Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿವೇಕ ನುಡಿಗಳು

ವಿವೇಕ ನುಡಿಗಳು

ಇಂದು ಸ್ವಾಮಿ ವಿವೇಕಾನಂದರ ಜನ್ಮದಿನ

12 Jan 2023 9:49 AM IST
share
ವಿವೇಕ ನುಡಿಗಳು
ಇಂದು ಸ್ವಾಮಿ ವಿವೇಕಾನಂದರ ಜನ್ಮದಿನ

ಜೀಸಸ್ ಬದುಕಿದ್ದ ದಿನಗಳಲ್ಲಿ ನಾನೇನಾದರೂ ಫೆಲೆಸ್ತೀನ್‌ನಲ್ಲಿದ್ದಿದ್ದರೆ ಕಣ್ಣೀರಿನಿಂದಲ್ಲ, ನನ್ನ ಹೃದಯದಿಂದ ರಕ್ತಬಸಿದು ಆತನ ಪಾದ ತೊಳೆಯುತ್ತಿದ್ದೆ.’’
(Complete Works of Swami Vivekananda)
***

’ಮುಸ್ಲಿಮರ ಮಧ್ಯೆ ಪರಿಪೂರ್ಣವಾದ ಸಮಾನತೆ ಹಾಗೂ ಭ್ರಾತೃತ್ವವನ್ನು ಮುಹಮ್ಮದ್ ಅವರು ತನ್ನ ಜೀವಿತಾವಧಿಯಲ್ಲಿ ತೋರಿಸಿಕೊಟ್ಟರು. ಜನಾಂಗ, ಜಾತಿ, ವಂಶ, ವರ್ಣ ಅಥವಾ ಲಿಂಗ ಭೇದದ ಪ್ರಶ್ನೆ ಅಲ್ಲಿರಲಿಲ್ಲ. ಆಫ್ರಿಕದ ಮಾರುಕಟ್ಟೆಯಿಂದ ಖರೀದಿಸಿ ತುರ್ಕಿಗೆ ಕರೆತಂದ ನೀಗ್ರೊ ಗುಲಾಮನೊಬ್ಬ ಮುಸ್ಲಿಮನಾದಲ್ಲಿ ಮತ್ತು ಸಾಕಷ್ಟು ಅರ್ಹತೆ ಹಾಗೂ ಸಾಮರ್ಥ್ಯಗಳನ್ನು ಹೊಂದಿದ್ದಲ್ಲಿ, ಆತ ಸುಲ್ತಾನ್‌ನ ಪುತ್ರಿಯನ್ನು ಕೂಡಾ ವಿವಾಹವಾಗಬಹುದಾಗಿದೆ. ಇದರೊಂದಿಗೆ, ಅಮೆರಿಕದಲ್ಲಿ ನೀಗ್ರೊಗಳನ್ನು ಮತ್ತು ಅಮೆರಿಕನ್ ಇಂಡಿಯನ್ನರನ್ನು ನಡೆಸಿಕೊಳುತ್ತಿರುವ ರೀತಿಯನ್ನು ಹೋಲಿಸಿಕೊಳ್ಳಿ!. ಆದರೆ, ಇಸ್ಲಾಮ್‌ನಲ್ಲಿ ಜನಾಂಗ ಹಾಗೂ ವರ್ಣಭೇದದಿಂದ ಹೊರತಾದ ಪರಿಪೂರ್ಣವಾದ ಸಮಾನತೆಯನ್ನು ನೀವು ಕಾಣುವಿರಿ.’’
(The Complete Works of Swami Vivekananda/Volume  4/)
***

ಸರಳ ಸುಲಭ ಬೋಧನೆಯೇ ಇಸ್ಲಾಮ್ ಧರ್ಮದ ವೈಶಿಷ್ಟ್ಯ. ಅರ್ಥವಾಗದ ತತ್ವ ಜ್ಞಾನದ ಸಿದ್ಧಾಂತಗಳ ಚರ್ಚೆ ಆ ಧರ್ಮದಲ್ಲಿ ಇಲ್ಲ. ಸಮತೆ ಎರಡನೇ ವೈಶಿಷ್ಟ್ಯ. ದೇವರೆದುರು ಎಲ್ಲರೂ ಸಮಾನರು, ದೇವರ ಮತ್ತು ಮಾನವರ ನಡುವೆ ಯಾವ ಪುರೋಹಿತರೂ ಅಲ್ಲಿಲ್ಲ.’’
(ಮಾರ್ಚ್ 25, 1900ರಲ್ಲಿ ಕ್ಯಾಲಿಫೋರ್ನಿಯದಲ್ಲಿ ಮುಹಮ್ಮದ್ ಪೈಗಂಬರ್ ಕುರಿತ ಉಪನ್ಯಾಸದಲ್ಲಿ)
***


