Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಟೇಶ್ವರದಲ್ಲಿ ಅಗ್ನಿ ಅನಾಹುತ: ಎರಡು...

ಕೋಟೇಶ್ವರದಲ್ಲಿ ಅಗ್ನಿ ಅನಾಹುತ: ಎರಡು ಅಂಗಡಿ ಸಂಪೂರ್ಣ ಭಸ್ಮ, 3 ಲಕ್ಷ ನಗದು ಸಹಿತ ಕೋಟಿಗೂ ಮಿಕ್ಕಿ ನಷ್ಟ

10 Jan 2023 9:03 PM IST
share
ಕೋಟೇಶ್ವರದಲ್ಲಿ ಅಗ್ನಿ ಅನಾಹುತ: ಎರಡು ಅಂಗಡಿ ಸಂಪೂರ್ಣ ಭಸ್ಮ, 3 ಲಕ್ಷ ನಗದು ಸಹಿತ ಕೋಟಿಗೂ ಮಿಕ್ಕಿ ನಷ್ಟ

ಕೋಟೇಶ್ವರದಲ್ಲಿ ಅಗ್ನಿ ಅನಾಹುತ: ಎರಡು ಅಂಗಡಿ ಸಂಪೂರ್ಣ ಭಸ್ಮ; ರೂ. 3 ಲಕ್ಷ ನಗದು ಸಹಿತ ಅಪಾರ ನಷ್ಟ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿರಾಮಚಂದ್ರ ದೇವವಸ್ಥಾನ ಬಳಿ ಮಂಗಳವಾರ ಸಂಭವಿಸಿದ ಬೆಂಕಿ ಅವಗಢದಲ್ಲಿ ಲಕ್ಷಾಂತರ ಮೌಲ್ಯದ ಎರಡು ಫ್ಯಾನ್ಸಿ ಸ್ಟೋರ್ ಟೋಟಲ್ ಲಾಸ್ ಅಗಿದ್ದು, ಬಟ್ಟೆಯಂಗಡಿ, ವಾಸದ ಮನೆ ಭಾಗಶಹ ಸುಟ್ಟು ಹೋಗಿದೆ ಎಂದು ಮೂಲಗಳು ತಿಳಿಸಿವೆ.

ಕೋಟೇಶ್ವರ ಶಿವರಾಮ ಪೂಜಾರಿ ಎಂಬರಿಗೆ ಸೇರಿದ ವಾಣಿಜ್ಯ ಸಂಕೀರ್ಣದ ಕೆಳ ಅಂತಸ್ತಿನಲ್ಲಿ ಬಾಡಿಗೆ ಇದ್ದ ಸುಧಾಕರ ಜೋಗಿ ಎಂಬವರ ಮಹಾಲಕ್ಷ್ಮೀ ಕಂಗನ್ ಎರಡು ಶ್ಯಾಪ್, ಸುಧಾಕರ ಜೋಗಿ ಅಂಗಡಿ ತಾಗಿಕೊಂಡಿದ್ದ ರಾಜೀವ ಶೆಟ್ಟಿ ಎಂಬವರ ರೆಡಿಮೇಡ್ ಬಟ್ಟೆ ಹಾಗೂ ಟೈಲರಿಂಗ್ ಶ್ಯಾಪ್, ಶಿವರಾಮ ಪೂಜಾರಿ ವಾಸದ ಮನೆ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. 

