Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ, ಬೀದರ್ ನಲ್ಲಿ 5.5 ಡಿಗ್ರಿ ಕನಿಷ್ಠ ತಾಪಮಾನ ದಾಖಲು

10 Jan 2023 11:38 PM IST
share
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ, ಬೀದರ್ ನಲ್ಲಿ 5.5 ಡಿಗ್ರಿ ಕನಿಷ್ಠ ತಾಪಮಾನ ದಾಖಲು

ಬೆಂಗಳೂರು, ಜ.10: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ತಾಪಮಾನ ಕುಸಿಯುತ್ತಿರುವುದರಿಂದ ಮಕರ ಸಂಕ್ರಾಂತಿ ಹಬ್ಬದವರೆಗೂ ಚಳಿಯ ತೀವ್ರತೆ ಹೆಚ್ಚಾಗಿರಲಿದೆ.

ಹಗಲಿನಲ್ಲಿ ಸಾಕಷ್ಟು ಬಿಸಿಲು ಇದ್ದರೂ ಆಗಾಗ ತಂಪಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಸಂಜೆ ಹಾಗೂ ರಾತ್ರಿ ಸಮಯದಲ್ಲಿ ಚಳಿ ಹೆಚ್ಚಾಗಲಿದೆ. ಮುಂಜಾನೆ ಬಹಳಷ್ಟು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಸಹಜವಾಗಿದೆ. ಕೆಲವೆಡೆ ದಟ್ಟ ಮಂಜು ಕವಿಯಲಿದೆ. ಹಲವು ಕಡೆಗಳಲ್ಲಿ ಭಾಗಶಃ ಮೋಡ ಕವಿಯಲಿದೆ. ಹೀಗಾಗಿ ರಾಜ್ಯದಲ್ಲಿ ಕನಿಷ್ಠ ತಾಪಮಾನ ಸರಾಸರಿ 12ರಿಂದ 16ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗುತ್ತಿದೆ. ಗರಿಷ್ಠ ತಾಪಮಾನವು 26ರಿಂದ 29 ಡಿಗ್ರಿ ಸೆಲ್ಸಿಯಸ್‌ವರೆಗೂ ದಾಖಲಾಗುತ್ತಿದೆ.

ರಾಜ್ಯದಲ್ಲಿ ಈ ಬಾರಿಯ ಮುಂಗಾರು ಹಾಗೂ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು, ವಾತಾವರಣದಲ್ಲಿ ತೇವಾಂಶವೂ ಆಧಿಕವಾಗಿದೆ. ಬಹಳಷ್ಟು ಕಡೆ ಬೆಳಗಿನ ಜಾವ ಸಾಕಷ್ಟು ಇಬ್ಬನಿಯೂ ಬೀಳುತ್ತಿದೆ.

ಕಳೆದ ಬಾರಿಯಂತೆ ಈ ಬಾರಿಯೂ ಡಿಸೆಂಬರ್‌ವರೆಗೂ ಮಳೆ ಮುಂದುವರಿದಿದೆ. ಇದರಿಂದಾಗಿ ಜನವರಿಯಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಮಕರ ಸಂಕ್ರಾಂತಿ ಹಬ್ಬದ ನಂತರ ಚಳಿಯ ಪ್ರಮಾಣ ಇಳಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಚಳಿಗಾಲ ನವೆಂಬರ್‌ನಿಂದ ಪ್ರಾರಂಭವಾಗಿ ಫೆಬ್ರವರಿಯ ವೇಳೆಗೆ ಮುಕ್ತಾಯವಾದರೂ, ಚಂಡ ಮಾರುತ, ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಗಳಿಂದಾಗಿ ಹಿಂಗಾರು ಮಳೆ ಡಿಸೆಂಬರ್‌ವರೆಗೂ ಮುಂದುವರಿದಿತ್ತು. ಅಲ್ಲದೆ, ಪದೇ ಪದೇ ನಿರಂತರ ಜಿಟಿ ಜಿಟಿ ಮಳೆಯಾಗುತ್ತಿತ್ತು. ಆ ಸಂದರ್ಭದಲ್ಲಿ ಮೈಕೊರೆಯುವ ಚಳಿಯ ತೀವ್ರತೆಯ ಅನುಭವ ಉಂಟಾಗಿತ್ತು.