ನನಗೆ ದೇಶದ ಬಗ್ಗೆ ಹುಸಿ ಅಭಿಮಾನವಿಲ್ಲ. ನಾನೆಷ್ಟು ಭಾರತೀಯನೋ ಅಷ್ಟೇ ಜಾಗತಿಕ. ನನ್ನ ಮೇಲೆ ಯಾವ ದೇಶದ ಹಕ್ಕೂ ಇಲ್ಲ. ನಾನು ಯಾವ ದೇಶದ ಗುಲಾಮನೂ ಅಲ್ಲ. ಶ್ರದ್ಧಾಹೀನ ನಾಸ್ತಿಕತೆ, ಮೂರ್ಖರಂತೆ ಏನೇನೋ ವಟಗುಟ್ಟಬೇಡಿ... ಕೇವಲ ಸುಶಿಕ್ಷಿತ ಹಿಂದೂಗಳಲ್ಲೇ ಗೋಚರಿಸುವ ಜಾತ್ಯಾನ್ಧ, ಧರ್ಮ ಭೋಳೆ, ನಿರ್ದಯ, ಡಾಂಭಿಕ, ನಾಸ್ತಿಕರಲ್ಲಿಯ ಒಬ್ಬ ಹೇಡಿಯಂತೆ ಬದುಕಲೆಂದು ನಾನು ಹುಟ್ಟಿ ಬರಲಿಲ್ಲ...’’ (1895-ಸೆಪ್ಟಂಬರ್ 5ರಂದು ಪ್ಯಾರಿಸ್‌ನಿಂದ ಅಳಸಿಂಗ ಪೆರುಮಾಳ್ ಅವರಿಗೆ ಬರೆದ ಪತ್ರದಲ್ಲಿ)
***

ಹಸಿದವರಿಗೆ ಅನ್ನ ನೀಡದೆ ಗೋವುಗಳಿಗೆ ಧಾನ್ಯದ ರಾಶಿಯನ್ನೇ ಸುರಿಯುತ್ತೀರಿ. ನನಗೆ ಅಂಥವರ ಬಗ್ಗೆ ಕಿಂಚಿತ್ತೂ ಸಹಾನುಭೂತಿಯಿಲ್ಲ. ಗೋವುಗಳು ಸಹ ಅವುಗಳ ಕರ್ಮದಿಂದಲೇ ಕಸಾಯಿಖಾನೆ ಸೇರಿ ಸಾಯುತ್ತವೆ ಎನ್ನಬಹುದಲ್ಲ’’
( ರಾಮಕೃಷ್ಣ ಮಠ ಪ್ರಕಟಿಸಿದ ‘ಸ್ವಾಮಿ ವಿವೇಕಾನಂದ ಗ್ರಂಥಾವಳಿ’ -10ನೇ ಸಂಪುಟ)
***

ನಮ್ಮ ಮಾತೃ ಭೂಮಿಯ ದೃಷ್ಟಿಯಿಂದ ವೇದದ ತತ್ವ ಜ್ಞಾನ ಮತ್ತು ಇಸ್ಲಾಮಿನ ಸಮತೆಯ ಸಮನ್ವಯವೇ ಏಕೈಕ ಆಶಾ ಸ್ಥಾನವಾಗಿದೆ’’
(ವಿವೇಕಾನಂದರು ಜೂನ್ 10, 1898ರಲ್ಲಿ ಅಲ್ಮೊರಾದಿಂದ ಶಿಷ್ಯ ಮಹಮದಾನಂದನಿಗೆ ಬರೆದ ಪತ್ರ-ಮುಹಮ್ಮದ್ ಸರ್ಫರಾಝ್ ಎಂಬವರು ವಿವೇಕಾನಂದರ ಶಿಷ್ಯರಾಗಿದ್ದರು. ಅವರಿಗೆ ವಿವೇಕಾನಂದರು ಮಹಮದಾನಂದ ಎಂದು ಹೆಸರು ನೀಡಿದ್ದರು)
***

