Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾರಾ ಅಬೂಬಕರ್ ಗೆ ಅಂತಿಮ ಗೌರವ ಸಲ್ಲಿಸದೆ...

ಸಾರಾ ಅಬೂಬಕರ್ ಗೆ ಅಂತಿಮ ಗೌರವ ಸಲ್ಲಿಸದೆ ಅಸಹಿಷ್ಣುತೆ ತೋರಲಾಗಿದೆ: ಜಿಲ್ಲಾಡಳಿತ, ಜನಪ್ರತಿನಿಧಿಗಳ ನಡೆಗೆ ಖಂಡನೆ

12 Jan 2023 1:19 PM IST
share
ಸಾರಾ ಅಬೂಬಕರ್ ಗೆ ಅಂತಿಮ ಗೌರವ ಸಲ್ಲಿಸದೆ ಅಸಹಿಷ್ಣುತೆ ತೋರಲಾಗಿದೆ: ಜಿಲ್ಲಾಡಳಿತ, ಜನಪ್ರತಿನಿಧಿಗಳ ನಡೆಗೆ ಖಂಡನೆ

ಮಂಗಳೂರು, ಜ.12: ಕನ್ನಡದ ಪ್ರಖ್ಯಾತ ಬರಹಗಾರ್ತಿ ಸಾರಾ ಅಬೂಬಕರ್ ನಿಧನ ಹೊಂದಿದ ಸಂದರ್ಭ ಸರಿಯಾದ ಗೌರವ ಸಲ್ಲಿಸದೆ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಕಡೆಗಣಿಸಿರುವುದು ಖೇದಕರ. ಸರಕಾರದ ಈ ನಡೆಯನ್ನು ಹಲವು ಗಣ್ಯರು ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆಗೊಳಿಸಿರುವ ಬಿ.ಎಂ.ರೋಹಿಣಿ, ಪ್ರೊ.ನರೇಂದ್ರ ನಾಯಕ್,  ಟಿ.ಆರ್.ಭಟ್,  ಚಂದ್ರಕಲಾ ನಂದಾವರ, ಪ್ರೊ. ಚಂದ್ರ ಪೂಜಾರಿ, ಪ್ರೊ.ಪಟ್ಟಾಭಿರಾಮ ಸೋಮಯಾಜಿ,  ಎಂ.ದೇವದಾಸ್,  ಬಿ.ಎಂ.ಹನೀಫ್,  ವಾಸುದೇವ ಉಚ್ಚಿಲ,  ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ,  ಗುಲಾಬಿ ಬಿಳಿಮಲೆ,  ಪ್ರೊ.ಕೆ.ರಾಜೇಂದ್ರ ಉಡುಪ,  ಮೋಹನ್ ಪಿ. ವಿ.,  ಐ.ಕೆ.ಬೊಳುವಾರು,  ಯಶವಂತ ಮರೋಳಿ,  ಮುನೀರ್ ಕಾಟಿಪಳ್ಳ,  ಡಾ.ಕೃಷ್ಣಪ್ಪ ಕೊಂಚಾಡಿ, ಶ್ರೀನಿವಾಸ ಕಾರ್ಕಳ ಅವರು ಸಾರಾ ಅಬೂಬಕರ್ ಪ್ರಖ್ಯಾತ ಕತೆಗಾರರು, ಬರಹಗಾರರು ಎಂಬಲ್ಲಿಗೆ ಅವರ ಪ್ರಾಮುಖ್ಯತೆ ಮುಗಿಯುವುದಿಲ್ಲ. ಕ‌ರ್ನಾಟಕದ ಮುಸ್ಲಿಮ್ ಸಮುದಾಯ ಕನ್ನಡದಲ್ಲಿ ಸಾಹಿತ್ಯ ಕೃಷಿ ನಡೆಸುವುದೇ ಅಪರೂಪವಾಗಿದ್ದ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ಸಮಾಜದ ಕಂದಾಚಾರ, ತನ್ನದೇ ಸಮುದಾಯದ ಹೆಣ್ಣು ಮಕ್ಕಳ ಸಂಕಟಗಳನ್ನು ಕತೆಯಾಗಿಸಿದ್ದು ಸಣ್ಣ ಸಾಧನೆಯೇನೂ ಅಲ್ಲ. ಅಂತಹ ಬರವಣಿಗೆಗಳ ಕಾರಣಕ್ಕೆ ಅವರು ಎದುರಿಸಿದ ದಾಳಿ, ದಬ್ಬಾಳಿಕೆಗಳೂ ಸಣ್ಣದಲ್ಲ. ಬರವಣಿಗೆಯ ಜೊತೆಗೆ ಮಹಿಳಾಪರ ಹೋರಾಟಗಳಲ್ಲಿಯೂ ತೊಡಗಿಸಿಕೊಂಡ ಹೆಗ್ಗಳಿಕೆ ಸಾರಾ ಅವರದ್ದು. ಅವರ ಕತೆ, ಕಾದಂಬರಿಗಳು ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದು ಮಾತ್ರವಲ್ಲ, ಕ‌ನ್ನಡದ ಹಿರಿಮೆಯನ್ನು ಹೊರನಾಡಿನಲ್ಲಿಯೂ ಎತ್ತಿ ಹಿಡಿದಿದೆ. ತನ್ನ ಸಾಧನೆಗಾಗಿ ಅವರು ಅರ್ಹವಾಗಿಯೇ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಇಂತಹ ಗಣ್ಯ ಬರಹಗಾರ್ತಿ, ಲೇಖಕಿ ಅಗಲಿದ ಸಂದರ್ಭ ಸಹಜವಾಗಿಯೇ ಅವರಿಗೆ ಸರಕಾರಿ ಗೌರವಗಳು ಸಲ್ಲಬೇಕಿತ್ತು. ಆದರೆ ಸರಕಾರದ ಯಾವುದೇ ಅಂತಿಮ ಗೌರವಗಳು  ಅವರಿಗೆ ಸಲ್ಲಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಸಾರಾ ಅಬೂಬಕರ್ ಅವರಿಗೆ ಸರಕಾರದ, ಜಿಲ್ಲಾಡಳಿತದ ಪ್ರತಿನಿಧಿಗಳು ಅಧಿಕೃತ ಗೌರವ ಸಲ್ಲಿಸಲಿಲ್ಲ. ಉಸ್ತುವಾರಿ ಸಚಿವರು, ಶಾಸಕರುಗಳು ನಗರದಲ್ಲೇ ಇದ್ದರೂ ಅಂತಿಮ ದರ್ಶನ ಪಡೆಯಲಿಲ್ಲ. ಇದು ಅಪಾರ ನೋವಿನ ವಿಚಾರವಾಗಿದೆ.. ಈ ಕಡೆಗಣನೆ ಆಕಸ್ಮಿಕ ಆಗಿರಲಾರದು. ಇದು ಸರಕಾರ ಪ್ರಗತಿಪರ, ಜಾತ್ಯತೀತ ವಿಚಾರಗಳು, ಸಾಹಿತಿ, ಬುದ್ದಿಜೀವಿಗಳ ಕುರಿತು ಇತ್ತೀಚೆಗೆ ಹೊಂದಿರುವ ಅಸಹಿಷ್ಣು ಧೋರಣೆಗಳು, ಕೋಮುವಾದಿ ದೃಷ್ಟಿಕೋನದ ಭಾಗವಾದ ನಿಲುವೇ ಆಗಿದೆ ಎಂಬಂತೆ ತೋರುತ್ತದೆ. ರಕಾರ, ಜಿಲ್ಲಾಡಳಿತ, ಜ‌ನಪ್ರತಿನಿಧಿಗಳ ಈ ಧೋರಣೆ ಆಘಾತಕಾರಿಯಾಗಿದ್ದು, ಕ‌ನ್ನಡನಾಡಿನ ವಿಶಾಲ, ಉದಾರ ಪ್ರಜ್ಞೆಗೆ ವಿರುದ್ದವಾಗಿದೆ, ಇದ‌‌ನ್ನು ಬಲವಾಗಿ ಖಂಡಿಸುತ್ತೇವೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
Next Story
X