ಕುಂದಾಪುರ: ಕೊಡ್ಲಾಡಿ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ

ಕುಂದಾಪುರ: ತಾಲೂಕಿನ ಬಾಂಡ್ಯಾ ಕೊಡ್ಲಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ, ಕರ್ಕುಂಜೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಾಂಡ್ಯಾ ಸುಧಾಕರ ಶೆಟ್ಟಿ 1 ಲಕ್ಷ ರೂ. ನಗದನ್ನು ದೇಣಿಗೆಯಾಗಿ ಮಂಗಳವಾರ ಶಾಲೆಗೆ ಹಸ್ತಾಂತರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಶೆಟ್ಟಿ ಅವರಿಗೆ ಧನ ಸಹಾಯವನ್ನು ಹಸ್ತಾಂತರಿಸಿ ಮಾತನಾಡಿದ ಬಾಂಡ್ಯಾ ಸುಧಾಕರ ಶೆಟ್ಟಿ, ಭೌತಿಕವಾಗಿ ಶೈಕ್ಷಣಿಕವಾಗಿ ಪ್ರಗತಿ ಹೊಂದುತ್ತಾ ಗುಣಾತ್ಮಕ ಶಿಕ್ಷಣ ನೀಡುತ್ತಿರುವ ನಮ್ಮೂರ ಶಾಲೆ ಆಕರ್ಷಣೆಯ ಕೇಂದ್ರವಾಗಲಿ ಹಾರೈಸಿದರು.
ಗುರುಕುಲ ಪಬ್ಲಿಕ್ ಸ್ಕೂಲ್ನ ಜಂಟಿ ಕಾರ್ಯ ನಿರ್ವಹಕರಾದ ಬಾಂಡ್ಯ ಸುಭಾಷ್ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್.ಶೆಟ್ಟಿ ಶುಭ ಹಾರೈಸಿದರು. ಎಸ್ಡಿಎಂಸಿ ಅಧ್ಯಕ್ಷ ರತ್ನಾಕರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಮಡಿವಾಳ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ದೇವದಾಸ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಸಂತೋಷ್ ಕುಮಾರ ಶೆಟ್ಟಿ ಸ್ವಾಗತಿಸಿ, ವಂದಿಸಿದರು.
Next Story