ಸುಧಾಕರ ಜೋಗಿ ಎಂಬವರಿಗೆ ಸೇರಿದ ಫ್ಯಾನ್ಸಿ ಸೇರಿ ಇತರ ಪರಿಕರ ಸ್ಟಾಕ್ ಇಟ್ಟಿದ್ದು, ಬಾಗಿಲು ಹಾಕಿ ಊಟಕ್ಕೆ ಹೋದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ನೋಡಿದ ಸ್ಥಳೀಯರು ಸುಧಾಕರ ಜೋಗಿಗೆ ಮಾಹಿತಿ ನೀಡಿದ್ದಾರೆ. ಅಂಗಡಿ ಮಾಲೀಕರು ಬಂದು ಅಂಗಡಿ ಕೋಣೆ ಬಾಗಿಲು ತೆರೆಯುವಷ್ಟರಲ್ಲಿ ಬೆಂಕಿ ಎಲ್ಲವನ್ನೂ ಭಸ್ಮ ಮಾಡಿದೆ. ಫ್ಯಾನ್ಸಿ ಹಾಗೂ ಪ್ಲಾಸ್ಟಿಕ್ ಐಟಮ್ ಇದ್ದುದ್ದರಿಂದ ಬೆಂಕಿ ಕ್ಷಿಪ್ರಗತಿಯಲ್ಲಿ ಇಡೀ ಅಂಗಡಿ ಕೋಣೆ ಆವರಿಸಿ, ನೋಡು ನೀಡುತ್ತಿದ್ದಂತೆ ಎಲ್ಲವೂ ಭಸ್ಮವಾಗಿದೆ.  ವಿದ್ಯುತ್ ಶಾರ್ಟ್ ಸಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣ ಎನ್ನಲಾಗುತ್ತಿದೆ.

ಸುಧಾಕರ ಜೋಗಿ ಎಂಬವರ ಮಹಾಲಕ್ಷ್ಮೀ ಕಂಗನ್ ಸ್ಟೋರ್ ಎರಡು ಮಳಿಗೆ ತಾಗಿಕೊಂಡಿದ್ದು, ರಾಜೀವ ಶೆಟ್ಟಿ ಎಂಬವರಿಗೆ ಸೇರಿದ ರೆಡಿಮೇಡ್ ಬಟ್ಟೆ ಹಾಗೂ ಟೈಲರಿಂಗ್ ಅಂಗಡಿಗೂ ಬೆಂಕಿ ವಿಸ್ತಿರಿಸಿಕೊಂಡಿದೆ. ಅಂಗಡಿ ಮಾಲೀಕರು ಊಟಕ್ಕೆ ಹೋದ ಸಮಯದಲ್ಲೇ ಬೆಂಕಿ ಬಿದ್ದಿದ್ದು, ಅಂಗಡಿಯಲ್ಲಿದ್ದ ಬಟ್ಟೆ ಬಟ್ಟೆಹೊಲಿಯವ ಯಂತ್ರ ಎಲ್ಲವೂ ಸುಟ್ಟು ಕರಕಲಾಗಿದೆ. ಅಂಗಡಿ ಮೇಲ್ಬಾಗದಲ್ಲಿರುವ ಶಿವರಾಮ ಪೂಜಾರಿ ವಾಸದ ಮನೆ ನೆಲ ಹಾಸು, ಶೆಟರ್, ಕಿಟಕಿ ಸುಟ್ಟು ಹೋಗಿದೆ. ಪ್ಯಾನ್ಸಿ ಸ್ಟೋರ್‌ನಲ್ಲಿದ್ದ 3 ಲಕ್ಷ ನಗದು ಹಾಗೂ ಸುಟ್ಟ ಪರಿಕರದ ಮೌಲ್ಯ 60 ಲಕ್ಷ ರೂ ಆಗಿದ್ದು, ಬಟ್ಟೆಯಂಗಡಿ ಮಾಲೀಕರಿಗೆ 3 ಲಕ್ಷ ಹಾಗೂ ವಾಸದ ಮನೆಗೆ 8 ಲಕ್ಷ ರೂ.ನಷ್ಟ ಸಂಭವಿಸಿದೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.  

ಮಧ್ಯಾಹ್ನ 2.30ಕ್ಕೆ ಸುಮಾರಿಗೆ ಬೆಂಕಿ ಕಾಣಿಸಿದ್ದು, ಪರಿಸರದ ನಾಗರಿಕರು ಅಗ್ನಶಾಮಕ ದಳ ಹಾಗೂ  ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಪರಿಸರವಾಸಿಗಳು ಹರಸಾಹಸದಿಂದ ಸಂಜೆ ಆರುಗಂಟೆ ಸಮಾರಿಗೆ ಅಗ್ನಿ ಹಿಡಿತಕ್ಕೆ ತರಲಾಯಿತು ಎಂದು ಮೂಲಗಳು ಮಾಹಿತಿ ನೀಡಿವೆ. 

share
Next Story
X