Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ED ಅಧಿಕಾರಿಗಳೇ ನನಗೇನಾದರೂ ಕೊಟ್ಟು...

ED ಅಧಿಕಾರಿಗಳೇ ನನಗೇನಾದರೂ ಕೊಟ್ಟು ಹೋಗಬೇಕಷ್ಟೇ..: ಈಡಿ ದಾಳಿ ಬಗ್ಗೆ ಸ್ಪಷ್ಟನೆ ನೀಡಿದ ಕಿಮ್ಮನೆ ರತ್ನಾಕರ್

11 Jan 2023 9:47 PM IST
share
ED ಅಧಿಕಾರಿಗಳೇ ನನಗೇನಾದರೂ ಕೊಟ್ಟು ಹೋಗಬೇಕಷ್ಟೇ..: ಈಡಿ ದಾಳಿ ಬಗ್ಗೆ ಸ್ಪಷ್ಟನೆ ನೀಡಿದ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ, ಜ.11: 'ನನ್ನ ಮನೆ ಮತ್ತು ಕಚೇರಿ ಮೇಲೆ ಯಾವುದೇ ರೀತಿಯ ಈಡಿ ದಾಳಿ ನಡೆದಿಲ್ಲ' ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.

ಈಡಿ ದಾಳಿ ಕುರಿತು ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿರುವ ಅವರು, ನಾನು ಬಾಡಿಗೆಗಿದ್ದ ಕಟ್ಟಡದ ಮೇಲೆ ಈಡಿ  ದಾಳಿ ನಡೆದಿದೆ. ಬೆಳಿಗ್ಗೆ ನಮ್ಮ ಕಚೇರಿಗೆ ಬಂದ ಈಡಿ ಅಧಿಕಾರಿಗಳು ನನ್ನನ್ನು ಕಚೇರಿಗೆ ಕರೆಯಿಸಿದ್ದರು. ಆಗ ನಾನು ಕಚೇರಿ ಬಾಡಿಗೆ ಪಡೆದಿರುವ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.

ಹಾಶಿಮ್ ಎಂಬುವರ ಕಟ್ಟಡವನ್ನು ಹತ್ತು ವರ್ಷಕ್ಕೆ ಲೀಸ್ ಪಡೆದಿದ್ದೇವೆ. ಜೊತೆಗೆ ಒಂದು ತಿಂಗಳಿಗೆ ಒಂದು ಸಾವಿರ ಬಾಡಿಗೆ ನೀಡುತಿದ್ದೇವೆ. ಹತ್ತು ಲಕ್ಷ ರೂಪಾಯಿ ವಾಪಸ್ ಕೊಟ್ಟ ದಿನವೇ ನಾವು ಕಟ್ಟಡ ಖಾಲಿ ಮಾಡುವುದಾಗಿ ಹೇಳಿದ್ದೇವೆ. ಹಾಶಿಮ್ ಮತ್ತು ನಮ್ಮ ನಡುವೆ ಇರುವುದು ಮಾಲಕ ಹಾಗೂ ಬಾಡಿಗೆದಾರ ಸಂಬಂಧವಷ್ಟೇ ಎಂದು ಹೇಳಿದ್ದಾರೆ.

'ಹಾಶಿಮ್‌ಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ಮನೆ ಮೇಲೆ ಈಡಿ ದಾಳಿಯಾದರೆ ಹತ್ತು ಸಾವಿರ ರೂಪಾಯಿಯೂ ಸಿಗುವುದಿಲ್ಲ. ಮನೆಯಲ್ಲಿರುವ ಸೋಫಾ ಹಾಗೂ ಫ್ರಿಡ್ಜ್‌ಗಳನ್ನೇನಾದರೂ ತೆಗೆದುಕೊಂಡು ಹೋಗಬೇಕಷ್ಟೇ. ಇಲ್ಲವೇ ಈಡಿಯವರೇ ನನಗೇನಾದರೂ ಕೊಟ್ಟು ಹೋಗಬೇಕು. ಹಾಶಿಮ್‌ಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೂ ಏನು ಸಂಬಂಧವೋ ಗೊತ್ತಿಲ್ಲ ಅವರನ್ನೇ ಕೇಳಬೇಕು' ಎಂದು ಹೇಳಿದ್ದಾರೆ.

ತೀರ್ಥಹಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸುವವರೇ ಆರಗ ಜ್ಞಾನೇಂದ್ರ. ಈ ಹಿಂದೆ ನಡೆದ ಕೋಮುಗಲಭೆಯಲ್ಲಿ ಆರಗ ಜ್ಞಾನೇಂದ್ರ ಅವರೇ ಆರೋಪಿಯಾಗಿದ್ದರು. ಈಗಲೂ ಕೋಮು ಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆಯೇ ಎಂಬ ಅನುಮಾನವಿದೆ. ಬಿಜೆಪಿ ಆಡಳಿತದಲ್ಲಿ ಮಾನ ಮರ್ಯಾದೆ ಎಲ್ಲವನ್ನೂ ಕಳೆದುಕೊಂಡಿದೆ. ಹೀಗಾಗಿ ಇದೀಗ ಜಾತಿ ಧರ್ಮದ ವಿಷಯದಲ್ಲಿ ಏನಾದರೂ ಸಿಗುತ್ತದೆಯಾ ಎಂದು ನೋಡುತಿದ್ದಾರೆ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
Next Story
X