Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಕಕಾಲಕ್ಕೆ ಬಿಡುಗಡೆಯಾದ ಖ್ಯಾತ ನಟರ...

ಏಕಕಾಲಕ್ಕೆ ಬಿಡುಗಡೆಯಾದ ಖ್ಯಾತ ನಟರ ಚಿತ್ರ: ಅಜಿತ್ ಮತ್ತು ವಿಜಯ್ ಅಭಿಮಾನಿಗಳ ನಡುವೆ ಹೊಡೆದಾಟ

12 Jan 2023 1:31 PM IST
share
ಏಕಕಾಲಕ್ಕೆ ಬಿಡುಗಡೆಯಾದ ಖ್ಯಾತ ನಟರ ಚಿತ್ರ: ಅಜಿತ್ ಮತ್ತು ವಿಜಯ್ ಅಭಿಮಾನಿಗಳ ನಡುವೆ ಹೊಡೆದಾಟ

ಮದುರೈ: ತಮಿಳುನಾಡಿನ ಕೊಯಂಬೆಡುನಲ್ಲಿರುವ ರೋಹಿಣಿ ಚಿತ್ರಮಂದಿರದೆದುರು ಕಳೆದ ಮಧ್ಯರಾತ್ರಿ ತಮಿಳು ನಟರಾದ ಅಜಿತ್ ಕುಮಾರ್ (Ajith Kumar) ಮತ್ತು ದಳಪತಿ ವಿಜಯ್ (Thalapathy Vijay) ಅಭಿಮಾನಿಗಳ ನಡುವೆ ಹೊಡೆದಾಟ ನಡೆದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು ಎಂದು ndtv.com ವರದಿ ಮಾಡಿದೆ.

ದಕ್ಷಿಣ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್‌ಗಳಾದ ಅಜಿತ್ ಕುಮಾರ್ ನಾಯಕ ನಟರಾಗಿ ಅಭಿನಯಿಸಿರುವ 'ತುನಿವು' (Thunivu) ಮತ್ತು ದಳಪತಿ ವಿಜಯ್ ನಾಯಕತ್ವದ 'ವಾರಿಸು' (Varisu) ಚಿತ್ರಗಳು ಗುರುವಾರ ಏಕಕಾಲಕ್ಕೆ ಬಿಡುಗಡೆಗೊಂಡಿವೆ. ಎಂಟು ವರ್ಷಗಳ ನಂತರ ಈ ಇಬ್ಬರು ಸೂಪರ್‌ಸ್ಟಾರ್‌ಗಳು ನಟಿಸಿರುವ ಚಿತ್ರಗಳು ಏಕಕಾಲಕ್ಕೆ ಬಿಡುಗಡೆಗೊಂಡಿವೆ.

ಈ ಸಂದರ್ಭದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಸೃಷ್ಟಿಯಾಗಿ, ಉಭಯ ನಟರ ಅಭಿಮಾನಿಗಳು ಪರಸ್ಪರರ ಚಿತ್ರಗಳ ಭಿತ್ತಿಚಿತ್ರಗಳನ್ನು ಹರಿದು, ಚೂರುಚೂರು ಮಾಡಿದರು. ಮೊದಲು ವಿಜಯ್ ಅಭಿಮಾನಿಯೊಬ್ಬ ಅಜಿತ್‌ರ 'ತುನಿವು' ಚಿತ್ರದ ಭಿತ್ತಿಚಿತ್ರವನ್ನು ಹರಿದೆಸೆದರೆ, ನಂತರ ಅಜಿತ್ ಅಭಿಮಾನಿಯೊಬ್ಬ 'ವಾರಿಸು' ಚಿತ್ರದ ಭಿತ್ತಿ ಚಿತ್ರವನ್ನು ಕಿತ್ತೆಸೆದ ಎಂದು ವರದಿಯಾಗಿದೆ.

ಚಿತ್ರಮಂದಿರದ ಹೊರಗೆ ನಡೆದ ಘಟನೆಯ ವಿಡಿಯೊ ವೈರಲ್ ಆಗಿದ್ದು, ಎರಡು ಗುಂಪಿಗೆ ಸೇರಿದ ಅಭಿಮಾನಿಗಳು ಹಲವಾರು ಪ್ರದೇಶಗಳಲ್ಲಿ ಭಿತ್ತಿಫಲಕಗಳಿಗೆ ಹಾನಿ ಮಾಡುತ್ತಿರುವುದು ಅದರಲ್ಲಿ ಕಂಡು ಬಂದಿದೆ. ಉದ್ರಿಕ್ತ ಅಭಿಮಾನಿಗಳನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ, ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ 'ತುನಿವು' ಚಿತ್ರದ ಬಿಡುಗಡೆಯಿಂದ ರೋಮಾಂಚಿತನಾಗಿದ್ದ ಭರತ್ ಕುಮಾರ್ ಎಂಬ ಅಜಿತ್ ಅಭಿಮಾನಿಯೊಬ್ಬ ರೋಹಿಣಿ ಚಿತ್ರಮಂದಿರದ ಬಳಿಯ ಪೂನಮಲ್ಲೀ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಯಿಂದ ಕೆಳಗೆ ಜಿಗಿದಿದ್ದರಿಂದ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಚ್.ವಿನೋದ್ ನಿರ್ದೇಶಿಸಿರುವ 'ತುನಿವು' ಥ್ರಿಲ್ಲರ್ ಸಿನಿಮಾ ಆಗಿದ್ದು, ಅಜಿತ್ ಕುಮಾರ್, ಮಂಜು ವಾರಿಯರ್, ಜಾನ್ ಕೊಕ್ಕೆನ್, ಸಮುತಿರಕಣಿ ಮತ್ತು ಜಿ.ಎಂ.ಸುಂದರ್ ತಾರಾಗಣದಲ್ಲಿದ್ದಾರೆ. ಚಿತ್ರವನ್ನು ಬೋನಿ ಕಪೂರ್ ನಿರ್ಮಿಸಿದ್ದಾರೆ.

ವಿಜಯ್ ನಾಯಕ ನಟರಾಗಿರುವ 'ವಾರಿಸು' ಕೌಟುಂಬಿಕ ಸಿನಿಮಾ ಆಗಿದ್ದು, ರಶ್ಮಿಕಾ ಮಂದಣ್ಣ, ಪ್ರಕಾಶ್ ರಾಜ್, ಖುಷ್ಬು, ಪ್ರಭು, ಯೋಗಿ ಬಾಬು ಮತ್ತು ಸಂಗೀತಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಚಿತ್ರವನ್ನು ವಂಶಿ ಪೈದಿಪಲ್ಲಿ ನಿರ್ದೇಶಿಸಿದ್ದು, ದಿಲ್ ರಾಜು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಆಸ್ಕರ್ ಪ್ರಶಸ್ತಿ ಸುತ್ತಿಗೆ ಕಾಶ್ಮೀರ್ ಫೈಲ್ಸ್ ಎಂದ ವಿವೇಕ್ ಅಗ್ನಿಹೋತ್ರಿ: ಸತ್ಯಾಂಶ ಏನು?

#WATCH | Tamil Nadu: Fans of Ajith Kumar tore posters of Vijay starrer #Varisu & fans of Vijay tore posters of Ajith Kumar starrer #Thunivu outside a movie theatre in Chennai

Both films have released on the same day after 8 yrs, people gathered in large numbers to watch them. pic.twitter.com/rahM76Gcjk

— ANI (@ANI) January 11, 2023
share
Next Story
X