ಸ್ವೆಟರ್, ರಗ್ಗಿನ ಮೊರೆ ಹೋದ ಜನರು: ಮಂಗಳವಾರ ಬೀದರ್‌ನಲ್ಲಿ ತಾಪಮಾನ ರಾಜ್ಯದಲ್ಲಿಯೇ ಅತಿ ಕನಿಷ್ಠ, 5.5 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ಉತ್ತರ ಒಳನಾಡು ಭಾಗದಲ್ಲಿ ವಿಪರೀತ ಚಳಿ ಮುಂದುವರಿದಿದೆ. ಇದರಿಂದ, ರಕ್ಷಣೆ ಪಡೆಯಲು ಜನರು ಸ್ವೆಟರ್, ರಗ್ಗಿನ ಮೊರೆ ಹೋಗಿದ್ದಾರೆ.

ಬೀದರ್‌ನಲ್ಲಿ 5.5 ಡಿಗ್ರಿ, ಬಾಗಲಕೋಟೆಯಲ್ಲಿ 6, ವಿಜಯಪುರದಲ್ಲಿ 6.5, ಬಳ್ಳಾರಿಯಲ್ಲಿ 7.2, ಧಾರವಾಡದಲ್ಲಿ 9.8, ಬೆಳಗಾವಿಯಲ್ಲಿ 10, ಕಲಬುರಗಿಯಲ್ಲಿ 11.4 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ. ಹೀಗಾಗಿ, ಬಿಸಿಲು ನಾಡು, ಬರಪೀಡಿತ ಜಿಲ್ಲೆಗಳು ಚಳಿಯಿಂದ ತರಗುಟ್ಟುತ್ತಿವೆ. ಮೋಡ, ಮಂಜು ಇಲ್ಲ. ಹೀಗಾಗಿ, ಭೂಮಿಯಿಂದ ತಂಪು ಆವಿಯಾಗಿ ಹೊರ ಹೋಗಿದೆ. ಇದು ವಿಪರೀತ ಚಳಿಯನ್ನು ಉಂಟು ಮಾಡಿದೆ ಎನ್ನುತ್ತಾರೆ ಹವಾಮಾನ ತಜ್ಞರು.

ಬೆಲೆಯಲ್ಲಿ ಹೆಚ್ಚಳ: ಗ್ರಾಮೀಣ ಪ್ರದೇಶದ ಜನರು ತಮ್ಮ ಮನೆ ಹಾಗೂ ಬಯಲು ಜಾಗದಲ್ಲಿ ಬೆಂಕಿ ಹಾಕಿಕೊಂಡು ಕಾಯಿಸುವ ದೃಶ್ಯ ಸಾಮಾನ್ಯವಾಗಿದೆ. ನಗರ ಪ್ರದೇಶಗಳಲ್ಲಿ ಜನ ಸ್ವೆಟರ್, ರಗ್ಗು ಹೊದ್ದುಕೊಂಡು, ರಾತ್ರಿ ಹೊತ್ತಿನಲ್ಲಿ ಮನೆಯ ಕಿಟಕಿ, ಬಾಗಿಲು ಭದ್ರಪಡಿಸಿಕೊಂಡು ಚಳಿಯಿಂದ ರಕ್ಷಣೆ ಪಡೆಯುತ್ತಿದ್ದಾರೆ. ಕಳೆದ 15 ದಿನಗಳ ಅವಧಿಯಲ್ಲಿ 400 ರೂ. ಇದ್ದ ಸ್ವೆಟರ್‌ವೊಂದರ ಬೆಲೆ ಕೆಲವೆಡೆ

800 ರೂ.ವರೆಗೆ ಏರಿಕೆಯಾಗಿದೆ. ರಗ್ಗೊಂದರ ಬೆಲೆ 600 ರೂ.ಗಳಿಂದ 1,200 ರೂ.ಗಳವರೆಗೆ ಏರಿಕೆಯಾಗಿದೆ.

share
Next Story
X