ಹೇ ಬ್ರಾಹ್ಮಣರೇ, ವಂಶಪಾರಂಪರ್ಯದ ಕಾರಣದಿಂದ ಬ್ರಾಹ್ಮಣರಿಗೆ ಅಸ್ಪೃಶ್ಯರಿಗಿಂತ ಹೆಚ್ಚು ಶೈಕ್ಷಣಿಕ ಯೋಗ್ಯತೆಯಿದ್ದರೆ ಅಸ್ಪೃಶ್ಯರ ಶಿಕ್ಷಣಕ್ಕೆ ನಿಮ್ಮೆಲ್ಲ ಹಣವನ್ನೂ ಖರ್ಚು ಮಾಡಿ... ಪ್ರತಿಯೊಬ್ಬ ಮಹಿಳೆ, ಪುರುಷ ಮತ್ತು ಮಗು - ಜಾತಿ, ಕುಲ ಗೋತ್ರಗಳ ಭೇದವಿಲ್ಲದೆ, ದುರ್ಬಲ - ಸಬಲ ಎಂಬ ವ್ಯತ್ಯಾಸವಿಲ್ಲದೆ, ಉಚ್ಚ-ನೀಚ ಎಂದು ನೋಡದೆ, ಪ್ರತಿಯೊಬ್ಬರಲ್ಲೂ ಅನಂತಾತ್ಮನಿದ್ದಾನೆಂದು ಅರಿಯಿರಿ’’
(ಕೃತಿ ಶ್ರೇಣಿ: ಸಂಪುಟ- 5)
***

ಯಾವ ಸಭಾ ಸಮಿತಿಗಳು ಮನುಷ್ಯರಲ್ಲಿ ಸಹಾನುಭೂತಿಯನ್ನು ತೋರದೆ, ತಮ್ಮ ಅಣ್ಣತಮ್ಮಂದಿರು ಹೊಟ್ಟೆಗಿಲ್ಲದೆ ಸಾಯುತ್ತಿದ್ದಾರೆಂದು ನೋಡಿಯೂ ಅವರ ಜೀವವನ್ನು ಉಳಿಸುವುದಕ್ಕಾಗಿ ಒಂದು ತುತ್ತು ಅನ್ನವನ್ನು ಕೊಡದೆ ಪಶುಗಳ ರಕ್ಷಣೆಗಾಗಿ ರಾಶಿ ರಾಶಿ ಅನ್ನವನ್ನು ದಾನ ಮಾಡುತ್ತವೆಯೋ ಅವುಗಳೊಡನೆ ನನಗೆ ಸ್ವಲ್ಪವೂ ಸಹಾನುಭೂತಿಯಿಲ್ಲ. ಅವುಗಳಿಂದ ಸಮಾಜಕ್ಕೆ ಹೆಚ್ಚು ಉಪಕಾರವಾಗುತ್ತದೆಂದು ನಾನು ನಂಬುವುದಿಲ್ಲ. ಕರ್ಮಫಲದಿಂದ ಜನರು ಸಾಯುತ್ತಾರೆ ಎಂದು ಕರ್ಮದ ನೆವವನ್ನು ಹೇಳುವುದಾದರೆ ಜಗತ್ತಿನ ಯಾವ ವಿಷಯದಲ್ಲಿಯೂ ಕೆಲಸ ಮಾಡುವುದೇ ನಿಷ್ಪ್ರಯೋಜಕವೆಂದು ಒಟ್ಟಿಗೆ ನಿಶ್ಚಯಿಸಬಹುದು. ನಮ್ಮ ಪಶುರಕ್ಷಣೆಯ ಕೆಲಸವೂ ಆಮೇಲೆ ನಡೆಯುವುದಿಲ್ಲ. ಈ ಕೆಲಸದ ವಿಚಾರದಲ್ಲಿಯೂ ಗೋಮಾತೆಗಳು ತಮ್ಮ ತಮ್ಮ ಕರ್ಮಫಲದಿಂದಲೇ ಕಟುಕರ ಕೈಗೆ ಹೋಗುತ್ತವೆ ಮತ್ತು ಸಾಯುತ್ತವೆ, ಆದ್ದರಿಂದ ಅದಕ್ಕೆ ನಾವು ಏನೂ ಮಾಡಬೇಕಾದ ಅವಶ್ಯಕತೆಯಿಲ್ಲ ಎಂದು ಹೇಳಬಹುದು’’
 (ರಾಮಕೃಷ್ಣ ಮಠ ಪ್ರಕಟಿಸಿದ ‘ಸ್ವಾಮಿ ವಿವೇಕಾನಂದ ಗ್ರಂಥಾವಳಿ’ -10ನೇ ಸಂಪುಟ)

share
Next Story
X