Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ-ನವಿ ಮುಂಬೈ ಸಂಪರ್ಕಿಸುವ ಭಾರತದ...

ಮುಂಬೈ-ನವಿ ಮುಂಬೈ ಸಂಪರ್ಕಿಸುವ ಭಾರತದ ಅತಿ ಉದ್ದದ ಸಮುದ್ರ ಸೇತುವೆ ವರ್ಷಾಂತ್ಯಕ್ಕೆ ಲೋಕಾರ್ಪಣೆ: ಶಿಂಧೆ

12 Jan 2023 3:32 PM IST
share
ಮುಂಬೈ-ನವಿ ಮುಂಬೈ ಸಂಪರ್ಕಿಸುವ ಭಾರತದ ಅತಿ ಉದ್ದದ ಸಮುದ್ರ ಸೇತುವೆ ವರ್ಷಾಂತ್ಯಕ್ಕೆ ಲೋಕಾರ್ಪಣೆ: ಶಿಂಧೆ

ಮುಂಬೈ, ಜ. 12: ದೇಶದ ಆರ್ಥಿಕ ರಾಜಧಾನಿ ಮುಂಬೈ ಮತ್ತು ಅದರ ಉಪನಗರ ನವಿ ಮುಂಬೈ ನಡುವಿನ ಪ್ರಯಾಣ ಅವಧಿಯನ್ನು ಸಮುದ್ರ ಸೇತುವೆಯು ಇನ್ನು ಕೇವಲ 15 ನಿಮಿಷಕ್ಕೆ ಇಳಿಸಲಿದೆ. ಈಗ ಈ ಪ್ರಯಾಣಕ್ಕೆ ಮೂರು ಗಂಟೆ ತಗಲುತ್ತದೆ.

22 ಕಿ.ಮೀ. ಉದ್ದದ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ (ಎಮ್ಟಿಎಚ್ಎಲ್) ಸಮುದ್ರ ಸೇತುವೆಯು ಈ ವರ್ಷದ ನವೆಂಬರ್ನಲ್ಲಿ ಸಾರ್ವಜನಿಕರ ಬಳಕೆಗೆ ತೆರೆಯುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಇದು ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ ಆಗಲಿದೆ. ಇದು ದಕ್ಷಿಣ ಮುಂಬೈಯನ್ನು ನವಿ ಮುಂಬೈ ಮತ್ತು ರಾಯಗಡದೊಂದಿಗೆ ಸಂಪರ್ಕಿಸುತ್ತದೆ.

ಈ ಸೇತುವೆಯು ಓಪನ್ ರೋಡ್ ಟಾಲಿಂಗ್ (ಒಆರ್ಟಿ) ವ್ಯವಸ್ಥೆಯನ್ನು ಹೊಂದಿದ ದೇಶದ ಮೊದಲ ಸೇತುವೆಯಾಗಲಿದೆ. ಈ ತಂತ್ರಜ್ಞಾನವು ಸಿಂಗಾಪುರದಂಥ ದೇಶಗಳಲ್ಲಿ ಬಳಕೆಯಲ್ಲಿದೆ. ಈ ವ್ಯವಸ್ಥೆಯಲ್ಲಿ ಟಾಲ್ ಪಾವತಿಸಲಿಕ್ಕಾಗಿ ವಾಹನಗಳು ಎಲ್ಲಿಯೂ ನಿಲ್ಲಬೇಕಾಗಿಲ್ಲ. ಈ ಸೇತುವೆಯ ಒಟ್ಟು 22 ಕಿ.ಮೀ. ಉದ್ದದ ಪೈಕಿ 16.5 ಕಿ.ಮೀ. ಸಮುದ್ರದ ಮೂಲಕ ಹಾದು ಹೋಗುತ್ತದೆ.

ಟ್ರಾನ್ಸ್-ಹಾರ್ಬರ್ ಲಿಂಕ್ ಸೇತುವೆಯನ್ನು ಈಗ ನಿರ್ಮಾಣ ಹಂತದಲ್ಲಿರುವ ಅಷ್ಟಪಥ ಕರಾವಳಿ ಹೆದ್ದಾರಿಯೊಂದಿಗೆ ಸಂಪರ್ಕಿಸಲಾಗುವುದು. ಈ ಹೆದ್ದಾರಿಯು ಮರೀನ್ ಡ್ರೈವ್ನಿಂದ ಆರಂಭಗೊಂಡು ಬಾಂದ್ರಾ-ವರ್ಲಿ ಸೀ ಲಿಂಕ್ನ ವರ್ಲಿ ತುದಿಯಲ್ಲಿ ಕೊನೆಗೊಳ್ಳುತ್ತದೆ.

‘‘ಎಮ್ಟಿಎಚ್ಎಲ್ ತುಂಬಾ ಇಂಧನವನ್ನು ಉಳಿಸುತ್ತದೆ. ಮೂರು ಗಂಟೆಯ ಪ್ರಯಾಣ ಅವಧಿಯನ್ನು ಕೆಲವೇ ನಿಮಿಷಗಳಿಗೆ ಇಳಿಸುವ ಮೂಲಕ ಅದು ವಾಯು ಮಾಲಿನ್ಯವನ್ನು ತಗ್ಗಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದೆ’’ ಎಂದು ಏಕನಾಥ್ ಶಿಂಧೆ ಹೇಳಿದರು.

ಮುಖ್ಯಾಂಶಗಳು
► 22 ಕಿ.ಮೀ. ಉದ್ದದ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ (ಎಮ್ಟಿಎಚ್ಎಲ್) ಸಮುದ್ರ ಸೇತುವೆ
► 3 ಗಂಟೆಯ ಪ್ರಯಾಣ ಅವಧಿ 15 ನಿಮಿಷಕ್ಕೆ ಇಳಿಕೆ
► ದಕ್ಷಿಣ ಮುಂಬೈಯನ್ನು ನವಿ ಮುಂಬೈ ಮತ್ತು ರಾಯಗಡದೊಂದಿಗೆ ಸಂಪರ್ಕಿಸುತ್ತದೆ
► ಸೇತುವೆಯ ಒಟ್ಟು 22 ಕಿ.ಮೀ. ಉದ್ದದ ಪೈಕಿ 16.5 ಕಿ.ಮೀ. ಸಮುದ್ರದಲ್ಲಿ
► ಈ ವರ್ಷದ ನವೆಂಬರ್ನಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತ

share
Next Story
X