Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಬೊಮ್ಮಾಯಿ ಅವರಿಂದ ನಾರಾಯಣಗುರು ನಿಗಮದ...

‘ಬೊಮ್ಮಾಯಿ ಅವರಿಂದ ನಾರಾಯಣಗುರು ನಿಗಮದ ಭರವಸೆ ಮಾತ್ರ’: ಘೋಷಣೆಯಾಗಿದ್ದರೆ ಜಿಓ ತೋರಿಸಲಿ; ಪ್ರಣವಾನಂದ ಸ್ವಾಮೀಜಿ ಸವಾಲು

ಸಚಿವರು ಸ್ವಾಭಿಮಾನಿ ಆಗಿದ್ದರೆ ರಾಜಿನಾಮೆ ನೀಡಿ ಪಾದಯಾತ್ರೆಗೆ ಬರಲಿ

10 Jan 2023 8:43 PM IST
share
‘ಬೊಮ್ಮಾಯಿ ಅವರಿಂದ ನಾರಾಯಣಗುರು ನಿಗಮದ ಭರವಸೆ ಮಾತ್ರ’: ಘೋಷಣೆಯಾಗಿದ್ದರೆ ಜಿಓ ತೋರಿಸಲಿ; ಪ್ರಣವಾನಂದ ಸ್ವಾಮೀಜಿ ಸವಾಲು
ಸಚಿವರು ಸ್ವಾಭಿಮಾನಿ ಆಗಿದ್ದರೆ ರಾಜಿನಾಮೆ ನೀಡಿ ಪಾದಯಾತ್ರೆಗೆ ಬರಲಿ

ಬ್ರಹ್ಮಾವರ: ಮುಖ್ಯಮಂತ್ರಿಗಳು ಜ.5ರಂದು ನಾರಾಯಣಗುರು ನಿಗಮವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ. ಇದು ಕೇವಲ ಭರವಸೆ ಮಾತ್ರ. ಈ ಹಿಂದೆ ಕೂಡಾ ಮುಖ್ಯಮಂತ್ರಿಗಳಾಗಿದ್ದವರು ಇಂಥ ಸಾಕಷ್ಟು ಭರವಸೆಗಳನ್ನು ನೀಡಿದ್ದಾರೆ. ಯಾವುದೂ ಈವರೆಗೆ ಜಾರಿಗೊಂಡಿಲ್ಲ. ಒಂದು ವೇಳೆ ಈ ಬಾರಿ ನಿಗಮವನ್ನು ಘೋಷಣೆ ಮಾಡಿದ್ದರೆ ಅದರ ಸರಕಾರಿ ಆದೇಶವನ್ನು (ಜಿಓ) ತೋರಿಸಿ ಎಂದು ಕರದಾಳುವಿನ ಶ್ರೀನಾರಾಯಣ ಗುರುಶಕ್ತಿ ಪೀಠಾಧಿಪತಿ ಡಾ.ಪ್ರಣವಾನಂದ ಸ್ವಾಮೀಜಿ ಸಚಿವ ಸುನಿಲ್‌ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.

ಮಂಗಳೂರಿನಿಂದ ಹೊರಟ ಸ್ವಾಮೀಜಿ ನೇತೃತ್ವದ ಪಾದಯಾತ್ರೆ ಮಂಗಳವಾರ ಬೆಳಗ್ಗೆ ಬ್ರಹ್ಮಾವರದ  ನಾರಾಯಣಗುರು  ಸಭಾಭವನಕ್ಕೆ ಆಗಮಿಸಿದ್ದು, ಇಲ್ಲಿನ ಬಿಲ್ಲವರ ಸೇವಾ ಸಂಘದಲ್ಲಿ ನೆರೆದವರನ್ನುದ್ದೇಶಿಸಿ ಮಾತನಾಡಿ ಪಾದಯಾತ್ರೆಯ ಅನಿವಾರ್ಯತೆ ಬಗ್ಗೆ ವಿವರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತಿದ್ದರು. ಒಂದು ವೇಳೆ ನಿಗಮ ಘೋಷಣೆ ಮಾಡಿದ್ದರೆ, ಅದನ್ನು ನಾವು ಖಂಡಿತ ಸ್ವಾಗತಿಸುತ್ತೇವೆ ಎಂದರು.

ತಮ್ಮ ಪಾದಯಾತ್ರೆ ಕೇವಲ ನಿಗಮ ಸ್ಥಾಪನೆಗೆ ಸಂಬಂಧಿಸಿದ್ದಲ್ಲ. ಇಲ್ಲಿ 10 ಅಂಶಗಳ ಬೇಡಿಕೆಯನ್ನಿಟ್ಟುಕೊಂಡು ಅವುಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಾದಯಾತ್ರೆ ಕೈಗೊಂಡಿದ್ದೇವೆ. ಹೀಗಾಗಿ ನಿಗಮವೊಂದನ್ನು ಒಪ್ಪಿದ್ದೇವೆಂದು ಸಚಿವರು ಹೇಳಿದಾಕ್ಷಣ ಪಾದಯಾತ್ರೆ ನಿಲ್ಲುವುದಿಲ್ಲ ಎಂದವರು ಸ್ಪಷ್ಟಪಡಿಸಿದರು.

ಸಚಿವ ಸುನಿಲ್‌ಕುಮಾರ್ ಸಹಿತ ಇಡೀ ಸರಕಾರ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ದಯವಿಟ್ಟು ನಮ್ಮ ಸಮುದಾಯದ ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಹಿಂದೆ ಹಲವು ಬಾರಿ, ಹಲವರಿಂದ ನಾವು ಭರವಸೆಯನ್ನು ಪಡೆದಿದ್ದೇವೆ. ಅವ್ಯಾವುದೂ ಈಡೇರಿಲ್ಲ ಎಂದು ಪ್ರಣವಾನಂದ ಸ್ವಾಮೀಜಿ ಗುಡುಗಿದರು.

ತಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳು ಕಿವಿ ಮೇಲೆ ಹಾಕಿಕೊಳ್ಳದೇ ಇರುವುದರಿಂದ, ಸಚಿವ ಸಂಪುಟದಲ್ಲಿರುವ ಸುನಿಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ನಿಜವಾಗಿ ಸ್ವಾಭಿಮಾನ ಇದ್ದರೆ, ಸಮುದಾಯದ ಬಗ್ಗೆ ನಿಜವಾದ ಕಳಕಳಿ ಇದ್ದರೆ ಸಚಿವ ಪದವಿಗೆ ರಾಜಿನಾಮೆ ನೀಡಿ ಪಾದಯಾತ್ರೆಯಲ್ಲಿ ತಮ್ಮೊಂದಿಗೆ ಸೇರಿಕೊಳ್ಳಿ ಎಂದು ಅವರು ಸವಾಲೆಸೆದರು. 

ನಿಗಮದ ಸ್ಥಾಪನೆಯೂ ಸೇರಿದಂತೆ ಪ್ರಮುಖ ಹತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಮ್ಮ ಪಾದಯಾತ್ರೆ ರಾಜ್ಯದ ಹಲವು ಜಿಲ್ಲೆಗಳ ಮೂಲಕ ಮುಂದುವರಿದು ಫೆ.14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೊನೆಗೊಳ್ಳುವುದು ಶತ:ಸಿದ್ಧ. ಫೆ.14ರಿಂದ ತಮ್ಮ ಅಮರಣಾಂತ ಉಪವಾಸ ಸತ್ಯಾಗ್ರಹವೂ ನಡೆಯುವುದು ಎಂದು ಅವರು ಸ್ಪಷ್ಟಪಡಿಸಿದರು. 

share
Next Story
X