Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ರಾಜಪಕ್ಸ ಸಹೋದರರಿಗೆ ಕೆನಡಾ ನಿರ್ಬಂಧ:...

​ರಾಜಪಕ್ಸ ಸಹೋದರರಿಗೆ ಕೆನಡಾ ನಿರ್ಬಂಧ: ಕಾರಣವೇನು ಗೊತ್ತೇ ?

11 Jan 2023 11:34 PM IST
share
​ರಾಜಪಕ್ಸ ಸಹೋದರರಿಗೆ ಕೆನಡಾ ನಿರ್ಬಂಧ: ಕಾರಣವೇನು ಗೊತ್ತೇ ?

ಒಟ್ಟಾವ, ಜ.11: ಶ್ರೀಲಂಕಾದಲ್ಲಿ ಅಂತರ್ಯುದ್ಧದ ಸಂದರ್ಭ ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಮಾಜಿ ಅಧ್ಯಕ್ಷರಾದ ಗೊತಬಯ ರಾಜಪಕ್ಸ ಮತ್ತು ಮಹಿಂದಾ ರಾಜಪಕ್ಸ ಸೇರಿದಂತೆ 4 ಸರಕಾರಿ ಅಧಿಕಾರಿಗಳಿಗೆ ಕೆನಡಾ ಮಂಗಳವಾರ ನಿರ್ಬಂಧ ವಿಧಿಸಿದೆ. ಈ ನಾಲ್ಕು ವ್ಯಕ್ತಿಗಳು ಶ್ರೀಲಂಕಾದಲ್ಲಿ 1983ರಿಂದ 2009ರವರೆಗೆ ಸಂಭವಿಸಿದ ಸಶಸ್ತ್ರ ಸಂಘರ್ಷದ ಸಮಯದಲ್ಲಿ ದೇಶದ ಅಲ್ಪಸಂಖ್ಯಾತ ತಮಿಳು ಜನಸಮುದಾಯವನ್ನು ಗುರಿಯಾಗಿಸಿ ನಡೆದಿದ್ದ ಮಾನವ ಹಕ್ಕುಗಳ ಸಮಗ್ರ ಮತ್ತು ವ್ಯವಸ್ಥಿತ ಉಲ್ಲಂಘನೆಗೆ ಜವಾಬ್ದಾರರು’ ಎಂದು ಕೆನಡಾದ ವಿದೇಶಾಂಗ ಸಚಿವಾಲಯದ ಹೇಳಿಕೆ ಉಲ್ಲೇಖಿಸಿದೆ. 

ಈ ನಿರ್ಬಂಧಗಳು ಶ್ರೀಲಂಕಾದಲ್ಲಿ ಸಮಗ್ರ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದವರಿಗೆ ಕೆನಡಾದಲ್ಲಿ ಶಿಕ್ಷೆಯಿಂದ ವಿನಾಯಿತಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ಹೇಳಿಕೆ ತಿಳಿಸಿದೆ. ಶ್ರೀಲಂಕಾ ಸೇನಾಪಡೆಯ ಉನ್ನತ ಅಧಿಕಾರಿಗಳಾದ ಸುನಿಲ್ ರತ್ನಾಯಕೆ ಮತ್ತು ಲೆಫ್ಟಿನೆಂಟ್ ಕಮಾಂಡರ್ ಚಂದನಪ್ರಸಾದ ಹೆಟಿಯರಚ್ಚಿ ನಿರ್ಬಂಧ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಶ್ರೀಲಂಕಾದ ಇತರ ಇಬ್ಬರಾಗಿದ್ದಾರೆ.

ಎಲ್ಟಿಟಿಇ ನೇತೃತ್ವದಲ್ಲಿ ನಡೆದಿದ್ದ ಪ್ರತ್ಯೇಕತಾವಾದಿ ಹೋರಾಟವನ್ನು 2009ರಲ್ಲಿ ಶ್ರೀಲಂಕಾದ ಸೇನೆ ಹತ್ತಿಕ್ಕಿದ್ದು ಈ ಸಂದರ್ಭ ಮಹಿಂದಾ ರಾಜಪಕ್ಸ ಅಧ್ಯಕ್ಷರಾಗಿದ್ದರು ಮತ್ತು ಅವರ ಸಹೋದರ ಗೊತಬಯ ರಾಜಪಕ್ಸ ರಕ್ಷಣಾ ಸಚಿವರಾಗಿದ್ದರು. ಪ್ರತ್ಯೇಕತಾವಾದಿ ಸಂಘರ್ಷವನ್ನು ಹತ್ತಿಕ್ಕುವ ಅಂತಿಮ ದಿನಗಳಲ್ಲಿ ಶ್ರೀಲಂಕಾ ಸೇನೆ ನಡೆಸಿದ್ದ ಭೀಕರ ಬಾಂಬ್ ದಾಳಿ ಮತ್ತು ತೆರವು ಕಾರ್ಯಾಚರಣೆಯಲ್ಲಿ ತಮಿಳು ಸಮುದಾಯದ ಸುಮಾರು 40,000 ಜನರ ಹತ್ಯೆಯಾಗಿತ್ತು ಎಂದು ಅಂತರಾಷ್ಟ್ರೀಯ ವೀಕ್ಷಕರು ವರದಿ ಮಾಡಿದ್ದರು. 

share
Next Story
X