Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತರನ್ನು 'ದಲ್ಲಾಳಿಗಳು' ಎಂದು...

ಪತ್ರಕರ್ತರನ್ನು 'ದಲ್ಲಾಳಿಗಳು' ಎಂದು ಕರೆದ SP ಮಾಧ್ಯಮ ವಿಭಾಗ: ಪಕ್ಷದ ನಾಯಕನನ್ನು ಬಂಧಿಸಿದ ಉತ್ತರಪ್ರದೇಶ ಪೊಲೀಸರು

9 Jan 2023 4:45 PM IST
share
ಪತ್ರಕರ್ತರನ್ನು ದಲ್ಲಾಳಿಗಳು ಎಂದು ಕರೆದ SP ಮಾಧ್ಯಮ ವಿಭಾಗ: ಪಕ್ಷದ ನಾಯಕನನ್ನು ಬಂಧಿಸಿದ ಉತ್ತರಪ್ರದೇಶ ಪೊಲೀಸರು

ಲಕ್ನೊ: ಎಸ್‌ಪಿ (SP) ಮಾಧ್ಯಮ ವಿಭಾಗ ಮಾಡಿದ್ದ ಕೆಲವು ಆಕ್ಷೇಪಾರ್ಹ ಟ್ವೀಟ್‌ಗಳ ಹಿಂದೆ ಎಸ್‌ಪಿ ನಾಯಕ ಮನೀಶ್ ಜಗನ್ ಅಗರ್‌ವಾಲ್ (Manish Jagan Agrawal) ಇದ್ದಾರೆ ಎಂದು ಬಿಜೆಪಿಯ ಯುವ ಘಟಕವಾದ ಭಾರತೀಯ ಯುವ ಜನ ಮೋರ್ಚಾದ ಸಾಮಾಜಿಕ ಮಾಧ್ಯಮಗಳ ಮುಖ್ಯಸ್ಥೆ ರಿಚಾ ರಜಪೂತ್ ನೀಡಿದ್ದ ದೂರನ್ನು ಆಧರಿಸಿ, ಉತ್ತರ ಪ್ರದೇಶ ಪೊಲೀಸರು ಅವರನ್ನು ರವಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು Indian Express, "ನನ್ನ ಮೇಲೆ ಅತ್ಯಾಚಾರವೆಸಗಿ, ನನ್ನ ಚಾರಿತ್ರ್ಯ ಹರಣ ಮಾಡಲಾಗುತ್ತದೆ ಎಂದು ಬೆದರಿಕೆ ಒಡ್ಡಲಾಗಿದ್ದು, ನನ್ನ ಜೀವಕ್ಕೆ ಅಪಾಯವಿದೆ" ಎಂದು ರಿಚಾ ರಜಪೂತ್ ತಮ್ಮ ದೂರಿನಲ್ಲಿ ಆಪಾದಿಸಿದ್ದಾರೆ ಎಂದು ವರದಿ ಮಾಡಿದೆ.  ಗಮನಾರ್ಹ ಸಂಗತಿಯೆಂದರೆ, ಸಮಾಜವಾದಿ ಪಕ್ಷದ ಸಂಸದರೊಬ್ಬರ ವಿರುದ್ಧ ಆಕ್ಷೇಪಾರ್ಹ ಪದ ಬಳಿಸಿದ ಕಾರಣಕ್ಕೆ ಅದೇ ದಿನದಂದು ರಿಚಾ ರಜಪೂತ್ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಾಗಿದೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಲಕ್ನೊ ಪೊಲೀಸ್ ಆಯುಕ್ತ ಎಸ್.ಬಿ.ಶಿರಾಡ್ಕರ್, ಕಳೆದ 10-12 ದಿನಗಳಿಂದ ತನಿಖೆ ಕೈಗೊಂಡ ನಂತರ ಮನೀಶ್ ಜಗನ್ ಅಗರ್‌ವಾಲ್‌ರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

"ನಾವು ಇನ್ನಿತರ ಆಕ್ಷೇಪಾರ್ಹ ಪೋಸ್ಟ್‌ಗಳಲ್ಲಿ ಆತ ಹೊಂದಿರುವ ನಿರ್ದಿಷ್ಟ ಪಾತ್ರದ ಕುರಿತ ತನಿಖೆ ಇನ್ನೂ ಪ್ರಗತಿಯಲ್ಲಿದೆ" ಎಂದು ತಿಳಿಸಿರುವ ಅವರು, ಸಮಾಜವಾದಿ ಪಕ್ಷದ ಮಾಧ್ಯಮ ಟ್ವಿಟರ್ ಖಾತೆಯೊಂದಿಗೆ ಆತ ಹೊಂದಿರುವ ಸಂಪರ್ಕದ ಕುರಿತೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ" ಎಂದು ಹೇಳಿದ್ದಾರೆ.

ಮನೀಶ್ ಜಗನ್ ಅಗರ್‌ವಾಲ್ ಅನ್ನು ಭಾರತೀಯ ದಂಡ ಸಂಹಿತೆ 153A, 153B, 295A, 298, 420, 500, 501, 504, 505(2) ಮತ್ತು 506 ಸೆಕ್ಷನ್‌ ಅಲ್ಲದೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ 66, 67, 67a ಮತ್ತು 66b ಸೆಕ್ಷನ್‌ಗಳಡಿ ಬಂಧಿಸಲಾಗಿದೆ ಎಂದು ಲಕ್ನೊ ಪೊಲೀಸ್ ಆಯುಕ್ತರ ಕಚೇರಿ ಮಾಡಿರುವ ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಈ ಹಿಂದೆ ಕೂಡಾ ಸಮಾಜವಾದಿ ಪಕ್ಷದ ಮಾಧ್ಯಮ ವಿಭಾಗದ ವಿರುದ್ಧ ಪ್ರಾಥಮಿಕ ಮಾಹಿತಿ ವರದಿಗಳು ದಾಖಲಾಗಿದ್ದವು. ಯೋಗಿ ಆದಿತ್ಯನಾಥರ ಮಾಧ್ಯಮ ಸಲಹೆಗಾರರೊಂದಿಗಿರುವ ನನ್ನ ಭಾವಚಿತ್ರವನ್ನು ಹಂಚಿಕೊಂಡಿದ್ದಕ್ಕೆ, ನನ್ನನ್ನು ಸಮಾಜವಾದಿ ಪಕ್ಷದ ಮಾಧ್ಯಮ ವಿಭಾಗ "ತಲೆಹಿಡುಕ" ಮತ್ತು "ದಲ್ಲಾಳಿ" ಎಂದು ಟೀಕಿಸಿದೆ ಎಂಬ  ಪತ್ರಕರ್ತರೊಬ್ಬರ ಆರೋಪವನ್ನು ಡಿಸೆಂಬರ್‌ನಲ್ಲಿ Newslaundry ವರದಿ ಮಾಡಿತ್ತು.

ಇದನ್ನೂ ಓದಿ: ರಾಜ್ಯ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ

share
Next Story
X