರಜ್ಞಾನ ಅಳವಡಿಸುವ ಮುನ್ನ ಬಿಬಿಎಂಪಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

'ಬಿಬಿಎಂಪಿಯನ್ನು ಸರಿದಾರಿಗೆ ತರಲು ಯಾರಿಂದಲೂ ಸಾಧ್ಯವಿಲ್ಲ ಎನಿಸುತ್ತದೆ. ಈ ಸಂಸ್ಥೆಯ ಕಾರ್ಯವೈಖರಿಯನ್ನು ನೋಡಿದರೆ ದಿಗಿಲಾಗುತ್ತದೆ. ಬೆಂಗಳೂರಿನ ಮುಖ್ಯ ರಸ್ತೆಗಳಲ್ಲಿ ಅಂಬ್ಯುಲೆನ್ಸ್ ಯಾವಾಗಲೂ ಇರಬೇಕಾಗಿದೆ'. ಎಂದು ಟ್ವಿಟರ್ ಲಕ್ಷ್ಮೀಶ ಎಂಬವರು ಪ್ರತಿಕ್ರಿಯಿಸಿದ್ದಾರೆ.

'ಇದು ರಾಜ್ಯಲ್ಲಿರುವ ಶೇ.40 ಸರ್ಕಾರದ ಲಕ್ಷಣ' ಎಂದು ನೆಟ್ಟಿಗರೊಬ್ಬರು ಟ್ವಟರ್ ನಲ್ಲಿ ಬರೆದುಕೊಂಡಿದ್ದಾರೆ. 

ಬಿಬಿಎಂಪಿಯನ್ನು ಸರಿದಾರಿಗೆ ತರಲು ಯಾರಿಂದಲೂ ಸಾಧ್ಯವಿಲ್ಲ ಎನಿಸುತ್ತದೆ. ಈ ಸಂಸ್ಥೆಯ ಕಾರ್ಯವೈಖರಿಯನ್ನು ನೋಡಿದರೆ ದಿಗಿಲಾಗುತ್ತದೆ. ಬೆಂಗಳೂರಿನ ಮುಖ್ಗರಸ್ತೆಗಳಲ್ಲಿ ಅಂಬ್ಯುಲೆನ್ಸ್ ಯಾವಾಗಲೂ ಇರಬೇಕಾಗಿದೆ. #prajavani 'Rapid road' develops cracks within 30 days in Bengaluru https://t.co/NSejAMJzpI via @timesofindia

— CSLakshmeesha (@LakshmeeshaCS) January 9, 2023
-

Everything happened rapidly
That's why this is a rapid road project

— Akkey (@Akkey117) January 8, 2023

Sure Signs of BJP Karnataka 40% Govt !!!
Bengaluru: Cracks appear on 'rapid road' in Indiranagar https://t.co/l7A91QeQ2w @deccanherald

— Kraantiveer (@Kraantiveer) January 9, 2023

ರ‍್ಯಾಪಿಡ್‌ ರಸ್ತೆಗಳ ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಈ ತಂತ್ರಜ್ಞಾನವನ್ನು ಇತರೆಡೆ ಬಳಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ : @BSBommai
2/2

— CM of Karnataka (@CMofKarnataka) December 8, 2022

This 'Rapid road Technology' project in Bengaluru has developed cracks within 30 days of its inauguration by CM @BSBommai. Now you know why Karnataka BJP President @nalinkateel wanted you to concentrate on 'Love Jihad' and NOT on 'small issues' like Roads, Potholes & sewage. pic.twitter.com/v2GCVFuoG6

— Mohammed Zubair (@zoo_bear) January 8, 2023
share
Next Story
X